Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರು ತಾಲೂಕು ಮಟ್ಟದ ‘ತುಳುವೆರೆ ಮೇಳೊ – 2024’
    Awards

    ಪುತ್ತೂರು ತಾಲೂಕು ಮಟ್ಟದ ‘ತುಳುವೆರೆ ಮೇಳೊ – 2024’

    March 12, 2024No Comments4 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರು ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ತುಳು ಕೂಟೊ ಪುತ್ತೂರು ತಾಲೂಕು ಇದರ ವತಿಯಿಂದ ‘ತುಳುವೆರೆ ಮೇಳೊ-2024’ ಕಾರ್ಯಕ್ರಮವು ದಿನಾಂಕ 03-03-2024ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು “ತುಳು ಭಾಷೆ ರಾಜ್ಯದ 2ನೇ ಭಾಷೆ ಆಗದೇ ನಮಗೆ ಗೌರವ ಇಲ್ಲ. ಆಗ ತುಳು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗುತ್ತದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಇರಬೇಕು. ತುಳುವರ ಮನಸ್ಸು, ದೊಡ್ಡದು. ತುಳು ಪ್ರಾದೇಶಿಕ ಮತ್ತು ವ್ಯವಹಾರಿಕ ಭಾಷೆ, ಜಾತಿ, ವರ್ಣ, ಪಂಗಡ ಬಿಟ್ಟು ತುಳು ಭಾಷೆ ಮಹತ್ವ ಪಡೆದಿದೆ. ತುಳು ಭಾಷೆಗೆ ಭಾವನಾತ್ಮಕ ಸಂಬಂಧವಿದೆ. ಈಗ ವಿಧಾನಸಭೆಯಲ್ಲೂ ತುಳು ಭಾಷೆ ಕೇಳಲು ಆರಂಭವಾಗಿದೆ. ಇದಕ್ಕೆ ಶಾಸಕರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು. ತುಳು ಲಿಪಿ ನಮ್ಮಲ್ಲಿ ಇದೆ. ತುಳುವಿಗೆ ಅಂಕೆ ಸಂಖ್ಯೆಯೂ ಇದೆ. ಹಾಗಾಗಿ ಜಾತಿ ಮತ ಪಂಗಡ ಬಿಟ್ಟು ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ಮಾಡೋಣ” ಎಂದು ಹೇಳಿದರು. ಶ್ರೀಗಳು ಸಭಾ ಕಾರ್ಯಕ್ರಮದ ವೇದಿಕೆಗೆ ಆಗಮಿಸುವ ಮೊದಲು ಗೋವುಗಳಿಗೆ ತಿನಸು ನೀಡುವ ಮೂಲಕ ತುಳು ಸಂಪ್ರದಾಯಕ್ಕೆ ಚಾಲನೆ ನೀಡಿದರು.

    ತುಳುವೆರೆ ಮೇಳೊ ಸಮಿತಿ ಗೌರವಾಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಅವರು ಕಲಸೆಗೆ ಭತ್ತವನ್ನು ಸುರಿಯುವ ಮೂಲಕ ತುಳು ಸಂಸ್ಕೃತಿಗೆ ಚಾಲನೆ ನೀಡಿ ಮಾತನಾಡಿ, “ತುಳು ಮಾತನಾಡುವ ಮೂಲಕ ನಮ್ಮ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದು ನಮ್ಮ ಮೂಲ ಉದ್ದೇಶ. ಈ ಕುರಿತು ದೆಹಲಿಯ ತನಕ ಹೋಗಿ ಆಗಿದೆ. ಆರಂಭದಲ್ಲಿ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಒಡಿಯೂರು ಶ್ರೀಗಳು ತುಳು ಭಾಷೆಯ ಬಗ್ಗೆ ಹಲವು ಪ್ರಯತ್ನಪಟ್ಟರು. ಈಗ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆ ಸದಸ್ಯರಾಗಿರುವುದು ತುಳು ಭಾಷೆಗೆ ಶಕ್ತಿ ಸಿಕ್ಕಿದೆ. ಜಿಲ್ಲೆಯ ಆರು ತಾಲೂಕಿನಲ್ಲಿಯೂ ತುಳುವೆರೆ ಮೇಳೊ ನಡೆಸಿ ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸುವ ಕೆಲಸ ಆಗಬೇಕು. ತುಳುವಿನ ಉಳಿವಿಗಾಗಿ ಹೆಚ್ಚು ಪ್ರಯತ್ನ ಮಾಡಿದ ಪಾಲ್ತಾಡಿ ರಾಮಕೃಷ್ಣ ಆಚಾರ್, ವಿವೇಕ್ ರೈ, ಡಾ. ಚಿನ್ನಪ್ಪ ಗೌಡ, ಎಸ್.ಆರ್. ರೈ, ಎ.ಸಿ. ಭಂಡಾರಿ ಹಾಗೂ ಇನ್ನಿತರ ಮುಖಂಡರ ಮೂಲಕ ಸರಕಾರಕ್ಕೆ ಒತ್ತಡ ಹಾಕುವ ಕೆಲಸ ಆಗ ಬೇಕು” ಎಂದರು.

    ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಎ.ಸಿ. ಭಂಡಾರಿ ಅವರು ಮಾತನಾಡಿ, “ಮಾತೃಭಾಷೆ ಬೇರೆ ಆದರೂ ತುಳುವಿಗೆ ಪ್ರಾಮುಖ್ಯತೆ ಕೊಡುವುದು ಬಹಳ ಮುಖ್ಯ. ತುಳು ಭಾಷೆಗಾಗಿ 44 ಕೂಟ ಕೆಲಸ ಮಾಡುತ್ತಿವೆ. ಇದರ ಉದ್ದೇಶ ತುಳು ಭಾಷೆ, ಸಂಸ್ಕೃತಿ, ವಿಚಾರ ಉಳಿಸುವ ಕೆಲಸವಾಗಿದೆ. ಪಂಚ ದ್ರಾವಿಡ ಭಾಷೆಯಲ್ಲಿ ತುಳುವಿಗೆ ಮಾತ್ರ ಗೌರವ ಸಿಗಲಿಲ್ಲ, ತುಳುವನ್ನು ರಾಜ್ಯ ಭಾಷೆ ಮಾಡುವ ನಿಟ್ಟಿನಲ್ಲಿ ಅದಷ್ಟು ಬೇಗ ಸಮಿತಿ ರಚನೆ ಮಾಡಲಾಗುವುದು. ಮೇ 17ರಂದು ಮಂಗಳೂರು ಪುರಭವನದಲ್ಲಿ ತುಳು ಉಚ್ಚಯ ಕಾರ್ಯಕ್ರಮ ನಡೆಯಲಿದೆ” ಎಂದರು.

    ತುಳುವೆರೆ ಮೇಳೊ ಇದರ ಅಧ್ಯಕ್ಷರಾದ ರೆ. ವಿಜಯ ಹಾರ್ವಿನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಮಾತೃ ಭಾಷೆಯೊಂದಿಗೆ ವ್ಯವಹಾರಿಕ ಭಾಷೆ ಉಳಿಸಬೇಕು. ಭಾಷೆ ಜಾತಿಗೆ ಸೀಮಿತವಾಗಿಲ್ಲ. ತುಳು ಭಾಷೆ ನಮ್ಮನ್ನು ಕಟ್ಟಿ ಹಾಕುವ ದೊಡ್ಡ ದಾರದ ಹಾಗಿದೆ. ನಮ್ಮನ್ನು ಒಟ್ಟು ಮಾಡಿ ನಮಗೆ ಶಕ್ತಿ ನೀಡಿದೆ. ಮುಂದೆ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಲು ಪೂರಕ ಕಾರ್ಯಕ್ರಮ ಇದಾಗಿದೆ. ತುಳುವಿನಲ್ಲಿ ಹಲವು ಮಂದಿ ಕೆಲಸ ಮಾಡಿದವರಿದ್ದಾರೆ. ಅವರನ್ನು ನೆನಪು ಮಾಡುವ ಮೂಲಕ ತುಳು ಭಾಷೆಯ ಮಹತ್ವ ಅರಿಯಬೇಕು” ಎಂದರು.

