ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಂದಳಿಕೆಯ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ‘ತುಳು ಪರ್ಬ ಮತ್ತು ತುಳು ಕವಿ ಗೋಷ್ಠಿ’ ಕಾರ್ಯಕ್ರಮವು ದಿನಾಂಕ 27 ಜುಲೈ 2025ರಂದು ಬೆಳಿಗ್ಗೆ ಘಂಟೆ 11.00ರಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರವನ್ನು ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಬಿ. ಜನಾರ್ದನ ಭಟ್ ಉದ್ಘಾಟಿಸಲಿದ್ದಾರೆ. ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ದಿನೇಶ್ ಪೂಜಾರಿ, ಅಕಾಡೆಮಿ ಸದಸ್ಯ ಪಾಂಗಾಳ ಬಾಬು ಕೊರಗ ಉಪಸ್ಥಿತರಿರುವರು. ಉದ್ಘಾಟನ ಕಾರ್ಯಕ್ರಮದ ಬಳಿಕ ತುಳು ಕವಿಗೋಷ್ಠಿ ನಡೆಯಲಿದ್ದು, ವಾಸಂತಿ ಅಂಬಲಪಾಡಿ, ಹರಿಪ್ರಸಾದ್ ನಂದಳಿಕೆ, ದೀಪಿಕಾ ಉಡುಪಿ, ಸುಲೋಚನಾ ಪಚ್ಚಿನಡ್ಕ, ಶ್ರೀ ಮುದ್ರಾಡಿ ಇವರು ಕವಿಗೋಷ್ಠಿಯಲ್ಲಿ ಭಾಗವಹಿಸಲಿರುವರು.
Subscribe to Updates
Get the latest creative news from FooBar about art, design and business.