Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ತ್ರಿಶೂರ್‌ನ ವೇಣುಗೋಪಾಲ್ ಟಿ.ಕೆ.ಯವರಿಂದ ಭಿತ್ತಿಚಿತ್ರ ಕಲಾ ಕಾರ್ಯಾಗಾರ
    Exhibition

    ಉಡುಪಿಯಲ್ಲಿ ತ್ರಿಶೂರ್‌ನ ವೇಣುಗೋಪಾಲ್ ಟಿ.ಕೆ.ಯವರಿಂದ ಭಿತ್ತಿಚಿತ್ರ ಕಲಾ ಕಾರ್ಯಾಗಾರ

    October 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಇವರು ಉಡುಪಿಯ ವೆಂಟನಾ ಪೌಂಡೇಶನ್‌ನ ಸಹಯೋಗದಲ್ಲಿ ಆಯೋಜಿಸಿದ ‘ಜನಪದ ಸರಣಿ ಕಲಾ ಕಾರ್ಯಾಗಾರ’ದ ಏಳನೇ ಆವೃತ್ತಿಯು ಬಡಗುಪೇಟೆಯ ಹತ್ತು ಮೂರು ಇಪ್ಪತ್ತೆಂಟು ಗ್ಯಾಲರಿಯಲ್ಲಿ ದಿನಾಂಕ 14-10-2023 ಮತ್ತು 15-10-2023ರಂದು ಎರಡು ವಿಭಾಗಗಳಲ್ಲಿ ನಡೆಯಿತು.

    ಈ ಕಾರ್ಯಾಗಾರವನ್ನು ವೆಂಟನಾ ಪೌಂಡೇಶನ್‌ ಇದರ ಟ್ರಸ್ಟಿಗಳಾದ ಶಿಲ್ಪಾ ಭಟ್‌ ಇವರು ಉದ್ಘಾಟನೆ ಮಾಡಿ ಮಾತನಾಡುತ್ತಾ “ಉಡುಪಿಯ ಕಲಾಪ್ರೇಮಿಗಳಿಗೆ ಈ ತೆರನಾದ ಕಾರ್ಯಾಗಾರಗಳು ಬಹು ಉಪಯುಕ್ತವಾಗಲಿದ್ದು, ಭಾರತೀಯ ದೇಶೀಯ ಕಲೆಯ ಉಳಿಸುವಿಕೆ ಹಾಗೂ ಬೆಳೆಸುವಿಕೆಯಲ್ಲಿ ಇದೊಂದು ಮೈಲಿಗಲ್ಲಾಗಬಹುದು ಮತ್ತು ವೆಂಟನಾ ಪೌಂಡೇಶನ್ ಈ ತೆರನಾದ ಕಾರ್ಯಕ್ರಮಗಳಿಗೆ ಸದಾ ಬೆಂಬಲವನ್ನೀಯುತ್ತದೆ” ಎಂದರು.

    ಮುಖ್ಯ ಅತಿಥಿಗಳಾದ ವೈಟ್ ಲೋಟಸ್ ಹೋಟೆಲ್‌ನ ಆಡಳಿತ ನಿರ್ದೇಶಕರಾದ ಯುವ ಉದ್ಯಮಿ, ಅಜಯ್ ಪಿ. ಶೆಟ್ಟಿಯವರು “ಭಾರತವು ಹಲವಾರು ವೈವಿಧ್ಯಮಯ ಆಚಾರ-ವಿಚಾರ, ಸಂಸ್ಕೃತಿಗಳಿಂದ ಕೂಡಿದ್ದಾಗಿದೆ. ಇವುಗಳ ನಡುವೆ ಹಂಚಿಹೋಗಿರುವ ಕಲಾ ಪ್ರಕಾರಗಳನ್ನೆಲ್ಲ ಉಡುಪಿಗೆ ಪರಿಚಯಿಸುತ್ತಿರುವುದು ಶ್ಲಾಘನೀಯ. ಇದರ ಪ್ರಯೋಜನವನ್ನು ಕರಾವಳಿಯ ಜನರು ಪಡೆಯಬೇಕು” ಎಂಬುದಾಗಿ ಅಭಿಪ್ರಾಯವಿತ್ತರು. ಈ ಸಂದರ್ಭದಲ್ಲಿ ಭಾವನಾ ಪ್ರತಿಷ್ಠಾನದ ನಿರ್ದೇಶಕರಾದ ಹಾವಂಜೆ ಮಂಜುನಾಥ ರಾವ್‌ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಯೋಜಕರಾದ ಡಾ. ಜನಾರ್ದನ ಹಾವಂಜೆಯವರು ಕಾರ್ಯಕ್ರಮ ನಿರೂಪಿಸಿದರು.

    ಈ ಸರಣಿಯ ಭಾಗವಾಗಿ ಕೇರಳದ ಭಿತ್ತಿಚಿತ್ರಗಳ ಬಗ್ಗೆ ಕಲಾ ಕಾರ್ಯಾಗಾರವನ್ನು ಖ್ಯಾತ ಕಲಾವಿದ ಕೇರಳದ ತ್ರಿಶೂರ್‌ನ ವೇಣುಗೋಪಾಲ್ ಟಿ.ಕೆ.ಯವರು ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ “ಡಿವೈನ್ ಕೇರಳ” ಎನ್ನುವ ಕೇರಳ ಮ್ಯೂರಲ್ ಚಿತ್ರಗಳ ಕಲಾಪ್ರದರ್ಶನವನ್ನೂ ಏರ್ಪಡಿಸಿದ್ದು, ಎರ್ನಾಕುಲಂನ ಅಶ್ವತಿ ಎನ್. ಹಾಗೂ ವೇಣುಗೋಪಾಲ್‌ರ ಸುಮಾರು 15 ಜಲವರ್ಣ ಮತ್ತು ಆಕ್ರಿಲಿಕ್ ಮಾಧ್ಯಮದ ಕಲಾಕೃತಿಗಳ ಪ್ರದರ್ಶನವು 13ರಿಂದ 15ರ ತನಕ ಅಪರಾಹ್ನ 3ರಿಂದ 7ರ ತನಕ ಪ್ರದರ್ಶನಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleಸೋಣಂಗೇರಿಯ ನಡುಮನೆಯಲ್ಲಿ ‘ಸೋನ ನೆನಪು’
    Next Article ಬೆಂಗಳೂರಿನ ಉದಯಭಾನು ಕಲಾ ಸಂಘದಲ್ಲಿ ‘ನೃತ್ಯೋಲ್ಲಾಸ – ಯಕ್ಷವಿಲಾಸ’ | ಅಕ್ಟೋಬರ್ 29ರಂದು 
    roovari

    Add Comment Cancel Reply


    Related Posts

    ಮಂಗಳೂರಿನ ‘ಡಾ. ಟಿ.ಎಂ.ಎ. ಪೈ ಸೆಂಟರ್’ನಲ್ಲಿ ‘ಮಂಗಳೂರು ಲಿಟ್ ಫೆಸ್ಟ್’ | ಜನವರಿ 10 ಮತ್ತು 11

    January 8, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11

    January 5, 2026

    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಕಲಾ ಪ್ರದರ್ಶನ | ಜನವರಿ 17ರಿಂದ 19

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.