Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಂದ ಯಕ್ಷಗಾನ ‘ಶ್ವೇತ ಕುಮಾರ ಚರಿತ್ರೆ’
    Yakshagana

    ಉಡುಪಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಂದ ಯಕ್ಷಗಾನ ‘ಶ್ವೇತ ಕುಮಾರ ಚರಿತ್ರೆ’

    July 22, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ ಇಷ್ಟವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವವರು ಲಿಂಗತ್ವ ಅಲ್ಪಸಂಖ್ಯಾತರು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸುವುದು ಮತ್ತು ಅತ್ಯುನ್ನತ ಸಾಧನೆ ಮಾಡುವುದು ಸಾಧ್ಯವಿದೆ. ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ ಆಯೋಜಿಸಿದೆ.

    ಉಡುಪಿ ಜಿಲ್ಲಾಡಳಿತದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಕಳದ ಸ್ತ್ರೀ ಶಕ್ತಿ ಭವನದಲ್ಲಿ ರೂ. 10,000ಗಳ ಸ್ಟೈಫಂಡ್‌ನೊಂದಿಗೆ ದಿನಾಂಕ 05-06-2023ರಿಂದ 04-07-2023ರವರೆಗೆ ಒಂದು ತಿಂಗಳ ಕಾಲ ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನ ಪ್ರದರ್ಶನದ ತರಬೇತಿ ನೀಡಲಾಗಿದೆ.

    ತರಬೇತಿಯಲ್ಲಿ ನೃತ್ಯ, ಅಭಿನಯ, ಸಂಭಾಷಣೆಯಲ್ಲಿ ಪರಿಣಿತ ಸಾಧಿಸಿರುವ ಲಿಂಗತ್ವ ಅಲ್ಪ ಸಂಖ್ಯಾತರು ತರಬೇತಿ ಅಂತ್ಯದಲ್ಲಿ ‘ಶ್ವೇತ ಕುಮಾರ ಚರಿತ್ರೆ’ ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಅದ್ಭುತವಾಗಿ ಪ್ರದರ್ಶಿಸಿ, ನೆರೆದಿದ್ದವರ ಮೆಚ್ಚುಗೆ ಗಳಿಸಿದರು. ಯಕ್ಷಗಾನ ತರಬೇತಿಯ ನಾಟ್ಯ ಗುರುಗಳಾಗಿ ಸುಧೀರ್ ಉಪ್ಪೂರು ಮತ್ತು ವಿಜಯ ಗಾಣಿಗ ಬೀಜಮಕ್ಕಿ, ಚಂಡೆ ಶಶಿಕುಮಾರ್, ಮದ್ದಳೆಯಲ್ಲಿ ನವೀನ್ ಕುಮಾರ್ ಮತ್ತು ಭಾಗವತಿಕೆಯಲ್ಲಿ ಸುದೀಪ್ ಚಂದ್ರ ಶೆಟ್ಟಿ ಸಹಕಾರ ನೀಡಿದ್ದಾರೆ.

    ಯಕ್ಷಗಾನ ತರಬೇತಿ ಪಡೆದಿರುವ ಈ ಲಿಂಗತ್ವ ಅಲ್ಪಸಂಖ್ಯಾತರು ಯಕ್ಷಗಾನ ಪ್ರಸಂಗಗಳಲ್ಲಿ ಸ್ವತಂತ್ರ ವೇಷದಾರಿಗಳಾಗಿ ಅಭಿನಯಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ಮೂಲಕ ಜೀವನ ನಿರ್ವಹಣೆಗಾಗಿ ಆರ್ಥಿಕವಾಗಿ ಸಂಪಾದನೆ ಮಾಡಲು ಹಾಗೂ ತಮ್ಮದೇ ತಂಡಗಳನ್ನು ರಚಿಸಿಕೊಂಡು ಸ್ವತಂತ್ರವಾಗಿ ಕಾರ್ಯಕ್ರಮಗಳನ್ನು ನೀಡಲು ಸಮರ್ಥರಾಗಿದ್ದಾರೆ. ಹೊರ ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಉತ್ಸುಕರಾಗಿರುವ ಇವರಿಗೆ ಸೂಕ್ತ ಪ್ರೋತ್ಸಾಹ, ಬೆಂಬಲ ಮತ್ತು ಅವಕಾಶಗಳನ್ನು ನೀಡುವ ಮಹತ್ತರ ಜವಾಬ್ದಾರಿ ಇಡೀ ಸಮಾಜದ್ದಾಗಿದೆ.

