Subscribe to Updates

    Get the latest creative news from FooBar about art, design and business.

    What's Hot

    ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ | ಆಗಸ್ಟ್ 25

    August 21, 2025

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025

    ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ | ಆಗಸ್ಟ್ 22

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೃಷ್ಣಪ್ಪ ಕರ್ಕೇರ ಸಂಸ್ಮರಣಾ ಕಾರ್ಯಕ್ರಮ 
    Yakshagana

    ಕೃಷ್ಣಪ್ಪ ಕರ್ಕೇರ ಸಂಸ್ಮರಣಾ ಕಾರ್ಯಕ್ರಮ 

    July 9, 20241 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 1932ರಲ್ಲಿ ದಿ. ಹೂವಪ್ಪ ಮಡಿವಾಳರಿಂದ ಆರಂಭಗೊಂಡ ಶ್ರೀ ಶಾರದಾಂಬಾ ಯಕ್ಷಗಾನ ಮಂಡಳಿಯನ್ನು ದಶಕಗಳ ಕಾಲ ಮುನ್ನಡೆಸಿ ಕಲಾಸೇವೆ ಸಲ್ಲಿಸಿದ ಭಾಗವತ ಕೃಷ್ಣಪ್ಪ ಕರ್ಕೇರ ಇವರ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 03-07-2024ರ ಬುಧವಾರದಂದು ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇದರ ಅಧ್ಯಕ್ಷರಾದ ಸುರೇಂದ್ರ ರಾವ್ ಮಾತನಾಡಿ “ಅಪ್ರತಿಮ ಯಕ್ಷಗಾನ ಭಾಗವತ ದಿವಂಗತ ಡಿ. ಕೃಷ್ಣಪ್ಪ ಕರ್ಕೇರ ಅವರು ಯಕ್ಷಗಾನ ಕಲಾ ಸೇವೆಗೈದು, ಯಕ್ಷಲೋಕದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ಕಲಾಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅವರು ಮುನ್ನಡೆಸಿದ ಶ್ರೀ ಶಾರದಾಂಬಾ ಯಕ್ಷಗಾನ ಮಂಡಳಿಯ ಯಕ್ಷಗಾನ ತಾಳಮದ್ದಲೆ ವಾರದ ಕೂಟಗಳಿಗೆ ಸಂಪೂರ್ಣ ಬೆಂಬಲ ನೀಡಬೇಕು.” ಎಂದು ಹೇಳಿದರು.
    ಶ್ರೀಶಾರದಾಂಬಾ ಯಕ್ಷಗಾನ ಮಂಡಳಿಯ ಗೌರವಾಧ್ಯಕ್ಷ ಉದ್ಯಮಿ ಕೆ. ಎಲ್. ಜಯಪ್ರಕಾಶ್ ರಾವ್, ಮಹಾಪೋಷಕ ಸಿ. ಎಸ್. ಭಂಡಾರಿ, ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕೆನರಾ ಕಾಲೇಜಿನ ನಿವೃತ್ತ ಉಪನ್ಯಾಸಕ ಜೆ. ಕೆ. ಭಟ್ ಸೆರಾಜೆ, ಮಹಾಗಣಪತಿ ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಅರ್ಥಧಾರಿ ಹಾಗೂ ಹರಿದಾಸರಾದ ಮಹಾಬಲ ಶೆಟ್ಟಿ, ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಅಧ್ಯಕ್ಷ ಶ್ರೀನಾಥ ಪ್ರಭು ಕದ್ರಿ ಉಪಸ್ಥಿತರಿದ್ದರು.
    ಶಿವಪ್ರಸಾದ್ ಪ್ರಭು, ಸಂಜಯ್ ಕುಮಾರ್ ರಾವ್ ನಿರೂಪಿಸಿ, ಶೋಭಾ ಐತಾಳ್ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ವಾಲಿಮೋಕ್ಷ’ ಯಕ್ಷಗಾನ ತಾಳಮದ್ದಲೆ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಕಲ್ಪನೆಯ ಹನಿಗಳು’ ಕವನ ಸಂಕಲನ ಲೋಕಾರ್ಪಣೆ 
    Next Article ತೆಕ್ಕಟ್ಟೆಯ ಪಟೇಲರ ಬೆಟ್ಟುವಿನಲ್ಲಿ ‘ಶ್ರೀ ರಾಮ ಪಟ್ಟಾಭಿಷೇಕ’ ತಾಳಮದ್ದಳೆ
    roovari

    1 Comment

    1. Shobha Aithal on July 10, 2024 12:06 am

      ರುವಾರಿ.ಕಾಂ ಪ್ರಪ್ರಥಮವಾಗಿ ನಿಮಗೆ ವಂದಿಸುತ್ತಿದ್ದೇನೆ. ನಿಮ್ಮ ನಿಸ್ವಾರ್ಥ ಸೇವೆ, ಕಲಾವಿದರನ್ನು ಸಮಾಜಕ್ಕೆ ಗುರುತಿಸುವ ಪ್ರಕ್ರಿಯೆ ಇದೇ ರೀತಿ ಮುಂದುವರೆಯಲಿ . ದೇವರು ನಿಮಗೆ ನಿಮ್ಮ ಎಲ್ಲಾ ಇಚ್ಚೆಯನ್ನು ನೆರವೇರಿಸಲಿ…

      Reply

    Add Comment Cancel Reply


    Related Posts

    ಎಡನೀರಿನಲ್ಲಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ

    August 20, 2025

    ಎಡನೀರು ಶ್ರೀಮಠದಲ್ಲಿ ಯಕ್ಷಗಾನ ತಾಳಮದ್ದಲೆ

    August 20, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಪೂತನಿ’ ಏಕವ್ಯಕ್ತಿ ನಾಟಕ ಪ್ರದರ್ಶನ | ಆಗಸ್ಟ್ 22

    August 20, 2025

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಮೂರು ದಿನಗಳ ಭಜನೆ, ಹರಿಸಂಕೀರ್ತನೆ, ಗಮಕ ಮತ್ತು ಹವ್ಯಾಸಿ ತಂಡಗಳ ತಾಳಮದ್ದಳೆ

    August 20, 2025

    1 Comment

    1. Shobha Aithal on July 10, 2024 12:06 am

      ರುವಾರಿ.ಕಾಂ ಪ್ರಪ್ರಥಮವಾಗಿ ನಿಮಗೆ ವಂದಿಸುತ್ತಿದ್ದೇನೆ. ನಿಮ್ಮ ನಿಸ್ವಾರ್ಥ ಸೇವೆ, ಕಲಾವಿದರನ್ನು ಸಮಾಜಕ್ಕೆ ಗುರುತಿಸುವ ಪ್ರಕ್ರಿಯೆ ಇದೇ ರೀತಿ ಮುಂದುವರೆಯಲಿ . ದೇವರು ನಿಮಗೆ ನಿಮ್ಮ ಎಲ್ಲಾ ಇಚ್ಚೆಯನ್ನು ನೆರವೇರಿಸಲಿ…

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.