Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದ ಅಭಿನಯ ಭಾರತೀಯ 45ನೇ ವಾರ್ಷಿಕೋತ್ಸವ | ಸೆಪ್ಟೆಂಬರ್ 05

    September 1, 2025

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    Roovari
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು’ ಕಾರ್ಯಕ್ರಮ
    Cultural

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು’ ಕಾರ್ಯಕ್ರಮ

    April 26, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು’ ಕಾರ್ಯಕ್ರಮವು ದಿನಾಂಕ 26 ಏಪ್ರಿಲ್ 2025ರ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ “ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು. ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000ಕ್ಕೂ ಹೆಚ್ಚಿನ ತುಳು ಪುಸ್ತಕಗಳು ತುಳು ಸಾಹಿತ್ಯ ಅಕಾಡೆಮಿಯಲ್ಲಿ ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ. ತಾಯಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲ ಕಾರ‍್ಯಪ್ರವೃತ್ತರಾಗಬೇಕಿದೆ” ಎಂದರು.

    ಎಂ. ಆರ್‌. ಪಿ. ಎಲ್‌. ಇದರ ಜನರಲ್ ಮ್ಯಾನೇಜರ್ ಆದ ಡಾ. ರುಡಾಲ್ಫ್ ನೋರೊನ್ಹ ಮಾತನಾಡಿ ವಿದೇಶಿ ಪ್ರವಾಸಿಗರು ಮತ್ತು ವ್ಯಾಪಾರಿಗಳ ತುಳುನಾಡ ಭೇಟಿ ಹಾಗೂ ಅವರ ಅಭಿಪ್ರಾಯಗಳನ್ನು ಮಂಡಿಸಿರುವುದರ ಕುರಿತು ತಿಳಿಸಿದರು. “ಒಬ್ಬ ವ್ಯಕ್ತಿಗೆ ತನ್ನ ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ಅಭಿಮಾನವಿದ್ದರೆ, ಆತ ಬದುಕಿನಲ್ಲಿ ಯಾವತ್ತೂ ಸೋಲುವುದಿಲ್ಲ” ಎಂದರು.

    ಆಳ್ವಾಸ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ “ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಹಿರಿಯರ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಜವಾಬ್ದಾರಿ ಕಿರಿಯರಿಗೂ ಇದೆ”. ಮಂಗಳೂರಿನ ಥಿಯೋಲೊಜಿಕಲ್ ಸೊಸೈಟಿ ಮೂಲಕ ವಿದೇಶಿಯರು ತುಳು ಸಾಹಿತ್ಯಕ್ಕೆ, ತುಳು ಸಂಸ್ಕೃತಿಗೆ ನೀಡಿದ ಕೊಡುಗೆಯನ್ನು ಉಲ್ಲೇಖಿಸಿ, ಶ್ಲಾಘಿಸಿದರು.

    ಕಾರ್ಯಕ್ರಮದ ಅಂಗವಾಗಿ ತುಳುನಾಡಿನ ಪ್ರಾಚೀನ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಸಭಾ ಕಾರ‍್ಯಕ್ರಮದ ನಂತರ ವಿವಿಧ ಗೋಷ್ಠಿಗಳು ನಡೆದವು. ತುಳುವರ ಸಂಸ್ಕೃತಿಯಲ್ಲಿ ತಾಯಿಯ ಸ್ಥಾನ ಮಾನದ ಕುರಿತು ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ, ತುಳು ಮತ್ತು ಕೊರಗ ಭಾಷೆ ಕುರಿತು ಬಾಬು ಪಾಂಗಳ, ತುಳುನಾಡಿನ ಸಾಮರಸ್ಯ ಪರಂಪರೆ ಕುರಿತು ಆಳ್ವಾಸ್ ವಿದ್ಯಾರ್ಥಿ ಹಾಗೂ ಯುವ ಲೇಖಕ ಮಹಮದ್ ರಿಯಾಜ್, ತುಳು ಜಾನಪದ ಹಾಡಿನ ಬಗ್ಗೆ ಮೈಮ್ ರಾಮದಾಸ್ ಮಾತನಾಡಿದರು.
    ಕಾರ್ಯಕ್ರಮದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡೀಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವೈಶಾಲಿ ಕಾರ್ಯಕ್ರಮ ನಿರೂಪಿಸಿ, ಆಳ್ವಾಸ್ ತುಳು ಸಂಘದ ಸಂಯೋಜಕ ಹೇಮಂತ್ ಸುವರ್ಣ ವಂದಿಸಿದರು.

    culture Literature Tulu
    Share. Facebook Twitter Pinterest LinkedIn Tumblr WhatsApp Email
    Previous Articleಪರ್ಕಳದ ‘ಸರಿಗಮ ಭಾರತಿ’ ಸಭಾಂಗಣದಲ್ಲಿ ಶ್ರೀ ಎ. ಈಶ್ವರಯ್ಯ ಸಂಸ್ಮರಣಾ ಕಾರ್ಯಕ್ರಮ
    Next Article ರಾಗತರಂಗದ ‘ವಸಂತಗಾನ ಝೇಂಕಾರ-2025’ ಮಕ್ಕಳ ಕಾರ್ಯಕ್ರಮ
    roovari

    Add Comment Cancel Reply


    Related Posts

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮ

    September 1, 2025

    ಸಂವೇದನಾಶೀಲ ಕಾದಂಬರಿಗಾರ್ತಿ ಗಂಗಾ ಪಾದೇಕಲ್

    September 1, 2025

    Add Comment Cancel Reply


    Facebook Twitter Instagram YouTube
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.