Subscribe to Updates

    Get the latest creative news from FooBar about art, design and business.

    What's Hot

    ವಿಭಾ ಸಾಹಿತ್ಯ ಪ್ರಶಸ್ತಿಗೆ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಕೃತಿ ಆಯ್ಕೆ

    October 3, 2025

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅಗಲಿಕೆಗೆ ಶ್ರದ್ಧಾಂಜಲಿ
    Commemoration

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕದಿಂದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅಗಲಿಕೆಗೆ ಶ್ರದ್ಧಾಂಜಲಿ

    September 27, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಆಲೂರು : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕ ಪಟ್ಟಣದ ಬಿಲಿವಿಯರ್ಸ್ಲ ಚರ್ಚಿನಲ್ಲಿ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಅಗಲಿಕೆಯ ಹಿನ್ನೆಲೆಯಲ್ಲಿ ದಿನಾಂಕ 26 ಸೆಪ್ಟೆಂಬರ್ 2025ರಂದು ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

    ಈ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ “ಕನ್ನಡ ಸಾಹಿತ್ಯದ ಕಾದಂಬರಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿ ಶ್ರೇಷ್ಠಾತಿಶ್ರೇಷ್ಠ ಕೃತಿಗಳನ್ನು ನೀಡುವುದರ ಮೂಲಕ ಕನ್ನಡದ ಅದರಲ್ಲೂ ಹಾಸನದ ನೆಲದನಿಯ ಕಂಪನ್ನು ರಾಜ್ಯ, ದೇಶ, ಹೊರದೇಶಗಳಲ್ಲಿಯೂ ಪಸರಿಸುವುದರ ಮುಖೇನ ನಾಡುನುಡಿಗೆ ಕೀರ್ತಿ ತಂದ ಅಪ್ರತಿಮ ಬರಹಗಾರ ಎಸ್.ಎಲ್. ಭೈರಪ್ಪ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೆಶಿವರದಲ್ಲಿ ಜನಿಸಿ ಬಾಲ್ಯದಲ್ಲಿಯೇ ಕಡುಕಷ್ಟದಲ್ಲಿ ಬೆಳೆದು ಉನ್ನತವ್ಯಾಸಂಗಗೈದು ಮೈಸೂರಿಗೆ ತೆರಳಿ ನೆಲೆನಿಂತು ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ಕಾದಂಬರಿ ವಿಭಾಗದಲ್ಲಿ ಉತ್ತಮೋತ್ತಮ ಕೃತಿಗಳನ್ನು ನೀಡುವುದರ ಮುಖೇನ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು. ಇವರ ‘ನಾಯಿ ನೆರಳು’, ‘ವಂಶವೃಕ್ಷ’, ‘ಮತದಾನ’, ‘ತಬ್ಬಲಿಯು ನೀನಾದೆ ಮಗನೆ’ ನಾಲ್ಕು ಕಾದಂಬರಿಗಳು ಸಿನೆಮಾ ಆಗಿ ಮನಗೆದ್ದಿವೆ. ‘ದಾಟು’, ‘ಗೃಹಭಂಗ’ ದಾರವಾಹಿಗಳಾಗಿ ಖ್ಯಾತಿ ಪಡೆದರೆ, ‘ಪರ್ವ’ ನಾಟಕವಾಗಿ ಮನೆಸೂರೆಗೊಂಡಿದೆ. ಭಾರತೀಯ ಬಹುತೇಕ ಇತರೆ ಭಾಷೆಗಳಿಗೆ ಇವರ ಕಾದಂಬರಿಗಳು ತರ್ಜುಮೆಗೊಂಡು ಅಸಂಖ್ಯಾತ ಓದುಗರನ್ನು ತಲುಪಿದ್ದಾರೆ. ಭೈರಪ್ಪನವರ ಅಗಲಿಕೆ ಕನ್ನಡ ಕಾದಂಬರಿ ಕ್ಷೇತ್ರಕ್ಕೆ ಕತ್ತಲು ಕವಿದಂತಾಗಿದೆ” ಎಂದರು.

