Subscribe to Updates

    Get the latest creative news from FooBar about art, design and business.

    What's Hot

    ಶಾ. ಬಾಲುರಾವ್‌ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಆಗಸ್ಟ್ 30

    July 31, 2025

    ನಂದಳಿಕೆ ಬೋರ್ಡ್ ಶಾಲಾ ಸಭಾಂಗಣದಲ್ಲಿ ತಾಳಮದ್ದಳೆ | ಆಗಸ್ಟ್ 02

    July 31, 2025

    ಮೈಸೂರು ಕಿರುರಂಗಮಂದಿರದಲ್ಲಿ ‘ಮೂರನೇ ಕಿವಿ’ ನಾಟಕ ಪ್ರದರ್ಶನ | ಆಗಸ್ಟ್ 02 ಮತ್ತು 03

    July 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಲ್ಲಿಕಟ್ಟೆಯಲ್ಲಿ ಪುಟಾಣಿ ಮಕ್ಕಳ ತುಳು ಪದ ಪ್ರಾಸ ಗಾಯನ ಕಾರ್ಯಕ್ರಮ
    Literature

    ಮಲ್ಲಿಕಟ್ಟೆಯಲ್ಲಿ ಪುಟಾಣಿ ಮಕ್ಕಳ ತುಳು ಪದ ಪ್ರಾಸ ಗಾಯನ ಕಾರ್ಯಕ್ರಮ

    May 15, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಭಾಭವನದಲ್ಲಿ ‘ಗುಬ್ಬಿದ ಗೂಡು’ ಮಕ್ಕಳ ವಾದ್ಯಗೋಷ್ಠಿ ಗಾಯನ ತಂಡದವರು ಆಯೋಜಿಸಿದ ಪುಟಾಣಿ ಮಕ್ಕಳ ತುಳು ಪದ ಪ್ರಾಸ ಗಾಯನ ಕಾರ್ಯಕ್ರಮವು ದಿನಾಂಕ 12-05-2024ರಂದು ನಡೆಯಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ತುಳುವೆರೆ ಕಲದ ಅಧ್ಯಕ್ಷೆ, ತುಳು ಶಿಕ್ಷಕಿ ಶ್ರೀಮತಿ ಗೀತಾ ಲಕ್ಷ್ಮೀಶ್ “ತುಳುವನ್ನು ಕಟ್ಟುವ ಮತ್ತು ಮುಟ್ಟಿಸುವ ಕೆಲಸವನ್ನು ಮಕ್ಕಳ ಹಂತದಿಂದಲೇ ಮಾಡುತ್ತಾ ಬಂದರೆ ಅದೇ ತುಳುವಿಗೆ ನಾವು ಕೊಡುವ ಮಾನ್ಯತೆ. ತುಳುವನ್ನು ಉಳಿಸುವಲ್ಲಿ ಅಮ್ಮಂದಿರ ಪಾತ್ರ ಬಹಳ ಮುಖ್ಯವಾದದ್ದು. ತುಳುವನ್ನು ಮಕ್ಕಳ ಪದ ಪ್ರಾಸಗಳ ಮೂಲಕ ಹೇಳಿಕೊಟ್ಟರೆ ಮಕ್ಕಳಿಗೆ ಭಾಷೆ ಇಷ್ಟವಾಗುತ್ತದೆ” ಎಂದು ಹೇಳಿದರು.

    ತುಳು ಪದ ಪ್ರಾಸ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳನ್ನು ಹೆತ್ತವರು ಮತ್ತು ಅತಿಥಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು. ಕಾರ್ಯಕ್ರಮವನ್ನು ನಮ್ಮ ತುಳುನಾಡು ಟ್ರಸ್ಟ್ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ರೋಹಿತಾಶ್ವ ಇವರು ದೀಪ ಬೆಳಗಿ ಉದ್ಘಾಟಿಸಿ ಮಾತನಾಡುತ್ತಾ “ತುಳುತನವನ್ನು ಮತ್ತು ತುಳು ಸಂಸ್ಕೃತಿಯನ್ನು ನಾವು ಬಹಳ ಹೆಮ್ಮೆಯಿಂದ ನಮ್ಮೊಳಗೆ ತುಂಬಿಕೊಂಡಾಗಲೇ ಇತರರೂ ನಮ್ಮ ಸಂಸ್ಕೃತಿಯ ಬಗ್ಗೆ ಗೌರವ ತಾಳುತ್ತಾರೆ” ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ಮತ್ತು ನಿವೃತ್ತ ಅಧ್ಯಾಪಕರು ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕರೂ ಆದ ಪೇಜಾವರ ಸುಧಾಕರ ರಾವ್ ಪಾಲ್ಗೊಂಡಿದ್ದರು. ‘ಗುಬ್ಬಿದ ಗೂಡು’ ತಂಡದ ನಿರ್ದೇಶಕ ಎಲ್ಲೂರು ಶ್ರೀನಿವಾಸರಾವ್, ಕಾರ್ಯಕಾರಿ ಸಮಿತಿಯ ಶ್ರೀಮತಿ ಕವಿತಾ ಮತ್ತು ಶ್ರೇಯಶ್ರೀ ಭಟ್, ತಂಡದ ಕಾರ್ಯದರ್ಶಿ ರಘು ಇಡ್ಕಿದು ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ವಿನಮ್ರ ಇಡ್ಕಿದು ಹಾಡಿದ ತುಳು ಮತ್ತು ಮಲಯಾಳಂ ಹಾಡುಗಳ ದೃಶ್ಯ ಗೀತೆಗಳನ್ನು ಶ್ರೀ ರೋಹಿತಾಶ್ವ ಮತ್ತು ಶ್ರೀಮತಿ ಗೀತಾ ಲಕ್ಷ್ಮೀಶ್ ಅವರು ಬಿಡುಗಡೆಗೊಳಿಸಿದರು. ಎಲ್ಲೂರು ಶ್ರೀನಿವಾಸರಾವ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ರಘು ಇಡ್ಕಿದು ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಟೀಲು ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ನಡೆದ ಸಂಗೀತ ಶಿಬಿರ
    Next Article ಕಲಾವಿದ ಉದಯ ಶಂಕರ್ ನಿಧನ
    roovari

    Add Comment Cancel Reply


    Related Posts

    ಶಾ. ಬಾಲುರಾವ್‌ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಆಗಸ್ಟ್ 30

    July 31, 2025

    ಶ್ರೀ ಜ್ಞಾನೋದಯ ಸಮಾಜ ಮಂದಿರದಲ್ಲಿ ಮೋಹನಪ್ಪ ತಿಂಗಳಾಯರ ಸಂಸ್ಮರಣೆ

    July 31, 2025

    ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ -4 | ಆಗಸ್ಟ್ 02

    July 31, 2025

    ಯಶಸ್ವಿಯಾಗಿ ನಡೆದ ವಿದ್ಯಾರ್ಥಿಗಳ ಸಾಹಿತ್ಯ ಸಾಂಸ್ಕೃತಿಕ ಕಮ್ಮಟ

    July 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.