ಮಂಗಳೂರು : ಭರತಾಂಜಲಿ (ರಿ.) ಕೊಟ್ಟಾರ ಇವರ ವತಿಯಿಂದ ಕಿಂಕಿಣಿ ತ್ರಿಂಶತ್ ಸಂಭ್ರಮದ ಸಮಾರೋಪ ಸಮಾರಂಭವನ್ನು ದಿನಾಂಕ 12 ಏಪ್ರಿಲ್ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕಾಸರಗೋಡು ಎಡನೀರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಶೀರ್ವಚನ ನೀಡಲಿದ್ದು, ನಾಟ್ಯ ನಿಕೇತನದ ನಾಟ್ಯಾಚಾರ್ಯ ಗುರು ಉಳ್ಳಾಲ್ ಮೋಹನ್ ಕುಮಾರ್ ಇವರು ನಟರಾಜ ದೀಪ ಪ್ರಜ್ವಲನೆಗೈಯ್ಯಲಿದ್ದಾರೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ‘ಶ್ರೀ ರಾಮಾಯಣಂ’ ನೃತ್ಯ ಪ್ರಶಸ್ತಿ ಮತ್ತು ಡಾ. ಸತ್ಯನಾರಾಯಣ ರಾಜು ಇವರ ಶಿಷ್ಯೆ ವಿದುಷಿ ಗೌರಿ ಸಾಗರ್ ಬೆಂಗಳೂರು ಇವರಿಂದ ಲಕ್ಷ್ಮಿಯ ದೃಷ್ಟಿಯಲ್ಲಿ ದಶಾವತಾರ ‘ಶ್ರೀ ವಿನೋದ’ ಹಾಸ್ಯಾಧಾರಿತ ಭರತನಾಟ್ಯ ಪ್ರದರ್ಶನ ನಡೆಯಲಿದೆ.