    ಇದೇ ಸಂದರ್ಭದಲ್ಲಿ ಐವರು ಸಾಧಕರಿಗೆ ‘ಬಿರ್ದ್‌ದ ತುಳುವರ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ವಿಜಯ ಕುಮಾರ್ ಹೆಬ್ಬಾರಬೈಲು, ಯೂಸೂಪ್ ಮಠ, ಕೊಳ್ತಿಗೆ ನಾರಾಯಣ ಗೌಡ, ಯಮುನಾ ಪೂಜಾರಿ ಮತ್ತು ಗುಬ್ಬಿ ಕಮ್ಮಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಳ್ತಿಗೆ ನಾರಾಯಣ ಗೌಡ ಸನ್ಮಾನಿತರ ಪರವಾಗಿ ಮಾತನಾಡಿದರು. ತುಳುವರೆ ಮೇಳೊ ಸಮಿತಿ ಕಾರ್ಯದರ್ಶಿ ಡಾ. ರಾಜೇಶ್ ಬೆಜ್ಜಂಗಳ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು.

    ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಅವರು ಮಾತನಾಡಿ, “ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ ಜಿಲ್ಲೆಯ ಶಾಸಕರು ವಿಧಾನಸಭೆಯಲ್ಲಿ ತುಳುವಿನಲ್ಲಿ ಮಾತನಾಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್‌ರವರು ಇದಕ್ಕೆ ಪೂರಕವಾಗಿರುವುದರಿಂದ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರುವಲ್ಲಿ ಸಂಶಯವಿಲ್ಲ. ಶ್ರೀಕ್ಷೇತ್ರ ಧರ್ಮಸ್ಥಳದ ಖಾವಂದರು, ಒಡಿಯೂರು ಶ್ರೀಗಳು ಬೇಕಾದಷ್ಟು ಕೆಲಸ ಮಾಡಿದ್ದಾರೆ. ಮೂಡಬಿದ್ರೆ ಮೋಹನ್ ಆಳ್ವರು ಸಹ ತುಳುವಿನ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಬರುವಂತೆ ಕೆಲಸ ಮಾಡುತ್ತಿದ್ದಾರೆ. ಸಂಸದರು ತುಳು ಭಾಷೆಗೆ ಮಹತ್ವ ಕೊಟ್ಟಿದ್ದಾರೆ. ಮುಂದೆ ಪಾರ್ಲಿಮೆಂಟ್‌ನಲ್ಲಿ ತುಳು ಭಾಷೆ ಮಾತನಾಡುವ ಕಾಲ ಮೂಡಿ ಬರಲಿ” ಎಂದರು.

    ನಗರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿಯವರು ಮಾತನಾಡಿ “ತುಳು ಭಾಷೆಗಾಗಿ ನಾವು ನಮ್ಮ ಸಮಯ ಕೊಡಬೇಕು. ಎಳೆ ವಯಸ್ಸಿನಲ್ಲೇ ತುಳು ಭಾಷೆಯ ಆಸಕ್ತಿ ಮೂಡಿಸಲು ಅಂಗನವಾಡಿ ಮಕ್ಕಳಗೆ ಸ್ಪರ್ಧೆ ಏರ್ಪಡಿಸಬೇಕು. ಶಾಲೆಗಳಲ್ಲಿ ತುಳು ಭಾಷೆಗೆ ಪ್ರಾಧಾನ್ಯತೆ ಕೊಡಬೇಕು. ಪ್ರಯತ್ನ, ಮನಸ್ಸು ಮತ್ತು ಇಚ್ಛಾಶಕ್ತಿಯಿದ್ದರೆ ತುಳು ಭಾಷೆಯ ಗೌರವ ಹೆಚ್ಚುತ್ತದೆ” ಎಂದರು.