    ಜಿಲ್ಲೆಯಲ್ಲಿ 283 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದು, ಇವರು ಜೀವನ ನಿರ್ವಹಣೆಗೆ ತಮಗೆ ಇಷ್ಟವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬದಲು ಕೌಶಲ್ಯ ತರಬೇತಿಗಳ ಮೂಲಕ ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಯಕ್ಷಗಾನ ತರಬೇತಿ ನೀಡಲಾಗಿದೆ. ಕಲಾ ಪ್ರತಿಭೆಯ ಮೂಲಕ ಅವರು ಸಾಮಾಜಿಕವಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಿದೆ. ಯಕ್ಷಗಾನ ಮಾತ್ರವಲ್ಲದೇ ಇತರೇ ಕೌಶಲ್ಯಯುಕ್ತ ತರಬೇತಿ ಪಡೆಯಲು ಇಚ್ಚಿಸಿದಲ್ಲಿ ಜಿಲ್ಲಾಡಳಿತ ಎಲ್ಲಾ ಅಗತ್ಯ ನೆರವು ನೀಡಲಿದೆ ಎಂದು ಉಡುಪಿಯ ಜಿಲ್ಲಾಧಿಕಾರಿ ಶ್ರೀ ಕೂರ್ಮರಾವ್ ಎಂ. ಹೇಳಿದ್ದಾರೆ.

    ನಮಗೆ ಯಕ್ಷಗಾನದ ಯಾವುದೇ ತಲೆ ಬುಡ ಗೊತ್ತಿರಲಿಲ್ಲ. ಒಂದು ತಿಂಗಳ ಅವಧಿಯಲ್ಲಿ ಗುರುಗಳು ಬಡಗುತಿಟ್ಟು ಮಾದರಿಯಲ್ಲಿ, ಕುಣಿತ, ಸಂಭಾಷಣೆ, ತಾಳ, ಲಯದ ಬಗ್ಗೆ ಸಾಕಷ್ಟು ತರಬೇತಿ ನೀಡಿ ನಾವು ಸ್ವತಂತ್ರವಾಗಿ ರಂಗಸ್ಥಳದಲ್ಲಿ ಪ್ರದರ್ಶನ ನೀಡುವ ಮಟ್ಟಿಗೆ ತಯಾರು ಮಾಡಿದ್ದಾರೆ. ನಮಗೂ ಕೂಡ ಹೆಚ್ಚಿನ ಆತ್ಮವಿಶ್ವಾಸ ಮೂಡಿದೆ. ತರಬೇತಿಯ ಕೊನೆಯ ದಿನದಲ್ಲಿ ನಮ್ಮ ಪ್ರದರ್ಶನ ವೀಕ್ಷಿಸಿದ ಕೆಲವರು ಮೇಳಗಳಿಗೆ ಅತಿಥಿ ಕಲಾವಿದರಾಗಿ ಬರುವಂತೆ ಹಾಗೂ ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡುವಂತೆ ತಿಳಿಸಿದ್ದಾರೆ. ತರಬೇತಿ ಪಡೆದ ಎಲ್ಲಾ ಕಲಾವಿದರೂ ಸೇರಿ ನಮ್ಮದೇ ಆದ ಮಂಡಳಿ ರಚಿಸಿಕೊಂಡು ನಿರಂತರವಾಗಿ ಅಭ್ಯಾಸ ನಡೆಸುವ ಹಾಗೂ ಕಾರ್ಯಕ್ರಮ ನೀಡುವ ಉದ್ದೇಶವಿದೆ. ನಮಗೆ ಈ ತರಬೇತಿಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳು ಎಂದು ತರಬೇತಿ ಪಡೆದ ಲಿಂಗತ್ವ ಅಲ್ಪಸಂಖ್ಯಾತ ಕಲಾವಿದ ಸುಶಾಂತ್ ಹೇಳಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಪುರಭವನದಲ್ಲಿ ‘ಕಲ್ಜಿಗದ ಕಾಳಿ ಮಂತ್ರದೇವತೆ’ | ಜುಲೈ 26ರಂದು
    Next Article ಉಡುಪಿ ಜಿಲ್ಲಾ‌ ನಾಟಕ ಕಲಾವಿದರ ಒಕ್ಕೂಟದ ‘ರಂಗ ಸಂಗಮ’
    roovari

    Add Comment Cancel Reply


    Related Posts

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.