Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ರವೀಂದ್ರ ಕಲಾ ಭವನದಲ್ಲಿ ‘ಉತ್ತರ್ ದಕ್ಷಿಣ್’ ಸಂಗೀತ ಕಾರ್ಯಕ್ರಮ | ಜನವರಿ 28
    Music

    ಮಂಗಳೂರಿನ ರವೀಂದ್ರ ಕಲಾ ಭವನದಲ್ಲಿ ‘ಉತ್ತರ್ ದಕ್ಷಿಣ್’ ಸಂಗೀತ ಕಾರ್ಯಕ್ರಮ | ಜನವರಿ 28

    January 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದೇಶದ ನಾನಾ ಪ್ರತಿಷ್ಠಿತ ವೇದಿಕೆಗಳಲ್ಲಿ ಯಶಸ್ವಿಯಾಗಿ ನಡೆದ ‘ಉತ್ತರ್- ದಕ್ಷಿಣ್’ ಸರಣಿ ಸಂಗೀತ ಕಾರ್ಯಕ್ರಮವನ್ನು ದಿನಾಂಕ 28-01-2024ರಂದು ಸಂಜೆ 5.30ಕ್ಕೆ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾ ಭವನದಲ್ಲಿ ಆಯೋಜಿಸಲಾಗಿದೆ.

    ನಗರದ ಪ್ರತಿಷ್ಠಿತ ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ಮುಂಬೈನ ವಿವಿದ್ ಆರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಪ್ರಸ್ತುತ ಪಡಿಸುತ್ತಿದ್ದು, 12 ವರ್ಷಗಳಿಂದ ನಡೆಯುತ್ತಿರುವ ಈ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸಂಗೀತ ಪ್ರಿಯರಿಗೆ ಅಚ್ಚುಮೆಚ್ಚಿನ ಕಚೇರಿಗಳಲ್ಲಿ ಒಂದಾಗಿದೆ. ಇದು ಉತ್ತರಾದಿ ಮತ್ತು ದಕ್ಷಿಣಾದಿ ಹೀಗೆ ಎರಡು ರೀತಿಯ ಸಂಗೀತದೊಂದಿಗೆ ಪ್ರಾದೇಶಿಕ ಸಾಮರಸ್ಯಕ್ಕೆ ಕೊಡುಗೆ ನೀಡುತ್ತದೆ.

    ಮುಂಬೈ, ದೆಹಲಿ, ಹೈದರಾಬಾದ್, ಬೆಂಗಳೂರು, ರಾಂಚಿ ಮತ್ತು ಈಗ ಮಂಗಳೂರಿನಲ್ಲಿ 13ನೇ ಆವೃತ್ತಿಯ ಸಂಗೀತ ಕಚೇರಿಯನ್ನು ಆಯೋಜಿಸಲಾಗಿದೆ. ಉತ್ಕೃಷ್ಟ ಮಟ್ಟದ ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇದ್ದು, ಉತ್ತರಾದಿ ಹಾಗೂ ದಕ್ಷಿಣಾದಿ ವಿಭಾಗದ ಸಂಗೀತಪ್ರಿಯರಿಗೆ ಇದೊಂದು ರಸದೌತಣವಾಗಲಿದೆ. ವರ್ಣರಂಜಿತ ಹಿನ್ನಲೆ, ಕಲಾವಿದರ ಕೌಶಲ್ಯ, ಬೆಳಕು, ಧ್ವನಿ ಮತ್ತು ಸಂಗೀತ ಸಭಾಂಗಣದಲ್ಲಿ ಸ್ಥಳಾವಕಾಶ ಹೀಗೆ ಎಲ್ಲವನ್ನು ಸುಂದರವಾಗಿ ನಿರೂಪಿಸಲಾಗುತ್ತದೆ. ದೇಗುಲದಲ್ಲಿ ನೋಡಿದ ರಸಾನುಭವವನ್ನು ಈ ಸಂಗೀತ ಕಾರ್ಯಕ್ರಮವು ಪ್ರೇಕ್ಷಕರಿಗೆ ಹೊಸರೀತಿಯ ವಿನೂತನ ಅನುಭವನ್ನು ಕಟ್ಟಿಕೊಡಲಿದೆ.