    ತುಳುಕೂಟೊ ಪುತ್ತೂರು ಇದರ ಅಧ್ಯಕ್ಷರಾಗಿರುವ ತುಳುವೆರೆ ಮೇಳೊ ಕಾರ್ಯಾಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, 2023ರಲ್ಲಿ ತುಳು ಮೇಳ ಮಾಡಲಾಗಿದೆ. ತುಳುವೆರೆ ಮೇಳೊ 2ನೇ ಸಮ್ಮೇಳನವಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಸಿಕ್ಕಿದೆ. ಕಳೆದ ವರ್ಷದಿಂದ ಸುಮಾರು 10 ವಿವಿಧ ಕಾರ್ಯಕ್ರಮ ಮಾಡಿದ್ದೇವೆ. ಮುಂದೆಯೂ ನಿರಂತರ ಕಾರ್ಯಕ್ರಮ ನಡೆಯಲಿದೆ ಎಂದರು.

    ತುಳುವೆರೆ ಮೇಳೊ ಕಾರ್ಯಕ್ರಮದ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸಂಚಾಲಕ ವೆಂಕಟರಮಣ ಕಳುವಾಜೆ, ತುಳುಕೂಟೊ ಇದರ ಉಪಾಧ್ಯಕ್ಷೆ ಹೀರಾ ಉದಯ್, ಜೊತೆ ಕಾರ್ಯದರ್ಶಿಗಳಾದ ನಯನಾ ರೈ, ಉಲ್ಲಾಸ್ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಯನಾ ರೈ ನೆಲ್ಲಿಕಟ್ಟೆ ಪ್ರಾರ್ಥಿಸಿದರು. ತುಳುವೆರೆ ಮೇಳೊ ಸಮಿತಿ ಕಾರ್ಯದರ್ಶಿ ಡಾ. ರಾಜೇಶ್ ಬೆಜ್ಜಂಗಳ ವಂದಿಸಿದರು. ಕಡಬ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮೊದಲು ಬೆಳಿಗ್ಗೆ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಮಂಡಳಿ ಪುತ್ತೂರು ಘಟಕದ ವತಿಯಿಂದ ತುಳು ಪದರಂಗಿತ ನಡೆಯಿತು.

    ಸಭಾ ಕಾರ್ಯಕ್ರಮದ ಬಳಿಕ ಅಮೃತ ಸೋಮೇಶ್ವರ ಅವರ ನೆನವು ‘ತುಳುವಾಮೃತ’ ಕಾರ್ಯಕ್ರಮ ನಡೆಯಿತು. ತುಳುಕೂಟೊ ಇದರ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ವಿಶ್ರಾಂತ ಪ್ರಾಂಶುಪಾಲ ಝೇವಿಯರ್ ಡಿ’ಸೋಜ ಉಪಸ್ಥಿತರಿದ್ದರು. ಸಾಹಿತಿ ಪ್ರೊ. ವಿ.ಬಿ. ಅರ್ತಿಕಜೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಹಿಳಾ ಕಾಲೇಜಿನ ಉಪನ್ಯಾಸಕ ನರೇಂದ್ರ ರೈ ದೇರ್ಲ, ರಂಗ ನಿರ್ದೇಶಕ ಐ.ಕೆ. ಬೊಳುವಾರು, ಯಕ್ಷಗಾನ ಕಲಾವಿದ ಜಬ್ಬರ್ ಸಮೋ ಪ್ರಬಂಧ ಮಂಡನೆ ಮಾಡಿದರು. ಬಳಿಕ ಕಬಿ ಕೂಟೊ, ‘ಸಮರ ಸೌಗಂಧಿಕಾ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ, ಬಲೆ ತೆಲಿಪುಕೊ ಹಾಸ್ಯ, ತುಳು ಸಿನಿಮಾ ಪದೊಕುಲು, ತುಳು ಹಾಸ್ಯ ನಾಟಕ ‘ನಂಬಿಕೆ ದಾಯೆಗ್’ ಪ್ರದರ್ಶನಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸತೀಶ್ ಶೆಟ್ಟಿ ವಕ್ವಾಡಿಯವರ ‘ಕೊನೆಯ ಎರಡು ಎಸೆತಗಳು’
    Next Article ಖ್ಯಾತ ಅಷ್ಟಾವಧಾನಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜರಿಗೆ ‘ಮುಳಿಯ ಪ್ರಶಸ್ತಿ- 2024’
    roovari

    Add Comment Cancel Reply


    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.