Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ‘ಮಹಿಳಾ ವೈಭವ -2026’ | ಫೆಬ್ರುವರಿ 01 ಮತ್ತು 02

    January 27, 2026

    ಮೂಡುಬಿದಿರೆಯಲ್ಲಿ ಸುರಸಾರವ ದ್ವಿತೀಯ ವರ್ಷದ ಸಂಗೀತೋತ್ಸವ ಸಂಭ್ರಮ

    January 27, 2026

    ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದಿಂದ ‘ವಿಚಾರಗೋಷ್ಠಿ’

    January 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » “ತುಳು ಹರಿಕಥೆ ಉಚ್ಚಯ-2023” ಸಮಾರೋಪ
    Harikathe

    “ತುಳು ಹರಿಕಥೆ ಉಚ್ಚಯ-2023” ಸಮಾರೋಪ

    April 12, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    12 ಏಪ್ರಿಲ್ 2023, ಮಂಗಳೂರು: ತುಳುವ ಸಿರಿ ಟ್ರಸ್ಟ್ (ರಿ.) ಕುಡ್ಲ ಮತ್ತು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು ಇವರ ಸಹಯೋಗದಲ್ಲಿ ದಿನಾಂಕ 11-04-2023ರಂದು ನಡೆದ ತುಳು ಹರಿಕಥೆ ಉಚ್ಚಯ-2023ರ ಐದನೇ ದಿನ ಸಮಾರೋಪ ಸಮಾರಂಭವನ್ನು ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಉದ್ಘಾಟಿಸಿ ಮಾತನಾಡುತ್ತಾ “ಪುರಾಣ ಕಾಲದ ನಾರದಮುನಿಗಳಿಂದ ತೊಡಗಿ ದಾಸವರೇಣ್ಯರಾದ ಕನಕ – ಪುರಂದರರವರೆಗೆ ದೇವರ ಮಹಿಮೆಗಳನ್ನು ಕೊಂಡಾಡುತ್ತಾ ಭಕ್ತಿ ಪರಂಪರೆಯನ್ನು ಬೆಳಗಿದ ಹರಿದಾಸರುಗಳು ಪೂಜನೀಯರು. ಹರಿಕಥೆಯಿಂದ ಭಕ್ತಿ, ಜ್ಞಾನ ಎರಡೂ ಪಸರಿಸುತ್ತದೆ. ನಮ್ಮ ತುಳು ಭಾಷೆಯಲ್ಲಿ ನಡೆದ ಪಂಚಪರ್ವ ಹರಿಕಥಾ ಉತ್ಸವ ಹರಿಕಥೆಯ ಇತಿಹಾಸದಲ್ಲಿ ಒಂದು ಮೈಲಿಗಲ್ಲು” ಎಂದು ಹೇಳಿದರು. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನಿರ್ದೇಶಕರಾದ ಶ್ರೀ ಕೆ.ಟಿ.ಸುವರ್ಣರವರು ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

    ತುಳುವ ಸಿರಿ ಟ್ರಸ್ಟ್(ರಿ.) ಕುಡ್ಲ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಹರಿದಾಸರಿಗೆ ಮಾಲಾರ್ಪಣೆ ಮಾಡಿ ಶಾಲು ಹೊಂದಿಸಿ ಸ್ವಾಗತಿಸಿದರು. ಶ್ರೀಮತಿ ಸೌಮ್ಯ ರವೀಂದ್ರ ಶೆಟ್ಟಿ, ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಪವಿತ್ರ ಕುಮಾರ್ ಗಟ್ಟಿ, ಟ್ರಸ್ಟ್ ನ ಕೋಶಾಧಿಕಾರಿ ಕಲಾಸಾರಥಿ ತೋನ್ಸೆ ಪುಷ್ಕಳ್ ಕುಮಾರ್, ತುಳುವ ಸಿರಿ ಟ್ರಸ್ಟ್ ನ ಗೌರವ ಸಲಹೆಗಾರ ಕೆ. ರವೀಂದ್ರ ರೈ ಕಲ್ಲಿಮಾರ್, ಉಪಾಧ್ಯಕ್ಷ ವಿದ್ಯಾಧರ ಶೆಟ್ಟಿ ಮತ್ತು ಸುಧಾ ಸುರೇಶ್, ಜತೆ ಕಾರ್ಯದರ್ಶಿ ರವಿಕುಮಾರ್ ಕೋಡಿ, ಟ್ರಸ್ಟ್ ನ ಸಂಚಾಲಕರಾದ ಅನಂತ ಕೃಷ್ಣ ಯಾದವ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ಸಂಜೀವ ಶೆಟ್ಟಿ ಅಂಬ್ಲಮೊಗರು, ಎನ್.ಟಿ. ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು.

    ತುಳುವ ಸಿರಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಬಳಿಕ ಹರಿದಾಸ ಯಜ್ಞೇಶ್ ಹೊಸಬೆಟ್ಟು ಇವರಿಂದ ‘ತಪ್ಪುಗು ತರೆದಂಡ’ ಎಂಬ ಕಥಾ ಕೀರ್ತನೆ ನೆರವೇರಿತು. ಇವರಿಗೆ ಸಹಕರಿಸಿದವರು ತಬ್ಲಾದಲ್ಲಿ ಶ್ರೀ ಮಂಗಲ್ ದಾಸ್ ಗುಲ್ವಾಡಿ ಹಾಗೂ ಹಾರ್ಮೋನಿಯಂನಲ್ಲಿ ಶ್ರೀ ರಮೇಶ್ ಹೆಬ್ಬಾರ್.

    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಮುದೆ ಶಾಲೆಯಲ್ಲಿ ‘ಚಿತ್ತಾರ’ – ದಿನ 2
    Next Article ಉಡುಪಿಯಲ್ಲಿ “ಸಾರ್ವಕಾಲಿಕ” ಪುಸ್ತಕ ಬಿಡುಗಡೆ ಸಮಾರಂಭ
    roovari

    Add Comment Cancel Reply


    Related Posts

    ಮೂಡುಬಿದಿರೆಯಲ್ಲಿ ಸುರಸಾರವ ದ್ವಿತೀಯ ವರ್ಷದ ಸಂಗೀತೋತ್ಸವ ಸಂಭ್ರಮ

    January 27, 2026

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹನ್ನೊಂದನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

    January 27, 2026

    ಪುತ್ತೂರು ಪರ್ಲಡ್ಕದಲ್ಲಿ ಎಸ್.ಡಿ.ಪಿ. ವತಿಯಿಂದ ‘ಕಲೋಪಾಸನಾ 2026’ | ಜನವರಿ 31, ಫೆಬ್ರುವರಿ 1 ಮತ್ತು 2

    January 27, 2026

    ಸಾಹಿತ್ಯ ವೈಭವದಲ್ಲಿ ಕೃತಿಗಳ ಲೋಕಾರ್ಪಣೆ, ತುಳು ಮತ್ತು ಕನ್ನಡ ಕವಿಗೋಷ್ಠಿ

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.