Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಆಸ್ಟ್ರೋ ಮೋಹನ್ ರವರ ‘ಉಡುಪಿ ಮಣಿಪಾಲ ಅಂದು-ಇಂದು’ ಮಿನಿ ಕಾಫಿಟೇಬಲ್ ಪುಸ್ತಕ ಲೋಕಾರ್ಪಣೆ
    Book Release

    ಉಡುಪಿಯಲ್ಲಿ ಆಸ್ಟ್ರೋ ಮೋಹನ್ ರವರ ‘ಉಡುಪಿ ಮಣಿಪಾಲ ಅಂದು-ಇಂದು’ ಮಿನಿ ಕಾಫಿಟೇಬಲ್ ಪುಸ್ತಕ ಲೋಕಾರ್ಪಣೆ

    February 3, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ದಿನಾಂಕ 01 ಫೆಬ್ರವರಿ 2025ರಂದು ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಉದಯವಾಣಿಯ ಹಿರಿಯ ಛಾಯಚಿತ್ರಗಾಹಕ ಆಸ್ಟ್ರೋ ಮೋಹನ್ ರವರ ‘ಉಡುಪಿ-ಮಣಿಪಾಲ ಅಂದು ಇಂದು’ ಮಿನಿ ಕಾಫಿಟೇಬಲ್ ಪುಸ್ತಕ ಲೋಕಾರ್ಪಣೆ ನಡೆಯಿತು.

    ಈ ಸಮಾರಂಭದಲ್ಲಿ ಭಾಗವಹಿಸಿ ಕೃತಿ ಬಿಡುಗಡೆಗೊಳಿಸಿದ ಮಾಹೆ ವಿ.ವಿ. ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ “ಕಳೆದ ಐದು ದಶಕಗಳಲ್ಲಿ ಉಡುಪಿ ಮಣಿಪಾಲದಲ್ಲಿ ಆದಷ್ಟು ಬದಲಾವಣೆ ಬೇರೆ ಯಾವ ಜಿಲ್ಲೆಯಲ್ಲೂ ಆಗಿಲ್ಲ. ಉಡುಪಿ ಮಣಿಪಾಲದ ನಡುವೆ ಈಗ ಅಂತರವೇ ಇಲ್ಲದಾಗಿದೆ. ಈ ಬದಲಾವಣೆಯಲ್ಲಿ ಡಾ. ಟಿ.ಎಂ.ಎ. ಪೈ ಅವರ ಕೊಡುಗೆಯೂ ಇದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಉಡುಪಿ ಮಣಿಪಾಲ ಸಾಕಷ್ಟು ಬದಲಾವಣೆ ಕಂಡಿದೆ. ಜಾಗತಿಕ ಮಟ್ಟದಲ್ಲೂ ಖ್ಯಾತಿ ಪಡೆದಿದೆ. ವನ್ಯಜೀವಗಳು ಸೇರಿದಂತೆ ಗುಡ್ಡ ಪ್ರದೇಶವಾಗಿದ್ದ ಮಣಿಪಾಲದಲ್ಲಿ 1953ರಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಮೂಲಕ ಡಾ. ಟಿ.ಎಂ.ಎ. ಪೈ ಅವರು ಬೆಳವಣಿಗೆಯ ಬದಲಾವಣೆಗೆ ಚಾಲನೆ ನೀಡಿದ್ದರು. ಅನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಣುತ್ತಾ ಬಂದಿದೆ. ಕಂಬಳ ಕರಾವಳಿಯ ಪ್ರತಿಷ್ಠೆಯ ಸಂಕೇತವಾಗಿದೆ. ಮಣಿಪಾಲದಲ್ಲಿ ಕಂಬಳ ಆಯೋಜನೆ ಆಗಬೇಕು ಎಂದು ಕೇಳಿ ಬರುತ್ತಿದೆ. ಇದಕ್ಕೆ ಮಾಹೆ ಪೂರ್ಣ ಸಹಕಾರ ನೀಡಲಿದೆ. ಆಸ್ಟ್ರೋ ಮೋಹನ್ ಅವರ ಚಿತ್ರಗಳು ಕ್ವಾಲಿಟಿಗೆ ಹೆಸರುವಾಸಿ. ಅವರ ಈ ಪುಸ್ತಕವನ್ನು ಮಾಹೆ ವಿ.ವಿ.ಯಲ್ಲೂ ಇಡಲಾಗುವುದು” ಎಂದು ಹೇಳಿದರು.

    ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಟಿ. ಸತೀಶ್ ಯು. ಪೈಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, “ಮಣಿಪಾಲದ ಮಣ್ಣಪಳ್ಳದಲ್ಲಿ ಕಂಬಳ ಆಯೋಜಿಸಲು ಚಿಂತನೆ ನಡೆಸಿದ್ದೇವೆ. ಯುವ ಜನತೆ ಅಭಿವೃದ್ಧಿಗೆ ಕೊಡುಗೆ ನೀಡಲು ಈ ಪುಸ್ತಕ ಸಹಕಾರಿಯಾಗಲಿದೆ. ವಿಶ್ವದಲ್ಲೇ ವಿಶಿಷ್ಟ ಸ್ಥಾನ ಪಡೆದ ಉಡುಪಿ, ಮಣಿಪಾಲ ಮುಂದಿನ 20, 25 ವರ್ಷಗಳಲ್ಲಾಗುವ ಅಭಿವೃದ್ಧಿಯಲ್ಲಿ ಯುವಜನರು ಕೈ ಜೋಡಿಸಬೇಕು. ಕೃಷ್ಣ ಕಾರಿಡಾರ್ ಸಹಿತ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಇದಕ್ಕೆ ಮಣಿಪಾಲ ವಿವಿ ನೆರವು ಅಗತ್ಯವಾಗಿದೆ” ಎಂದರು.

    ಅದಾನಿ ಸಮೂಹದ ಕಾರ್ಯನಿರ್ವಾಹಕ ಅಧ್ಯಕ್ಷ ಕಿಶೋರ್ ಆಳ್ವ, ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು, ಕ.ಸಾ.ಪ. ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಮಾತನಾಡಿದರು. ಪ್ರಾಧ್ಯಾಪಿಕೆ ಡಾ. ನಿಕೇತನಾ ಕೃತಿ ಪರಿಚಯ ಮಾಡಿದರು. ಭೂತರಾಜ ಪಬ್ಲಿಕೇಶನ್ ಸಂಸ್ಥೆಯ ಪ್ರವೀಣಾ ಮೋಹನ್ ಉಪಸ್ಥಿತರಿದ್ದರು. ಆಸ್ಟ್ರೋ ಮೋಹನ್ ಸ್ವಾಗತಿಸಿ, ಪೂರ್ಣಿಮಾ ಜನಾರ್ದನ ನಿರೂಪಿಸಿ, ಜನಾರ್ದನ ಕೊಡವೂರು ವಂದಿಸಿದರು.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ‘ಉಡುಪಿ ಚಾವಡಿ’ ಅಭಿಯಾನ ಪ್ರಾರಂಭ
    Next Article ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಫೆಬ್ರವರಿ 06 ಮತ್ತು 07
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.