Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸ್ಪರ್ಧೆಗೆ ಕಥೆಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10

    August 5, 2025

    ಸಂಭ್ರಮದಿಂದ ನಡೆದ ‘ಭ್ರಮರಿ ಯಕ್ಷವೈಭವ’

    August 5, 2025

    ಕಟೀಲು ಶ್ರೀ ಸರಸ್ವತೀ ಸದನದಲ್ಲಿ ‘ಮಯೂರಯಾನ -1′ | ಆಗಸ್ಟ್ 09

    August 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ
    Felicitation

    ಪುತ್ತೂರಿನಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ

    August 5, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಸಹಯೋಗದಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 31 ಜುಲೈ 2025ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಜರುಗಿತು.

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸಪ್ತಾಹದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಆಂಜನೇಯ ಯಕ್ಷಗಾನ ಕಲಾ ಸಂಘದ ಕಾರ್ಯಕ್ರಮಗಳು ಉನ್ನತ ಮಟ್ಟದಲ್ಲಿ ನಡೆಯುತ್ತಿವೆ. 56 ವಸಂತಗಳನ್ನು ಕಂಡ ಸಂಘ, ಶತಮಾನಗಳನ್ನು ಪೂರೈಸಲಿ ಎಂದು ಶುಭ ಕೋರಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹಾಗೂ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮೇಗಿನಗುತ್ತು ಇನ್ನು ಮುಂದೆಯೂ ದೇವಳದಲ್ಲಿ ಆಂಜನೇಯ ಸಂಘದ ತಾಳಮದ್ದಳೆಗಳು ನಡೆದಾಗ ತಮ್ಮ ಸರ್ವ ಸಹಕಾರ ನೀಡುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಸಂಘದ ಗೌರವ ಕಾರ್ಯದರ್ಶಿ ರಂಗನಾಥ್ ರಾವ್, ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಅಧ್ಯಕ್ಷೆ ಪ್ರೇಮಲತಾ ರಾವ್ ಉಪಸ್ಥಿತರಿದ್ದರು.

    ದೇವಳದ ಅರ್ಚಕ ಶ್ರೀ ರಾಮ ಕಲ್ಲೂರಾಯ ಇವರನ್ನು ಆಂಜನೇಯ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕಿಶೋರಿ ದುಗ್ಗಪ್ಪ ನಡುಗಲ್ಲು ಸನ್ಮಾನ ಪತ್ರ ವಾಚಿಸಿದರು. ಸಂಘದ ಸದಸ್ಯರು ಅತಿಥಿಗಳಿಗೆ ಶಾಲು ಹೊದಿಸಿ, ಗೌರವಿಸಿದರು. ಸಂಘದ ಹಿರಿಯ ಕಲಾವಿದ ಗುಡ್ಡಪ್ಪ ಬಲ್ಯ ಸ್ವಾಗತಿಸಿ, ಭಾಗವತ ಎಲ್.ಎನ್. ಭಟ್ ಬಟ್ಯಮೂಲೆ ಯಕ್ಷಗಾನೀಯ ಶೈಲಿಯಲ್ಲಿ ಪ್ರಾರ್ಥಿಸಿದರು. ವೇದಿಕೆಯಲ್ಲಿ ಮಹಿಳಾ ಯಕ್ಷಗಾನ ಸಂಘದ ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ ವಂದಿಸಿ, ಆಂಜನೇಯ ಯಕ್ಷಗಾನ ಕಲಾ ಸಂಘದ ಕೋಶಾಧಿಕಾರಿ ದುಗ್ಗಪ್ಪ ನಡುಗಲ್ಲು ಕಾರ್ಯಕ್ರಮ ನಿರೂಪಿಸಿದರು. ಸಂಘದ ವತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ಶಾಲು ಹೊದಿಸಿ ಗೌರವಿಸಲಾಯಿತು. ದೇವಳದ ವತಿಯಿಂದ ಸಪ್ತಾಹದಲ್ಲಿ ಭಾಗವಹಿಸಿದ ಕಲಾವಿದರೆಲ್ಲರಿಗೂ ಶಾಲು ಹೊದಿಸಿ ಗೌರವಿಸಲಾಯಿತು. ಆ ಬಳಿಕ ‘ಭೀಷ್ಮ ಭಾರತಿ’ ಸಪ್ತಾಹದ ಕೊನೆಯ ಪ್ರಸಂಗ ಕರ್ಮ ಬಂಧ/ಭೀಷ್ಮ ಪರ್ವ ಎಂಬ ತಾಳಮದ್ದಳೆ ಜರಗಿತು.

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ‘ದಿವ್ಯದೃಷ್ಟಿಯ ಗಾಂಧಾರಿ’ ಕೃತಿ ಬಿಡುಗಡೆ ಸಮಾರಂಭ
    Next Article ಮೈಸೂರಿನ ಗಾಂಧಿಭವನ ಆವರಣದಲ್ಲಿ ರಂಗ ತರಬೇತಿ ಶಿಬಿರ | ಕೊನೆಯ ದಿನಾಂಕ ಆಗಸ್ಟ್ 13
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಸ್ಪರ್ಧೆಗೆ ಕಥೆಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 10

    August 5, 2025

    ಸಂಭ್ರಮದಿಂದ ನಡೆದ ‘ಭ್ರಮರಿ ಯಕ್ಷವೈಭವ’

    August 5, 2025

    ಕಟೀಲು ಶ್ರೀ ಸರಸ್ವತೀ ಸದನದಲ್ಲಿ ‘ಮಯೂರಯಾನ -1′ | ಆಗಸ್ಟ್ 09

    August 5, 2025

    ಕೋಟೇಶ್ವರದಲ್ಲಿ ಅದ್ದೂರಿ ಯಕ್ಷಗಾನ ಪ್ರದರ್ಶನ | ಆಗಸ್ಟ್ 10

    August 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.