Subscribe to Updates

    Get the latest creative news from FooBar about art, design and business.

    What's Hot

    ನಾದಾವಧಾನ ಪ್ರತಿಷ್ಠಾನದಿಂದ ಆನ್ಲೈನ್ ಯಕ್ಷಗಾನ ಭಾಗವತಿಕೆ-ಮದ್ದಳೆ-ಚಂಡೆ-ನೃತ್ಯಗಳ ತರಗತಿ

    July 12, 2025

    ಶಿರಿಯಾರದ ಸಾಹೇಬರಕಟ್ಟೆಯಲ್ಲಿ ‘ಪಂಚಸ್ವರ ಯಕ್ಷಗಾನ ವೈಭವ’

    July 12, 2025

    ಕಟೀಲು ಕಾಲೇಜಿನಲ್ಲಿ ಉಚಿತ ಹಾರ್ಮೋನಿಯಂ ಮತ್ತು ಕೀ ಬೋರ್ಡ್ ವಾದನ ತರಗತಿ ಉದ್ಘಾಟನೆ | ಜುಲೈ 14

    July 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಘು ಇಡ್ಕಿದು ಅವರ 30ನೇ ಕೃತಿ ‘ಎನ್ನ ನಲಿಕೆ’ ತುಳು ಕವನ ಸಂಕಲನದ ಲೋಕಾರ್ಪಣೆ
    Book Release

    ರಘು ಇಡ್ಕಿದು ಅವರ 30ನೇ ಕೃತಿ ‘ಎನ್ನ ನಲಿಕೆ’ ತುಳು ಕವನ ಸಂಕಲನದ ಲೋಕಾರ್ಪಣೆ

    January 5, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸುರತ್ಕಲ್ ಗೋವಿಂದದಾಸ ಕಾಲೇಜಿನ ಸಾಹಿತ್ಯ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಮತ್ತು ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 30ನೇ ಕೃತಿ ‘ಎನ್ನ ನಲಿಕೆ’ ತುಳು ಕವನ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮವು ಗೋವಿಂದದಾಸ ಕಾಲೇಜು ಸಭಾಂಗಣದಲ್ಲಿ ದಿನಾಂಕ 30-12-2023ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದೈವನರ್ತಕ ಲೋಕಯ್ಯ ಸೇರ ಮಾಣಿ ಇವರು ಕೃತಿ ಬಿಡುಗಡೆಗೊಳಿಸಿ “ತುಳುನೆಲದ ಸಂಸ್ಕೃತಿ, ಆಚಾರ-ವಿಚಾರ, ಸಂಪ್ರದಾಯ, ನಂಬಿಕೆಗಳಂತಹ ಜಾನಪದ ಸೊಗಡಿನ ಮಹತ್ವದ ಸಂಗತಿಗಳು ಪುಸ್ತಕ ರೂಪದಲ್ಲಿ ಶಾಶ್ವತವಾಗಿ ದಾಖಲಾಗಬೇಕು. ಸಾಹಿತಿಗಳು ಈ ನಿಟ್ಟಿನಲ್ಲಿ ಮನ ಮಾಡಬೇಕು. ಇಂದಿನ ಆಧುನಿಕತೆಯ ಭರಾಟೆಯಲ್ಲಿ ಹಳೆಯ ಆಚಾರ ವಿಚಾರಗಳು ಮರೆಗೆ ಸರಿಯುತ್ತಿದೆ. ಅದು ಮುಂದಿನ ಪೀಳಿಗೆಗೂ ಉಳಿಯುವಂತಾಗಲು ಗ್ರಂಥರೂಪದಲ್ಲಿ ದಾಖಲಾಗಬೇಕಾದುದು ಅಗತ್ಯ. ತುಳುನಾಡಿನ ದೈವಾರಾಧನೆಯ ಮೌಖಿಕ ಸಾಹಿತ್ಯದಲ್ಲಿ ಮೊಗೆದಷ್ಟೂ ಅದ್ಭುತ ವಿಚಾರಗಳಿವೆ. ಇಂದು ದೈವರಾಧನೆ ಬಗ್ಗೆ ಬಹಳಷ್ಟು ದಾಖಲೀಕರಣ ನಡೆಯುತ್ತಿದೆ. ಆದರೆ ಕೇವಲ ಪ್ರಚಾರಕ್ಕಷ್ಟೇ ಸೀಮಿತವಾಗದೆ ಕ್ಷೇತ್ರ ಪರಿಣಿತರು, ವಿಷಯತಜ್ಞರಿಂದ ಮೂಲಮಾಹಿತಿ ಪಡೆದು ನೈಜ ವಿಷಯದ ದಾಖಲೀಕರಣ ಕಾರ್ಯವಾಗಬೇಕಿದೆ” ಎಂದು ಆಶಯ ವ್ಯಕ್ತಪಡಿಸಿದರು.

