Subscribe to Updates

    Get the latest creative news from FooBar about art, design and business.

    What's Hot

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ತುಳು ಅಪ್ಪೆ ಕೂಟ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್ 
    Literature

    ಪುತ್ತೂರಿನಲ್ಲಿ ತುಳು ಅಪ್ಪೆ ಕೂಟ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್ 

    September 1, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ತುಳು ಅಪ್ಪೆ ಕೂಟ ಪುತ್ತೂರು ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ದಿನಾಂಕ 27-08-2023ರ ಭಾನುವಾರ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್‌ ನಡೆಯಿತು.

    ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಒಡಿಯೂರು ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯೀ “ಸಂಸ್ಕೃತಿಯ ಜೀವಾಳ ಸಂಸ್ಕಾರ. ಆ ಸಂಸ್ಕಾರಕ್ಕೆ ಮೂಲ ತಾಯಿ. ಆಕೆಯಲ್ಲಿ ದೈವಶಕ್ತಿ, ಭಕ್ತಿ, ನೈತಿಕತೆ ಬೇಕು. ತುಳುವಿಗೆ ಸಂಬಂಧಿಸಿದಂತೆ ಅಪ್ಪೆ ಕೂಟದಂತಹ ಒಗ್ಗೂಡುವಿಕೆಯೊಂದಿಗೆ ತುಳುನಾಡ ಸಂಸ್ಕೃತಿ, ಶ್ರೀಮಂತಿಕೆಯನ್ನು ಉಳಿಸಿ, ಬೆಳೆಸುವ ಕಾರ್ಯ ನಡೆಯಲಿದೆ. ಮಾರ್ಗದರ್ಶನ, ಪ್ರಯತ್ನ ಉದ್ದೇಶವಿದ್ದರೆ ಕಾರ್ಯ ಸಫಲತೆಯಾಗುತ್ತದೆ. ತುಳು ಭಾಷೆ, ಸಂಸ್ಕೃತಿ ಪ್ರೀತಿಯಿಂದ ಕೂಡಿದೆ. ಕ್ರಿ.ಶ. 2ನೇ ಶತಮಾನದಲ್ಲೇ ತುಳು ಭಾಷೆ ಚಾಲ್ತಿಯಲ್ಲಿದ್ದ ಕುರಿತು ಆಗಿನ ಬರಹಗಳು ಸಾಬೀತುಪಡಿಸಿವೆ. ಜಾಗತೀಕರಣದ ಗಾಳಿಯ ನಡುವೆ ತುಳುವನ್ನು ಉಳಿಸಿಕೊಂಡು ಹೋಗುವ ಕೆಲಸ ಆಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, “ಮುಂದಿನ 6 ತಿಂಗಳಲ್ಲಿ ತುಳುವನ್ನು ಅಧಿಕೃತ ಭಾಷೆಯಾಗಿ ಮಾಡದೇ ಬಿಡುವುದಿಲ್ಲ. ಈ ನಿಟ್ಟಿನಲ್ಲಿ 5 ಇಲಾಖೆಗಳ ಎನ್‌.ಒ.ಸಿ. ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ಸಾಗುತ್ತಿದೆ” ಎಂದರು. ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ದುರ್ಗಾಪ್ರಸಾದ್ ರೈ ಕುಂಬ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ, ಅಕ್ಷಯ್‌ ಗ್ರೂಪ್‌ನ ಉದ್ಯಮಿ ಜಯಂತ ನಡುಬೈಲು, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ವಿಜಯಲಕ್ಷ್ಮೀ ಪ್ರಸಾದ್ ರೈ ಕ.ಸಾ.ಪ. ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್‌ ನಾಯ‌ಕ್, ಪುತ್ತೂರು ತುಳುಕೂಟದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯಾನ್, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅತಿಥಿಗಳಾಗಿ ಭಾಗವಹಿಸಿದರು.

    ಈ ಸಂದರ್ಭದಲ್ಲಿ ನಾಟಿವೈದ್ಯೆ ಲಕ್ಷ್ಮೀ ಬಳ್ಳಕ್ಕುರಾಯ, ವಿದುಷಿ ನಯನಾ ವಿ. ರೈ ಕುದ್ಕಾಡಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಪ್ರೇಮಾಲತಾ ರಾವ್‌, ಕಲಾವಿದೆ ಅಪರ್ಣಾ ಕೊಡೆಂಕಿರಿ, ಕೃಷಿ ಸಾಧಕಿ ಪ್ರೇಮಲತಾ ಮಾಧವ ಬಂಗೇರ ಅವರನ್ನು ಸನ್ಮಾನಿಸಲಾಯಿತು. ಕೂಟದ ಪ್ರಮುಖರಾದ ವಸಂತಲಕ್ಷ್ಮೀ ಪುತ್ತೂರು, ಮಲ್ಲಿಕಾ ಜೆ. ರೈ, ಶಾಂತಾ ಕುಂಟಿನಿ ಮೊದಲಾದವರು ಸನ್ಮಾನ ಪತ್ರ ವಾಚಿಸಿದರು. ಕೂಟದ ಅಧ್ಯಕ್ಷೆ ಹರಿಣಾಕ್ಷಿ ಜೆ. ಶೆಟ್ಟಿ ಸ್ವಾಗತಿಸಿದರು. ವಿದ್ಯಾಶ್ರೀ ಎಸ್‌. ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ತುಳು ಕಬಿಕೂಟ ಸೇರಿದಂತೆ ಅಪರಾಹ್ನ ತನಕ ವಿವಿಧ ಕಾರ್ಯಕ್ರಮಗಳು ನಡೆದವು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ
    Next Article ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 4 
    roovari

    Add Comment Cancel Reply


    Related Posts

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.