Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಆಹ್ಲಾದತೆ ಪಸರಿಸಿದ ಆರತಿಯ ನಾಟ್ಯೋಲ್ಲಾಸ

    December 12, 2025

    ಮಡಿಕೇರಿಯ ಹಿರಿಯರ ಕವಿಗೋಷ್ಠಿಯಲ್ಲಿ ಜೀವನೋತ್ಸಾಹ ತುಂಬಿದ ಹಿರಿಯರ ಕವನ ವಾಚನ

    December 12, 2025

    ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ ಪ್ರದಾನ

    December 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ
    News

    ಮಂಗಳೂರಿನ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದಿಂದ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ

    February 28, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    28 ಫೆಬ್ರವರಿ 2023, ಮಂಗಳೂರು: ‘ಹಿರಿಯ ವಿದ್ವನ್ಮಣಿಗಳ ಕಣ್ಮರೆ ನಮ್ಮ ತಲೆಮಾರಿನ ದುರಂತ’: ಕುಕ್ಕುವಳ್ಳಿ
    ‘ಕಲೆ, ಸಾಹಿತ್ಯ, ಸಂಸ್ಕೃತಿಗಳ ಪ್ರಸರಣದಲ್ಲಿ ಹಿರಿಯರ ಕೊಡುಗೆ ಅಪಾರ. ಇತ್ತೀಚಿನ ವರ್ಷಗಳಲ್ಲಿ ಅಂತಹ ಹಲವು ಹಿರಿಯ ವಿದ್ಮನ್ಮಣಿಗಳು ಕಣ್ಮರೆಯಾದುದು ನಮ್ಮ ತಲೆಮಾರಿನ ದೊಡ್ಡ ದುರಂತ’ ಎಂದು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಭಾಸ್ಕರ ರೈ‌ ಕುಕ್ಕುವಳ್ಳಿ ಹೇಳಿದ್ದಾರೆ. ಮಂಗಳೂರಿನ ಕೊಡಿಯಾಲಬೈಲ್ ‘ಶಿವಾರ್ಪಣಂ’ ವಠಾರದಲ್ಲಿ ಜರಗಿದ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇತ್ತೀಚೆಗೆ ನಿಧನರಾದ ಬಲಿಪ ನಾರಾಯಣ ಭಾಗವತ ಮತ್ತು ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.
    ‘ಬಲಿಪ ಭಾಗವತರು ಮತ್ತು ಮುದ್ರಾಡಿಯವರು ಇಬ್ಬರೂ ತೀರಾ ಸಾತ್ವಿಕ ಸ್ವಭಾವದ ವಿದ್ವಾಂಸರು. ಯಕ್ಷಗಾನ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆ ಗಣನೀಯ. ಅವರ ನಿಧನದಿಂದ ನಾಡಿನ ವಿದ್ವತ್ ಪರಂಪರೆಯ ಹಿರಿಯ ಕೊಂಡಿಗಳು ಕಳಚಿ ಹೋದಂತಾಯಿತು’ ಎಂದವರು ವಿಷಾದ ವ್ಯಕ್ತಪಡಿಸಿದರು. ಬಳಿಕ ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಗಣ್ಯರಿಗೆ ಸದ್ಗತಿ ಕೋರಲಾಯಿತು.
    ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಪ್ರಾರ್ಥಿಸಿದರು. ಜೊತೆ ಕಾರ್ಯದರ್ಶಿಗಳಾದ ಸುಮಾ ಪ್ರಸಾದ್ ಸ್ವಾಗತಿಸಿ, ವಿಜಯಲಕ್ಷ್ಮಿ ಕಟೀಲ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇ ಕಳ ನಿರೂಪಿಸಿದರು. ಪ್ರಮುಖರಾದ ವಾಮನ್ ಬಿ. ಮೈಂದನ್, ಪಿ.ಡಿ.ಶೆಟ್ಟಿ, ಸುವಾಸಿನಿ ಬಬ್ಬು ಕಟ್ಟೆ, ವಿಜಯಲಕ್ಷ್ಮಿ ಬಿ.ಶೆಟ್ಟಿ ಗೀತಾ ಜ್ಯುಡಿತ್ ಸಲ್ದಾನ ಮೊದಲಾದವರು ಉಪಸ್ಥಿತರಿದ್ದರು

    ಎಪ್ರಿಲ್ ನಲ್ಲಿ ‘ನಮ್ಮ ಆಬ್ಬಕ್ಕ – 2023’ಸಾಂಸ್ಕೃತಿಕ ಉತ್ಸವ:
    ಪ್ರತಿಷ್ಠಾನದ ವತಿಯಿಂದ ಈ ಬಾರಿಯ ‘ನಮ್ಮ ಅಬ್ಬಕ್ಕ’ ಸಾಂಸ್ಕೃತಿಕ ಉತ್ಸವವನ್ನು ಬರುವ ಏಪ್ರಿಲ್ ತಿಂಗಳಲ್ಲಿ ಏರ್ಪಡಿಸುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಸಂದರ್ಭ ವಿವಿಧ ವಯೋಮಾನದವರಿಗೆ ಸಾಂಸ್ಕೃತಿಕ ಸ್ಪರ್ಧೆಗಳು, ರಾಣಿ ಅಬ್ಬಕ್ಕ ಮಹಿಳಾ ಸಮಾವೇಶ, ಶ್ರೇಷ್ಠ ಸಾಧಕರೊಬ್ಬರಿಗೆ ಅಬ್ಬಕ್ಕ ಸೇವಾ ಪ್ರಶಸ್ತಿ ಪ್ರದಾನ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
    Next Article ವಿವಿಧ ರಾಜ್ಯಗಳ ಸಾಧಕರಿಗೆ “ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ” ಪ್ರದಾನ
    roovari

    Add Comment Cancel Reply


    Related Posts

    ಸ್ವರ, ತಾಳ, ಲಯಗಳ ಮಿಲನವೇ ಸಂಗೀತ – ನಿವೃತ್ತ ಡಿವೈಎಸ್ಪಿ ಟಿ.ಪಿ. ರಂಜಿತ್

    November 27, 2025

    ನೃತ್ಯಾಂತರಂಗದಲ್ಲಿ ಅಮೇರಿಕಾದ ಕಲಾವಿದೆಯಿಂದ ಅದ್ಭುತ ಕೂಚಿಪುಡಿ ನೃತ್ಯ

    November 27, 2025

    ಖ್ಯಾತ ಯಕ್ಷಗಾನ ಪ್ರಸಂಗಕರ್ತ, ತಾಳಮದ್ದಳೆ ಅರ್ಥಧಾರಿ, ಹವ್ಯಾಸಿ ಸ್ತ್ರೀ ವೇಷದಾರಿ ಕಂದಾವನ ರಘುರಾಮ ಶೆಟ್ಟಿ ನಿಧನ

    November 27, 2025

    ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ “ಕೃಷ್ಣಾನಂದ ಲಹರಿ”

    November 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.