Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಡಾ. ವಿರೂಪಾಕ್ಷ ದೇವರಮನೆಯವರ ಎರಡು ಕೃತಿಗಳ ಲೋಕಾರ್ಪಣೆ | ಅಕ್ಟೋಬರ್ 29ರಂದು
    Book Release

    ಉಡುಪಿಯಲ್ಲಿ ಡಾ. ವಿರೂಪಾಕ್ಷ ದೇವರಮನೆಯವರ ಎರಡು ಕೃತಿಗಳ ಲೋಕಾರ್ಪಣೆ | ಅಕ್ಟೋಬರ್ 29ರಂದು

    October 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಡಾ. ವಿರೂಪಾಕ್ಷ ದೇವರಮನೆಯವರ ‘ಕಣ್ಣಿಗೆ ಕಾಣುವ ದೇವರು’ ಮತ್ತು ‘DID YOU TALK TO YOUR CHILD TODAY’ ಎಂಬ ಎರಡು ಕೃತಿಗಳು ದಿನಾಂಕ 29-10-2023ರಂದು ಸಂಜೆ 5 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವ ಹಿರಿಯ ಸಾಹಿತಿ ಯಂಡಮೂರಿ ವೀರೇಂದ್ರನಾಥ್ ಇವರು ‘ಪೋಷಕರು ಆರು ಬಗೆ’ ಮತ್ತು ರೂಬಿಕ್ಸ್ ಕ್ಯೂಬ್ ಗ್ರಾಂಡ್ ಮಾಸ್ಟರ್ ಆಫಾನ್ ಕುಟ್ಟಿ ಇವರು ‘ಅಂತರ್ಜಾಲ ವ್ಯಸನದಿಂದ ರೂಬಿಕ್ಸ್ ಕ್ಯೂಬ್ ನ ಇಂದ್ರಜಾಲದತ್ತ’ ಎಂಬ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

    ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ. ಪಿ.ವಿ. ಭಂಡಾರಿ, ಒನ್ ಗುಡ್ ಸ್ಟೆಪ್ ಇದರ ಸ್ಥಾಪಕರು ಮತ್ತು ಟ್ರಸ್ಟಿಗಳಾದ ಅಮಿತಾ ಪೈ ಮತ್ತು ಸಾವಣ್ಣ ಪ್ರಕಾಶನ ಇದರ ಪ್ರಕಾಶಕರಾದ ಜಮೀಲ್ ಸಾವಣ್ಣ ಇವರುಗಳು ನಮ್ಮೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಡಾ. ವಿರೂಪಾಕ್ಷ ದೇವರಮನೆ ಮತ್ತು ಡಾ. ವೀಣಾ ವಿರೂಪಾಕ್ಷ ಇವರುಗಳು ತಮ್ಮೆಲ್ಲರಿಗೂ ಸ್ವಾಗತ ಕೋರಿದ್ದಾರೆ.

    ವಿರೂಪಾಕ್ಷ ದೇವರಮನೆ ಮೂಲತಃ ಹೊಸಪೇಟೆಯ ನಾಗೇನಹಳ್ಳಿಯವರು. ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಹಾಗೂ ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ ಮನೋವೈದ್ಯಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು 2008ರಿಂದ ಉಡುಪಿಯ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಲೇಖಕರಾದ ವೈದ್ಯರು ಮಾನವ ಸಂಬಂಧಗಳು, ಸಂಬಂಧಗಳಲ್ಲಿ ಸಂವಹನ ಹಾಗೂ ಸಾಮರಸ್ಯ, ಪೇರೆಂಟಿಂಗ್, ಮಕ್ಕಳ ಆರೈಕೆ ಹಾಗೂ ಪೋಷಣೆಯ ಕುರಿತ ಉಪನ್ಯಾಸಗಳ ಮೂಲಕ ಪರಿಚಿತರು. ಮಕ್ಕಳು, ಹದಿಹರೆಯದವರು ಮತ್ತು ಯುವಜನತೆಯ ಶಿಕ್ಷಣ, ಬೆಳವಣಿಗೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಆಸಕ್ತಿ ಹೊಂದಿದ್ದು ಮದ್ಯವ್ಯಸನಿಗಳ ಮಕ್ಕಳಿಗಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸದ್ಯ ಮಣಿಪಾಲದಲ್ಲಿ ನೆಲೆಸಿದ್ದಾರೆ. ‘ಸ್ವಲ್ಪ ಮಾತಾಡಿ ಪ್ಲೀಸ್’, ‘ಮಕ್ಕಳತ್ರ ಮಾತಾಡಿ ಪ್ಲೀಸ್’, ನೀನು ಒಂಟಿಯಲ್ಲ’, ನೀನಿಲ್ಲದೆ ನನಗೇನಿದೆ’ ಇತ್ಯಾದಿ ಇವರ ಮನೋವೈಜ್ಞಾನಿಕ ಕೃತಿಗಳು.

    Share. Facebook Twitter Pinterest LinkedIn Tumblr WhatsApp Email
    Previous Article‘ಚಡಗ ಕಾದಂಬರಿ ಪ್ರಶಸ್ತಿ’ಗೆ ಶಶಿಧರ ಹಾಲಾಡಿ ಮತ್ತು ‘ಚಡಗ ಸಂಸ್ಕರಣಾ ಪುರಸ್ಕಾರ’ಕ್ಕೆ ಬಿ.ಜಿ. ಸತ್ಯಮೂರ್ತಿಯವರು ಆಯ್ಕೆ
    Next Article ಮಂಗಳೂರು ವಿವಿ ಕನಕ ಪೀಠದಿಂದ ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 4
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.