Subscribe to Updates

    Get the latest creative news from FooBar about art, design and business.

    What's Hot

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕೃತಿಗಳ ಆಯ್ಕೆ 

    January 8, 2026

    ಪುತ್ತೂರಿನ ಸುನಾದ ಶಾಲಾ ಆವರಣದಲ್ಲಿ ‘ಸುನಾದ ಸಂಗೀತೋತ್ಸವ’ | ಜನವರಿ 10 ಮತ್ತು 11

    January 8, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | 6,7 ಮತ್ತು 8 ಡಿಸೆಂಬರ್
    Uncategorized

    ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | 6,7 ಮತ್ತು 8 ಡಿಸೆಂಬರ್

    December 3, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ. ಜಿ. ಎಂ ಕಾಲೇಜು, ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ 46ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 6,7 ಮತ್ತು 8 ಡಿಸೆಂಬರ್ 2024ರಂದು (ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರ) ಉಡುಪಿಯ ಎಂ. ಜಿ. ಎಂ. ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

    ದಿನಾಂಕ 06 ಡಿಸೆಂಬರ್ 2024ರ ಶುಕ್ರವಾರ ಸಾಯಂಕಾಲ ಘಂಟೆ 4.00ಕ್ಕೆ ಎಂ. ಜಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಟಿ. ಮೋಹನದಾಸ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಟಿ. ರಂಗ ಪೈ ಉದ್ಘಾಟಿಸಲಿರುವರು ಸಭಾಕಾರ್ಯಕ್ರಮದ ಬಳಿಕ ವಿಶ್ರಾಂತ ಪ್ರಾಚಾರ್ಯರಾದ ಡಾ. ಅನಿಲ್ ಕುಮಾರ್ ಶೆಟ್ಟಿ ಅವರಿಂದ ಉಪನ್ಯಾಸ ಹಾಗೂ ಕರ್ನಾಟಕ ಕಲಾಶ್ರೀ ತಿರುಮಲೈ ಶ್ರೀನಿವಾಸ, ಬೆಂಗಳೂರು ಹಾಗೂ ಬಳಗದವರಿಂದ ಸಂಗೀತ ಕಚೇರಿ ನಡೆಯಲಿದೆ.
    ದಿನಾಂಕ 07 ಡಿಸೆಂಬರ್ 2024ರ ಶನಿವಾರದಂದು ಬೆಳಿಗ್ಗೆ ಘಂಟೆ 09.30ರಿಂದ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಮತ್ತು ಬಳಗದವರಿಂದ ಕಾವ್ಯವಾಚನ ಬಳಿಕ ಸಂಗೀತ ಕಚೇರಿ. ಮಧ್ಯಾಹ್ನ ಘಂಟೆ 1.30ರಿಂದ ವಾದಿರಾಜ ಕನಕದಾಸ ಕೀರ್ತನಾ ಸ್ಪರ್ಧೆ, ಸಂಜೆ ಶ್ರೀ ಪೊಳಲಿ ಜಗದೀಶ ದಾಸರು ಮತ್ತು ಬಳಗದವರಿಂದ ಹರಿಕಥಾ ಕಾಲಕ್ಷೇಪ ಕಾರ್ಯಕ್ರಮ ನಡೆಯಲಿದೆ.

    ದಿನಾಂಕ 08 ಡಿಸೆಂಬರ್ 2024ರ ಭಾನುವಾರದಂದು ವಾದಿರಾಜ ಕನಕದಾಸ ಕೀರ್ತನ ಶಿಬಿರದ ಸಮಾರೋಪ ಹಾಗೂ ಕನಕ ಕೀರ್ತನೆ ಸ್ಪರ್ಧಾವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಂಜೆ ಶ್ರೀ ಮಂಜುನಾಥ ಭಟ್ ಮತ್ತು ಬಳಗದವರಿಂದ ಹಿಂದೂಸ್ಥಾನಿ ಗಾಯನ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಾಂಡ್ ಸೊಭಾಣ್ ನಲ್ಲಿ  ಧಿಗೊ ಅಭಿಯಾನಕ್ಕೆ ಚಾಲನೆ
    Next Article ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ನಿರಂತರ ರಂಗ ಉತ್ಸವ – 2025’ | ಡಿಸೆಂಬರ್ 17ರಿಂದ 21

    December 15, 2025

    ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04

    December 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.