Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗ್ರಂಥಾಂಗಣದಲ್ಲಿ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ ಪ್ರದರ್ಶನ | ಮಾರ್ಚ್ 11
    Drama

    ಗ್ರಂಥಾಂಗಣದಲ್ಲಿ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ ಪ್ರದರ್ಶನ | ಮಾರ್ಚ್ 11

    March 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕೃಷ್ಣಾಪುರ ದೊಡ್ಡಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇದರ ವತಿಯಿಂದ ‘ರೂಪಾಂತರ’ ತಂಡದವರಿಂದ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ ಪ್ರದರ್ಶನವನ್ನು ದಿನಾಂಕ 11 ಮಾರ್ಚ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಹಂಪಿ ನಗರ ಪಶ್ಚಿಮ ವಲಯ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಡಾ. ರಾಮಕೃಷ್ಣ ಮರಾಠೆ ಇವರು ರಚನೆ ಮಾಡಿದ್ದು, ದೇಸಿ ಮೋಹನ್ ಇವರು ಸಂಗೀತ ನೀಡಿದ್ದು, ಕೆ.ಎಸ್.ಡಿ.ಎಲ್. ಚಂದ್ರು ಇವರು ನಿರ್ದೇಶನ ಮಾಡಿರುತ್ತಾರೆ.

    ರೂಪಾಂತರ……..
    ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಹವ್ಯಾಸಿ ರಂಗಭೂಮಿಯಲ್ಲಿ ಕ್ರಿಯಾಶೀಲವಾಗಿರುವ ರಂಗ ತಂಡ. ‘ರೂಪಾಂತರ’ ವಿಶೇಷವಾಗಿ ಕನ್ನಡ ಸಾಹಿತ್ಯ ಲೋಕದ ಮಹತ್ವದ ಲೇಖಕರ ಕಥೆ, ಕಾವ್ಯ, ಆಧಾರಿತ ಕಾದಂಬರಿಗಳ ರಂಗ ಪ್ರಯೋಗಗಳನ್ನು ಈ ನಾಡಿನಾದ್ಯಂತ ಮತ್ತು ಹೊರ ರಾಜ್ಯಗಳಲ್ಲಿ ಯಶಸ್ವಿಯಾಗಿ ಪ್ರದರ್ಶಿಸಿ ಪ್ರೇಕ್ಷಕರ ಮತ್ತು ವಿಮರ್ಷಕರ ಮೆಚ್ಚುಗೆ ಗಳಿಸಿದೆ. ಲಂಕೇಶರ ರೊಟ್ಟಿ, ಮುಸ್ಸಂಜೆ ಕಥಾಪ್ರಸಂಗ, ತೇಜಸ್ವಿಯವರ ಕಿರಗೂರಿನ ಗಯ್ಯಾಳಿಗಳು, ಕರ್ವಾಲೋ, ಕುಂ.ವಿಯವರ ಕತ್ತಲನ್ನು ತ್ರಿಶೂಲ ಹಿಡಿದ ಕಥೆ, ಡಾ.ಶಾಂತರಸರ ಬಡೇಸಾಬು ಪುರಾಣ, ಖುಷ್ವಂತ್ ಸಿಂಗ್ ರವರ ಟ್ರೈನ್ ಟು ಪಾಕಿಸ್ತಾನ್, ವಸುಧೇಂದ್ರರವರ ಮೋಹನ ಸ್ವಾಮಿ, ಡಾ. ಕೆ.ವೈ.ಎನ್. ನಾರಾಯಣ ಸ್ವಾಮಿ, ಡಾ. ಕೆ. ಶಿವರಾಮ ಕಾರಂತರ ಮೈ ಮನಗಳ ಸುಳಿಯಲ್ಲಿ, ಚೋಮನ ದುಡಿ, ಶ್ರೀ ಕೃಷ್ಣ ಆಲನಹಳ್ಳಿಯವರ ಪರಸಂಗದ ಗೆಂಡೆತಿಮ್ಮ ರೂಪಾಂತರ ಪ್ರಯೋಗಿಸಿದ ಕೆಲವು ಮಹತ್ವದ ರಂಗ ಪ್ರಯೋಗಗಳು. ರೂಪಾಂತರ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಪ್ರದರ್ಶಿಸಿದ ಮತ್ತೊಂದು ಮಹತ್ವದ ರಂಗ ಪ್ರಯೋಗ ಸಂತ ಕವಿ ಶ್ರೀ ಕನಕದಾಸರ ಅನನ್ಯ ಕಾವ್ಯ ಆಧಾರಿತ ರಾಮಧಾನ್ಯ.ರಾಮಧಾನ್ಯ ಕನ್ನಡ ಸಾಹಿತ್ಯ ಲೋಕದಲ್ಲಿ ವಿಮರ್ಶಕರ ಮುಕ್ತ ಪ್ರಶಂಸೆಗೆ ಪಾತ್ರವಾದ ಹಾಗೂ ಇಂದಿಗೂ ಪ್ರಸ್ತುತವಾಗಿರುವ ಮೇಲು ಕೀಳುಗಳನ್ನು ಕುರಿತು ಧಾನ್ಯಗಳನ್ನು ರೂಪಕವಾಗಿ ಬಳಸಿ ಚಿತ್ರಿಸುವ ಕೃತಿಯ ಆಧಾರಿತ ಈ ನಾಟಕ ಸುಮಾರು 76 ಪ್ರದರ್ಶನಗಳನ್ನು ಕಂಡಿರುವುದು ವಿಶೇಷ.

    drama
    Share. Facebook Twitter Pinterest LinkedIn Tumblr WhatsApp Email
    Previous Articleಏಳನೇ ವರ್ಷದ ಸಂಭ್ರಮದ ‘ಉದಯರಾಗ 60’ರಲ್ಲಿ ಭಕ್ತಿ ಗಾಯನ
    Next Article ಶ್ರೀ ಎಡನೀರು ಕ್ಷೇತ್ರದಲ್ಲಿ ಕೃತಿಗಳ ಬಿಡುಗಡೆ ಕಾರ್ಯಕ್ರಮ | ಮಾರ್ಚ್ 15
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.