ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಸಂಸ್ಥೆಯ ಕೂಳೂರು ಕ್ಯಾಂಪಸ್ನಲ್ಲಿ ‘ತುಳು ಸಾಹಿತ್ಯ, ಸಾಂಸ್ಕೃ ತಿಕ ಬದುಕು’ ಎಂಬ ವಿಷಯದ ಬಗ್ಗೆ ಒಂದು ದಿನದ ವಿಚಾರ ಮಂಥನ ಕಾರ್ಯಕ್ರಮವು ದಿನಾಂಕ 29 ಅಕ್ಟೋಬರ್ 2025ರಂದು ನಡೆಯಲಿದೆ.
ಬೆಳಿಗ್ಗೆ ಘಂಟೆ 9.30ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜೀವನ್ ರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಅಧ್ಯಕ್ಷರಾದ ಡಾ. ತುಕುರಾಮ ಪೂಜಾರಿ ದಿಕ್ಸೂಚಿ ಭಾಷಣ ಮಾಡುವರು.
ಯೆನೆಪೋಯ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಸಾದ್ ಕೆ., ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಶರೀನಾ ಪಿ., ನಾರಾಯಣ ಸುಕುಮಾರ್ ಎ., ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಶಾಲಿನಿ ಸಿಕ್ವೇರ ಭಾಗವಹಿಸುವರು.
ಪ್ರಥಮ ಗೋಷ್ಠಿಯಲ್ಲಿ ‘ತುಳು ಕವಿತೆ ಮತ್ತು ಮಹಾಕಾವ್ಯ’ ವಿಷಯದ ಬಗ್ಗೆ ಡಾ. ಮೀನಾಕ್ಷಿ ರಾಮಚಂದ್ರ, ಎರಡನೇ ಗೋಷ್ಠಿಯಲ್ಲಿ ‘ಪಾಡ್ದನಗಳ ಸಾಹಿತ್ಯಕ ಮೌಲ್ಯಗಳು’ ವಿಷಯದ ಬಗ್ಗೆ ಎಂ. ಡಿ. ಮಂಚಿ, ಮೂರನೇ ಗೋಷ್ಠಿಯಲ್ಲಿ ‘ತುಳು ಯಕ್ಷಗಾನ ಪ್ರಸಂಗ ಸಾಹಿತ್ಯ ಹಾಡು-ಸಂವಹನ’ ವಿಷಯದ ಬಗ್ಗೆ ಶಿವಪ್ರಸಾದ್ ಎಡಪದವು ವಿಚಾರ ಮಂಡಿಸುವರು.
ಮಧ್ಯಾಹ್ನ 2.30 ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಜಾನಪದ ತಜ್ಞ ಕೆ. ಕೆ. ಪೇಜಾವರ ಸಮಾರೋಪ ಭಾಷಣ ಮಾಡುವರು, ಸಂಸ್ಥೆಯ ಸಾಹಿತ್ಯಕ ಸಂಘದ ಸಂಯೋಜಕ ಡಾ. ದಿನಕರ ಪಚ್ಚನಾಡಿ ಭಾಗವಹಿಸಲಿರುವರು.

