Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಲ್ಲಿ ಸಾಹಿತಿ ವಾಮನ ನಂದಾವರ ಇವರಿಗೆ ನುಡಿ ನಮನ
    Kannada

    ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಲ್ಲಿ ಸಾಹಿತಿ ವಾಮನ ನಂದಾವರ ಇವರಿಗೆ ನುಡಿ ನಮನ

    March 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಸಾಹಿತಿ ವಾಮನ ನಂದಾವರ ಇವರಿಗೆ ನುಡಿ ನಮನ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 20 ಮಾರ್ಚ್ 2025 ರಂದು ಕಲ್ಕೂರ ಪ್ರತಿಷ್ಠಾನದ ಕಛೇರಿಯಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ವಾಮನ ನಂದಾವರ ಇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ನಿಕಟಪೂರ್ವ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಮಾತನಾಡಿ “ತುಳು ಜನಪದ ಸಾಹಿತ್ಯದಲ್ಲಿ ಹಾಗೂ ಕನ್ನಡ ಸಾಹಿತ್ಯದಲ್ಲಿ ದಿ. ವಾಮನ ನಂದಾವರ ಅವರ ಕೊಡುಗೆ ಅನನ್ಯವಾದುದು, ತುಳುವರ ರಸಿಕತೆ, ಅರ್ಥವತ್ತಾದ ತುಳು ಗಾದೆ, ತುಳುವಿನ ಸಮಗ್ರ ಸಂಸ್ಕೃತಿಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ನಂದಾವರರು ಹೇಮಾಂಶು ಪ್ರಕಾಶನದ ಮೂಲಕ ತಾವು ಹಾಗೂ ತುಳು ಭಾಷಾ ವಿದ್ವಾಂಸರಿಂದ ಪ್ರಕಟಿಸಿದ ತುಳು ಸಾಹಿತ್ಯ ಕೃತಿಗಳ ಮೂಲಕ ತುಳು ಭಾಷೆಯನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ ಎಂದರೆ ತಪ್ಪಾಗಲಾರದು. ಪತ್ನಿ ಚಂದ್ರಕಲಾ ನಂದಾವರರ ಪ್ರೋತ್ಸಾಹದಿಂದ ತುಳು ಭಾಷಾ ಸೌಂದರ್ಯವನ್ನು ಎಳೆ ಎಳೆಯಾಗಿ ಮೊಗೆ ಮೊಗೆದು ನೀಡಿದ ಇವರ ಸಾಧನೆ ಶ್ಲಾಘನೀಯ. ಈ ಬಗ್ಗೆ ವಿದ್ವಾಂಸರಾದ ದಿವಂಗತ ಕಯ್ಯಾರ, ಪಾ. ವೆಂ. ಆಚಾರ್ಯ, ಡಾ. ಯು. ಪಿ. ಉಪಾಧ್ಯಾಯರೇ ಮೊದಲಾದವರು ಇವರ ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ” ಎಂದರು.

    ಬಹುಶ್ರುತ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿಯವರು ನಂದಾವರರ ಸಾಹಿತ್ಯ ಸೇವೆಯನ್ನು ಕೊಂಡಾಡಿ ಶ್ರದ್ಧಾಂಜಲಿ ಸಮರ್ಪಿಸಿದರು.
    ಈ ಸಂದರ್ಭ ಡಾ.ಗಣೇಶ ಅಮೀನ್ ಸಂಕಮಾರ್, ಭಾಸ್ಕರ ರೈ ಕುಕ್ಕುವಳ್ಳಿ, ನಿತ್ಯಾನಂದ ಕಾರಂತ ಪೊಳಲಿ, ಜಿ. ಕೆ. ಭಟ್ ಸೇರಾಜೆ, ಕೂಡ್ಲು ಮಹಾಬಲ ಶೆಟ್ಟಿ, ಎಚ್. ಜನಾರ್ದನ ಹಂದೆ, ವಿಜಯಲಕ್ಷ್ಮೀ ಬಿ. ಶೆಟ್ಟಿ, ಚಂದ್ರಶೇಖರ ನಾವಡ, ಸಂಜೀವ ಶೆಟ್ಟಿ, ನಿತ್ಯಾನಂದ ರಾವ್, ಸುಂದರ ಶೆಟ್ಟಿ ಬೆಟ್ಟಂಪಾಡಿ, ಚಂದ್ರಶೇಖರ ಮಯ್ಯ, ಪಿ. ಬಿ. ಹರೀಶ್ ರೈ, ಬಿ. ಸತೀಶ್ ರೈ ಮೊದಲಾದವರು ಉಪಸ್ಥಿತರಿದ್ದು ಶ್ರದ್ಧಾಂಜಲಿ ಸಮರ್ಪಿಸಿದರು.

    baikady condolence meeting kannada Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Article‘ಕೆ. ಎಸ್. ನ. ಸಾಹಿತ್ಯ ಪ್ರಶಸ್ತಿ’ ಪ್ರಕಟ
    Next Article ಬರಹಗಾರ ಕೆ. ವಿ. ಕುಮಾರನ್ ಮಾಸ್ತರ್ ಇವರಿಗೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಪ್ರಶಸ್ತಿ
    roovari

    Add Comment Cancel Reply


    Related Posts

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.