Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025

    ಅರ್ಥಪೂರ್ಣವಾಗಿ ಜರಗಿದ ಹಂದಾಡಿ ಬಾಲಕೃಷ್ಣ ನಾಯಕ್ ಇವರ ಪ್ರಥಮ ಪುಣ್ಯತಿಥಿ

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ರಘು ಇಡ್ಕಿದು ಸಾಹಿತ್ಯದ ಮಕ್ಕಳ ತುಳು ಹಾಡುಗಳು ಆಲ್ಬಂ 
    Literature

    ಲೋಕಾರ್ಪಣೆಗೊಂಡ ರಘು ಇಡ್ಕಿದು ಸಾಹಿತ್ಯದ ಮಕ್ಕಳ ತುಳು ಹಾಡುಗಳು ಆಲ್ಬಂ 

    October 25, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಥಂಡರ್ ಕಿಡ್ಸ್ ಮಂಗಳೂರು ಮತ್ತು ವಿದ್ಯಾ ಪ್ರಕಾಶನ ಸಂಸ್ಥೆ ಆಯೋಜಿಸಿದ ರಘು ಇಡ್ಕಿದು ಸಾಹಿತ್ಯ ರಚಿಸಿ, ಸಂಗೀತ ನಿರ್ದೇಶಕ ಎಲ್ಲೂರು ಶ್ರೀನಿವಾಸರಾವ್ ಸಂಗೀತ ನೀಡಿದ, ವಿದ್ಯಾ ಯು. ನಿರ್ಮಾಣ, ನಿರ್ದೇಶನ ಹಾಗೂ ಸಂಕಲನ ಮಾಡಿದ ಮಕ್ಕಳ ತುಳು ಹಾಡುಗಳ ಲೋಕರ್ಪಣಾ  ಸಮಾರಂಭವು ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಭಾಭವನದಲ್ಲಿ ದಿನಾಂಕ 17 ಅಕ್ಟೋಬರ್ 2024ರಂದು ನಡೆಯಿತು.
    ಮಕ್ಕಳಿಂದಲೇ ಹಾಡುಗಳನ್ನು ಹಾಡಿಸಿ, ದೃಶ್ಯೀಕರಿಸಿದ ಈ ಮಕ್ಕಳ ತುಳು ಹಾಡುಗಳನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಬಿಡುಗಡೆಗೊಳಿಸಿ ಮಾತನಾಡಿ “ಮಕ್ಕಳಿಗಾಗಿ ತುಳುವನ್ನು ಈ ರೀತಿ ಡಿಜಿಟಲ್ ಸ್ವರೂಪಗಳಲ್ಲಿ ತಂದರೆ, ಇಂದಿನ ಮಕ್ಕಳಿಗೆ ಅದು ಬಹಳ ಆಪ್ತವಾಗುತ್ತದೆ ಮತ್ತು ಜಗದಗಲದ ಜನರಿಗೆ ತಲುಪುತ್ತದೆ. ಮಕ್ಕಳಿಗೆ ದೊಡ್ಡ ದೊಡ್ಡ ಗ್ರಂಥಗಳನ್ನು ನೀಡಿದರೆ ತುಳುವಿನ ಬಗೆಗೆ ಆಸಕ್ತಿ ಬರದು. ಮಕ್ಕಳಿಗೆ ಅವರ ವಯಸ್ಸಿಗೆ ಸಂಬಂಧಪಟ್ಟ ರೀತಿಯಲ್ಲಿ ಸಾಹಿತ್ಯವನ್ನು ನೀಡಿ ಭಾಷೆಯ ಬಗ್ಗೆ ಜಾಗೃತಿಗೊಳಿಸಬೇಕಾಗಿದೆ. ನಮಗೆ ಬಂದ ಅನುಭವಗಳನ್ನು ಮಕ್ಕಳಿಗೆ ಹೀಗೆ ದೃಶ್ಯಗಳಲ್ಲಿ ಕಟ್ಟಿಕೊಟ್ಟಾಗ ಅದು ಮಕ್ಕಳ ಮನಸ್ಸಿನಲ್ಲಿ ಅಚ್ಚೊತ್ತಿ ನಿಲ್ಲುತ್ತದೆ. ತುಳುನಾಡಿನ ಗುಡ್ಡ, ಬೆಟ್ಟ, ನದಿ, ಬಯಲು, ಗದ್ದೆ, ತೋಡು, ತೋಟ ಇವುಗಳೆಲ್ಲ ದೊಡ್ಡವರ ಗಮನಕ್ಕೆ ಬಂದಿರುತ್ತದೆ. ಆದರೆ ಇಂದಿನ ಮಕ್ಕಳ ಗಮನಕ್ಕೆ ಬರಬೇಕಾದ ಅಗತ್ಯವಿದೆ. ಹಾಗಾಗಿ ಮಕ್ಕಳನ್ನು ಬಳಸಿಕೊಂಡು ಆ ದೃಶ್ಯಗಳನ್ನು