    ಶಿಕ್ಷಕ ಕೆ.ಎಲ್. ವೆಂಕಟರಂಗಯ್ಯ ಮಾತನಾಡಿ “ನಾವು ಚಿಕ್ಕ ವಯಸ್ಸಿನಿಂದಲೇ ಭೈರಪ್ಪನವರ ಕಾದಂಬರಿಗಳನ್ನು ಓದಿಕೊಂಡು, ಅವರ ಧಾರವಾಹಿಗಳನ್ನು ವೀಕ್ಷಿಸಿಕೊಂಡು ಬೆಳೆದವರು. ಮುಂದಿನ ಹತ್ತಾರು ತಲೆಮಾರು ಬಂದರೂ ಇಂತಹ ಅದ್ಭುತವಾದ ಕಾದಂಬರಿಕಾರನನ್ನು ಕಾಣಲು ಸಾಧ್ಯವಿಲ್ಲವೇನೋ. ಗ್ರಾಮೀಣ ಬದುಕನ್ನು ತಮ್ಮ ಕಾದಂಬರಿಗಳಲ್ಲಿ ನೈಜವಾಗಿ ಚಿತ್ರಿಸುತ್ತಿದ್ದರು. ಅವರ ಬರವಣಿಗೆ ಶೈಲಿ ಸಾಮಾಜಿಕ ಸ್ಥಿತ್ಯಂತರಗಳಿಗೆ ಸಾಕ್ಷಿಯಾಗಿ ನಿಲ್ಲುತ್ತದೆ” ಎಂದರು.

    ಗ್ರಂಥಾಲಯ ಸಹಾಯಕರಾದ ಟಿ.ಕೆ. ನಾಗರಾಜ್ ಮಾತನಾಡಿ “ವಾರನ್ನದಲ್ಲಿ ಬೆಳೆದ ಭೈರಪ್ಪನವರಿಗೆ ಗ್ರಾಮೀಣ ಹಾಗೂ ಕಡುಬಡತನದ ಬದುಕಿನ ಸ್ಪರ್ಶವಿತ್ತು. ಬೆಂದು ಬಸವಳಿದು ಉನ್ನತ ಹಂತಕ್ಕೆ ತಲುಪಿದ್ದರಿಂದಲೇ ಅವರ ಕಾದಂಬರಿಗಳಲ್ಲಿ ತಳ ಸಮುದಾಯದ ತಲ್ಲಣಗಳನ್ನು ಹೃದ್ಯವಾಗಿ ಚಿತ್ರಿಸಿದ್ದಾರೆ” ಎಂದರು.

    ಬಿಲಿವಿಯರ್ಸ್ ಚರ್ಚಿನ ಫಾದರ್ ಡಿ.ಸಿ. ಬಸವರಾಜ್ ಮಾತನಾಡಿ “ಪ್ರತಿ ವ್ಯಕ್ತಿ ಹುಟ್ಟಿದ ಮೇಲೆ ಸಾಯಲೇಬೇಕು, ಆದರೆ ಹುಟ್ಟು ಸಾವಿನ ನಡುವಿರುವ ಬದುಕಿನಲ್ಲಿ ಏನನ್ನು ಚಿರಸ್ಥಾಯಿಯನ್ನಾಗಿಸಿದ್ದೇವೆ ಎನ್ನುವುದು ಬಹಳ ಮುಖ್ಯ. ಈ ದಿಸೆಯಲ್ಲಿ ಭೈರಪ್ಪನವರು ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ಸುವರ್ಣಾಕ್ಷರಗಳಲ್ಲಿ ಬಿಂಬಿತವಾಗಿದ್ದಾರೆ. ಅವರು ಕೊಟ್ಟ ಬರವಣಿಗೆ ಎಷ್ಟೇ ಸಹಸ್ರಾರು ವರ್ಷಗಳೂ ಗತಿಸಿದರು ಅವರ ಸಾಹಿತ್ಯ ಧ್ವನಿಸುತ್ತಲೇ ಇರುತ್ತದೆ” ಎಂದರು. ಈ ಸಂದರ್ಭದಲ್ಲಿ ನಾಗಮ್ಮ, ಸವಿತಾ, ಲೋಹಿಯಾ, ಅರ್ಚನಾ, ನಾಗೇಶ್, ಚಿರಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    baikady commemoration Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ‘ಆದಿಕವಿ’ ಮತ್ತು ‘ವಾಗ್ದೇವಿ’ ಪುರಸ್ಕಾರ ಪ್ರಕಟ
    Next Article ಯಕ್ಷ ಕಲಾವಿದ ಪೆರ್ಮುದೆ ಜಯಪ್ರಕಾಶ ಶೆಟ್ಟಿಯವರಿಗೆ ಸನ್ಮಾನ
    roovari

    Add Comment Cancel Reply


    Related Posts

    ವಿಭಾ ಸಾಹಿತ್ಯ ಪ್ರಶಸ್ತಿಗೆ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಕೃತಿ ಆಯ್ಕೆ

    October 3, 2025

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.