Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಳುಕೂಟ(ರಿ) ಬೆದ್ರ ಇದರ ತಿಂಗಳ ಕಾರ್ಯಕ್ರಮ ‘ತುಳುನಾಡಿನ ಭೂತಾರಾಧನೆ’
    Literature

    ತುಳುಕೂಟ(ರಿ) ಬೆದ್ರ ಇದರ ತಿಂಗಳ ಕಾರ್ಯಕ್ರಮ ‘ತುಳುನಾಡಿನ ಭೂತಾರಾಧನೆ’

    November 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದಿರೆ : ತುಳುಕೂಟ(ರಿ) ಬೆದ್ರ ಇದರ ತಿಂಗಳ ಕಾರ್ಯಕ್ರಮದಲ್ಲಿ ದಿನಾಂಕ 04-11-2023 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ‘ತುಳುನಾಡಿನ ಭೂತಾರಾಧನೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಈ ವರ್ಷದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಭಾಗ ಮುಖ್ಯಸ್ಥರೂ ಆಗಿರುವ ಡಾ. ರವೀಶ್ ಪಡುಮಲೆಯವರು “ತುಳುವರ ಆಚಾರ ವಿಚಾರಗಳು ಬದಲಾಗುತ್ತಾ ವಿಕೃತಿಯೆಡೆಗೆ ಸಾಗುತ್ತಿದ್ದರೆ ಅವರು ನಂಬಿಕೊಂಡು ಬಂದ ದೈವಾರಾಧನೆಯು ಕೂಡಾ ಹಾದಿ ತಪ್ಪುತ್ತಿದೆ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಂಡು ತುಳು ಸಂಸ್ಕೃತಿ, ಪರಂಪರೆಯನ್ನು ಉಳಿಸಲು ಪ್ರಯುತ್ನಿಸಬೇಕಾಗಿದೆ. ಇತ್ತೀಚೆಗೆ ಚಂದ ಕಾಣಬೇಕೆಂಬ ಇರಾದೆಯಿಂದ ಯಕ್ಷಗಾನ ಶೈಲಿಯ ಬಣ್ಣಗಾರಿಕೆಯನ್ನು ಮಾಡಲಾಗುತ್ತಿದೆ. ವೇಷಭೂಷಣಗಳಲ್ಲೂ ಬದಲಾವಣೆ ತರಲಾಗುತ್ತಿದೆ. ಪರಂಪರೆಗೆ ಅಪಚಾರವೆಸಗುವ ಇಂತಹ ಕೃತ್ಯಗಳನ್ನು ಪ್ರಶ್ನಿಸುವ ಮನೋಭಾವವನ್ನು ತುಳುವರು ಬೆಳೆಸಿಕೊಳ್ಳಬೇಕಾಗಿದೆ. ಇದರ ಜೊತೆಗೆ ದೈವಾರಾಧನೆಯ ಪರಂಪರೆ ದಾರಿ ತಪ್ಪುವಲ್ಲಿ ಈಗ ಚಾಲ್ತಿಯಲ್ಲಿರುವ ಕಂಟ್ರಾಕ್ಟ್ ಪದ್ಧತಿಯೂ ಕಾರಣವಾಗುತ್ತಿದೆ.” ಎಂದು ವಿಷಾದಿಸಿದರು.

    ಸ್ವತಃ ದೈವನರ್ತಕರೂ ಆಗಿರುವ ಡಾ.ರವೀಶ್ ಅವರು ದೈವಾರಾಧನೆ ನಡೆದು ಬಂದ ದಾರಿ, ಅದರ ಮಹತ್ವ, ಬೇರೆ ಬೇರೆ ದೈವಗಳಿಗಿರುವ ಬಣ್ಣಗಾರಿಕೆ ಮತ್ತು ಉಡುಗೆ ತೊಡುಗೆ, ಕಟ್ಟು ಕಟ್ಟಳೆಗಳ ಬಗ್ಗೆ ವಿವರಿಸಿದರು.

    ತುಳುಕೂಟದ ಅಧ್ಯಕ್ಷರಾದ ಧನಕೀರ್ತಿ ಬಲಿಪ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಚೇತನಾ ರಾಜೇಂದ್ರ ಪ್ರಾರ್ಥಿಸಿ, ಕಾರ್ಯದರ್ಶಿಗಳಾದ ಕೆ.ವೇಣುಗೋಪಾಲ ಶೆಟ್ಟಿ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಸದಾನಂದ ನಾರಾವಿಯವರು ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕುಶಾಲನಗರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕನ್ನಡ ರಾಜ್ಯೋತ್ಸವ
    Next Article ‘ಶುಭವರ್ಣ ಯಕ್ಷ ಸಂಪದ’ ಸಂಸ್ಥೆಯ ವಾರ್ಷಿಕೋತ್ಸವ | ನವೆಂಬರ್ 18ರಂದು
    roovari

    Add Comment Cancel Reply


    Related Posts

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಅಮೃತ ಸೋಮೇಶ್ವರರ ನಾಟಕಗಳ ಅನುವಾದ ಕೃತಿ ಬಿಡುಗಡೆ | ಜನವರಿ 14

    January 12, 2026

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.