ದೃಶ್ಯೀಕರಿಸಿ ಮಕ್ಕಳಿಗೆ ನೀಡಿದಾಗ ಆಪ್ತವಾಗುತ್ತದೆ. ಇದರಿಂದ ನಾಡಿನ ಬಗೆಗೆ ಭಾಷೆಯ ಬಗೆಗೆ ಮಕ್ಕಳಲ್ಲಿ ಕಿಂಚಿತ್ತಾದರೂ ಜಾಗೃತಿ ಮೂಡುವ ಸಾಧ್ಯತೆ ಇದೆ.” ಎಂದರು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಿರಿಯ ಕವಿ ಹಾಗೂ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮಾತನಾಡಿ “ತುಳುವಿನಲ್ಲಿ ಈ ರೀತಿಯ ಮಕ್ಕಳ ಹಾಡುಗಳು ಇದುವರೆಗೆ ಬಂದಿಲ್ಲ. ಇದೊಂದು ಐತಿಹಾಸಿಕ ದಾಖಲೆ. ತುಳುವನ್ನು ಈ ರೀತಿ ಮಕ್ಕಳಿಗೆ ದಾಟಿಸಬೇಕಾದ ತುರ್ತು ಅಗತ್ಯ ಇಂದಿನ ದಿನಗಳಲ್ಲಿ ಇದೆ.” ಎಂದರು.
    ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ “ತುಳುವನ್ನು ಶಿಕ್ಷಣದ ಮೂಲಕ ಕಟ್ಟುವ ಅಗತ್ಯ ಇಂದು  ಬಹಳ ಇದೆ.” ಎಂದರು.
    ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕರಾದ ಎಲ್ಲೂರು ಶ್ರೀನಿವಾಸ ರಾವ್, ಹಾಡುಗಳ ನಿರ್ಮಾಣ ನಿರ್ದೇಶನ ಮತ್ತು ಸಂಕಲನ ಮಾಡಿದ ಶ್ರೀಮತಿ ವಿದ್ಯಾ ಯು., ಹಾಡುಗಳನ್ನು ಹಾಡಿದ ಮಕ್ಕಳು, ಹಾಡುಗಳಲ್ಲಿ ಅಭಿನಯಿಸಿದ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ದೀಪ ಪ್ರಜ್ವಲನಗೊಳಿಸಿದರು. ವಿನಮ್ರ ಇಡ್ಕಿದು ಪ್ರಾರ್ಥಿಸಿ, ರಘು ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ
    Next Article ಹೊಸಪೇಟೆಯಲ್ಲಿ ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನ | ಅಕ್ಟೋಬರ್ 29
    roovari

    Add Comment Cancel Reply


    Related Posts

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ‘ಉಮ್ಮಕ್ಕೆನ ನೆಂಪು’ | ಆಗಸ್ಟ್ 17

    August 16, 2025

    ಉಡುಪಿಯಲ್ಲಿ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

    August 16, 2025

    ಗ್ರಂಥಾಲಯ ವಿಜ್ಞಾನ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ರವರ ನೆನಪು ಕಾರ್ಯಕ್ರಮ

    August 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.