    ಅಧ್ಯಕ್ಷತೆ ವಹಿಸಿದ್ದ ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ, “ರಘು ಇಡ್ಕಿದು ಅವರ ಕೃತಿಗಳಲ್ಲಿ ಜೀವಂತಿಕೆಯಿದೆ. ಹೊಸತನದೊಂದಿಗೆ ವೈವಿಧ್ಯಮಯ ಸಾಹಿತ್ಯ ರಚನೆ ಅವರ ವಿಶೇಷತೆ” ಎಂದರು. ಉಪ ಪ್ರಾಂಶುಪಾಲ ರಮೇಶ್ ಭಟ್ ಎಸ್.ಜಿ., ಪ್ರಕಾಶಕ ಕಲ್ಲೂರು ನಾಗೇಶ, ಪತ್ರಕರ್ತ ರಾಜೇಶ್ ಶೆಟ್ಟಿ ದೋಟ, ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ, ಕೃತಿಕಾರ ರಘು ಇಡ್ಕಿದು ಭಾಗವಹಿಸಿದ್ದರು.

    ಮಂಗಳೂರು ವಿಶ್ವವಿದ್ಯಾಲಯ ತುಳು ಎಂ.ಎ. ವಿಭಾಗ ಪ್ರಾಧ್ಯಾಪಕಿ ಮಣಿ ಮನಮೋಹನ್ ರೈ ಕೃತಿ ಕುರಿತು ಮಾತನಾಡಿದರು. ಬಳಿಕ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳಾರು ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಡಾ.ಸುರೇಶ ನೆಗಳಗುಳಿ, ಡಾ.ಸಂತೋಷ ಆಳ್ವ, ಚೆನ್ನಪ್ಪ ಅಳಿಕೆ, ರೇಮಂಡ್ ಡಿ’ಕುನ್ಹ ತಾಕೊಡೆ, ಸುಲೋಚನಾ ಪಚ್ಚಿನಡ್ಕ, ಸುಮಂಗಲಾ ದಿನೇಶ್ ಶೆಟ್ಟಿ ಕುಂಪಲ, ಅಶೋಕ್ ಎನ್. ಕಡೇಶಿವಾಲಯ, ಉಮೇಶ್ ಶಿರಿಯ, ಜೀವಪರಿ, ಯಶವಂತ ಡಿ.ಎಸ್., ರೇಖಾ ಸುದೇಶ್ ರಾವ್, ಸೌಮ್ಯಾ ಆರ್. ಶೆಟ್ಟಿ, ಅನುರಾಧಾ ರಾಜೀವ್ ಸುರತ್ಕಲ್, ಭಾಸ್ಕರ್ ವರ್ಕಾಡಿ, ಎಸ್.ಕೆ. ಕುಂಪಲ, ಎಂ.ಎಸ್. ವೆಂಕಟೇಶ್ ಗಟ್ಟಿ, ಗೀತಾ ಲಕ್ಷ್ಮೀಶ್, ಸೌಮ್ಯಾ ಗೋಪಾಲ್, ರಶ್ಮಿ ಸನಿಲ್, ರಾಜೇಶ್ವರಿ ಎಚ್. ಬಜ್ಪೆ, ಹಿತೇಶ್ ಕುಮಾರ್ ಭಾಗವಹಿಸಿದ್ದರು. ಹರೀಶ್ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿ, ಗೋಪಾಲಕೃಷ್ಣ ಶಾಸ್ತ್ರಿ ವಂದಿಸಿ, ಸುಲೋಚನಾ ಪಚ್ಚಿನಡ್ಕ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ
    Next Article ಮಂಗಳೂರು ವಿವಿಯಲ್ಲಿ ಯಕ್ಷ ನಾಟ್ಯ ತರಬೇತಿಯ ಉದ್ಘಾಟನೆ
    roovari

    Add Comment Cancel Reply


    Related Posts

    ಜನಪದ ಪಾಡ್ದನ ಕಲಾವಿದ ಬೊಳ್ಳಾಜೆ ಬಾಬಣ್ಣ ನಿಧನ

    July 12, 2025

    ಮುಂಡಗೋಡದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉಪನ್ಯಾಸ | ಜುಲೈ 13

    July 12, 2025

    ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಪುಣ್ಣಿಮೆ ಶಿವಾನುಭವ ಗೋಷ್ಠಿ ಮತ್ತು ಫ.ಗು‌. ಹಳಕಟ್ಟಿಯವರ ಜಯಂತಿ

    July 12, 2025

    ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ‘ಕನ್ನಡ ಸಾಹಿತ್ಯ ಸಂಭ್ರಮ 2025’ | ಜುಲೈ 13

    July 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.