Subscribe to Updates

    Get the latest creative news from FooBar about art, design and business.

    What's Hot

    ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2025ಕ್ಕೆ ಶಶಿ ತರೀಕೆರೆ ಆಯ್ಕೆ

    October 31, 2025

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭ |ನವೆಂಬರ್ 01

    October 31, 2025

    ಕ.ಸಾ.ಪ.ದಿಂದ ವಿನೂತನ ಕಾರ್ಯಕ್ರಮ ‘ಮಾಸದ ಸಂವಾದ ಸರಣಿ’ಯ ಮೊದಲ ಎಸಳು

    October 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ತುಳು ಕಲಿಕಾ ಕಾರ್ಯಾಗಾರ
    Tulu

    ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ತುಳು ಕಲಿಕಾ ಕಾರ್ಯಾಗಾರ

    October 30, 2025Updated:October 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಿಶೇಷ ಕಾರ್ಯಪಡೆ ಮಂಗಳೂರು ವತಿಯಿಂದ ವಿಶೇಷ ಕಾರ್ಯಪಡೆ ಸಿಬ್ಬಂದಿಗೆ ಆಯೋಜಿಸಲಾಗಿರುವ 20 ದಿನಗಳ ತುಳು ಕಲಿಕಾ ಶಿಬಿರ ಮತ್ತು ಸಂಸ್ಕೃತಿ ಪರಿಚಯ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ದಿನಾಂಕ 28 ಅಕ್ಟೋಬರ್ 2025ರಂದು ಪೊಲೀಸ್‌ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರ ಪೊಲೀಸ್‌ ಆಯುಕ್ತ ಮತ್ತು ವಿಶೇಷ ಕಾರ್ಯಪಡೆಯ ಡಿ. ಐ. ಜಿ. ಪಿ. ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ ಕರ್ತವ್ಯ ನಿರ್ವಹಿಸುವ ಸ್ಥಳದ ಸ್ಥಳೀಯ ಭಾಷೆ ಕಲಿತಾಗ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದು ಕರ್ತವ್ಯ ನಿರ್ವಹಣೆಗೂ ಸಾಕಷ್ಟು ನೆರವಾಗಲಿದೆ. ದ.ಕ ಮತ್ತು ಉಡುಪಿ ಭಾಗದಲ್ಲಿ ಸ್ಥಳೀಯ ಭಾಷೆಗಳು ಹೆಚ್ಚಾಗಿ ಬಳಕೆಯಾಗುತ್ತವೆ. ಹಾಗಾಗಿ ಇಲ್ಲಿಗೆ ಕರ್ತವ್ಯಕ್ಕೆ ಬರುವ ಪೊಲೀಸರಿಗೆ ಕೆಲವೊಂದು ಸಮಸ್ಯೆಯಾಗುತ್ತದೆ. ನಾವು ನಮ್ಮವರು ಎನ್ನುವ ಭಾವನೆ ಬರುವುದಿಲ್ಲ. ಸ್ಥಳೀಯರು ಕೂಡಾ ನಮ್ಮವರು ಎಂದು ಒಪ್ಪಿಕೊಳ್ಳುವುದಿಲ್ಲ. ಅಂತಹ ಸಂದರ್ಭದಲ್ಲಿ ಭಾಷೆಯನ್ನು ಕಲಿಯುವುದರಿಂದ ಸಂಸ್ಕೃತಿಯ ಪರಿಚಯವೂ ಆಗಿ, ನಾವೂ ಅವರೊಳಗೆ ಒಬ್ಬರಾಗುತ್ತೇವೆ. ಇದು ಅಪರಾಧ ತನಿಖೆಯ ಸಂದರ್ಭದಲ್ಲೂ ಇಲಾಖೆಗೆ ನೆರವಾಗುತ್ತದೆ. ಜಿಲ್ಲೆಯಲ್ಲಿ ಶೇ.98ರಷ್ಟು ಮಂದಿ ಅವರ ಪಾಡಿಗೆ ಅವರು ಇದ್ದಾರೆ. ಏನೇ ಸಮಸ್ಯೆ ಬಂದರೂ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಶೇ.2ರಲ್ಲಿ ಶೇ.1ರಷ್ಟು ಮಂದಿ ಅಪರಾಧಿಕ ಮನಸ್ಥತಿಯವರು. ಇವರು ಶೇ.98ರಷ್ಟಿರುವ ಜನರನ್ನು ಹೆದರಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಉಳಿದ ಶೇ.1 ಪೊಲೀಸರಾಗಿದ್ದು, ಅವರು ಶೇ.98ರಷ್ಟು ಮಂದಿ ಧೈರ್ಯ ಹೇಳುವ ಕೆಲಸ ಮಾಡಬೇಕು” ಎಂದರು.
    ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ವಿಶೇಷ ಕಾರ್ಯಪಡೆ ಪ್ರಭಾರ ಪೊಲೀಸ್ ಉಪ ಅಧೀಕ್ಷಕ ಬೆಳ್ಳಿಯಪ್ಪ ಕೆ.ಯು., ಮಿಥುನ್ ಎಚ್.ಎನ್., ನಾಗೇಶ್ ಉದ್ಯಾವರ, ರವಿಪ್ರಕಾಶ್‌ ಉಪಸ್ಥಿತರಿದ್ದರು.

    baikady roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleದೀಪದ ಬೆಳಕಿನಲ್ಲಿ ಶಾಂತಲಾ ಸುಬ್ರಮಣ್ಯಂ ಇವರ ಕೊಳಲು ವಾದನ ಕಛೇರಿ
    Next Article ಯಕ್ಷಾಂಗಣ ತಾಳಮದ್ದಳೆ ಸಪ್ತಾಹ : ಸಂಘಟನಾ ಪರ್ವದ ಬಗ್ಗೆ ಕಾರ್ಯಕಾರಿ ಸಮಿತಿ ಸಭೆ
    roovari

    Add Comment Cancel Reply


    Related Posts

    ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2025ಕ್ಕೆ ಶಶಿ ತರೀಕೆರೆ ಆಯ್ಕೆ

    October 31, 2025

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿಶ್ವ ಕೊಂಕಣಿ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭ |ನವೆಂಬರ್ 01

    October 31, 2025

    ಕ.ಸಾ.ಪ.ದಿಂದ ವಿನೂತನ ಕಾರ್ಯಕ್ರಮ ‘ಮಾಸದ ಸಂವಾದ ಸರಣಿ’ಯ ಮೊದಲ ಎಸಳು

    October 31, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ನಕ್ಷತ್ರ ಯಾತ್ರಿಕರು’ ನಾಟಕ ಪ್ರದರ್ಶನ | ನವೆಂಬರ್ 02

    October 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.