    ಉತ್ತರ ದಕ್ಷಿಣದ ಈ ಕಾರ್ಯಕ್ರಮದಲ್ಲಿ ವಿದ್ವಾನ್ ಮೈಸೂರು ನಾಗರಾಜ್ ಮತ್ತು ಡಾ. ಎಂ. ಮಂಜುನಾಥ್ ಅವರ ವಿಶಿಷ್ಟ ಪಿಟೀಲು ಯುಗಳ ಸಂಯೋಜನೆಯಾಗಿದ್ದು, ಅವರಿಗೆ ವಿದ್ವಾನ್ ಅರ್ಜುನ್ ಕುಮಾ‌ರ್ ಮತ್ತು ವಿದ್ವಾನ್ ಗಿರಿಧರ್ ಉಡುಪ ಅವರ ಮೃದಂಗ ಮತ್ತು ಘಟಂನಲ್ಲಿ ಸಾಥ್‌ನ್ನು ನೀಡಲಿದ್ದಾರೆ. ಅನಂತರದಲ್ಲಿ ನಮ್ಮ ದೇಶದ ಪ್ರಖ್ಯಾತ ಗಾಯಕರಾದ ಪದ್ಮಶ್ರೀ ಪುರಸ್ಕೃತ ಪಂಡಿತ್ ವೆಂಕಟೇಶ್ ಕುಮಾರ್ ಅವರಿಂದ ಹಿಂದೂಸ್ತಾನಿ ಗಾಯನ ನಡೆಯಲಿದೆ. ಇವರಿಗೆ ನರೇಂದ್ರ ಎಲ್. ನಾಯಕ್ ಹಾರ್ಮೋನಿಯಂನಲ್ಲಿ ಮತ್ತು ಕೇಶವ್ ಜೋಶಿ ತಬಲದಲ್ಲಿ ಸಾಥ್ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನಲ್ಲಿ ‘ಮಕ್ಕಳ ರಂಗ ತರಬೇತಿ’ ಉದ್ಘಾಟನಾ ಸಮಾರಂಭ | ಜನವರಿ 28
    Next Article ಗುಂಡ್ಮಿಯಲ್ಲಿ ಗೋಪಾಲಕೃಷ್ಣ ನಾಯರಿಯವರ ಪ್ರಥಮ ವರ್ಷದ ‘ಸಂಸ್ಮರಣೆ ಕಾರ್ಯಕ್ರಮ’ | ಜನವರಿ 28
    roovari

    Add Comment Cancel Reply


    Related Posts

    ವಿಶ್ವದಾಖಲೆ ಮೂಡಿಸಿರುವ ಗಾಯಕನಿಗೆ ‘ಯಶೋಭಿನಂದನೆ’ ಸನ್ಮಾನ ಸಮಾರಂಭ

    July 15, 2025

    ಹಯಗ್ರೀವದಲ್ಲಿ ಉದ್ಘಾಟನೆಗೊಂಡ ಕರೋಕೆ ಗಾಯನ ಕಾರ್ಯಕ್ರಮ

    July 15, 2025

    ಭರತಾಂಜಲಿಯ ಕಿಂಕಿಣಿ ತ್ರಿಂಶತ್ ಸಂಭ್ರಮದಲ್ಲಿ ‘ನೃತ್ಯಾಮೃತಂ 2025’

    July 15, 2025

    ತೆಕ್ಕಟ್ಟೆಯ ಹಯಗ್ರೀವದಲ್ಲಿ ಸಂಗೀತ ಗುರು ಶಾರದ ವಿ. ಹೊಳ್ಳ ಇವರಿಗೆ ಗುರುವಂದನಾ ಕಾರ್ಯಕ್ರಮ

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.