Subscribe to Updates

    Get the latest creative news from FooBar about art, design and business.

    What's Hot

    ಬ್ಯಾರಿವಾರ್ತೆ ದಶಮಾನೋತ್ಸವ ಸಂಭ್ರಮದ ಪಯುಕ್ತ ‘ಬ್ಯಾರಿ ಲೇಖನ’ ಸ್ಪರ್ಧೆ

    January 9, 2026

    ಪುಸ್ತಕ ವಿಮರ್ಶೆ | ‘ನನ್ನ ಸೋಲೋ ಟ್ರಿಪ್’ ಹೊಸ ದೃಷ್ಟಿಕೋನದ ಪ್ರವಾಸ ಕಥನ

    January 9, 2026

    ಲೇಖಕಿ ಡಾ. ಗಿರಿಜಾ ಶಾಸ್ತ್ರಿಯವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಚ್ಚಿಲದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ದ ಸಮಾರೋಪ ಸಮಾರಂಭ
    Yakshagana

    ಉಚ್ಚಿಲದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ದ ಸಮಾರೋಪ ಸಮಾರಂಭ

    December 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಚ್ಚಿಲ : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಆಯೋಜಿಸುತ್ತಿರುವ ‘ಕಿಶೋರ ಯಕ್ಷಗಾನ ಸಂಭ್ರಮ 2024’ ಪ್ರಯುಕ್ತ ಕಾಪು ವಿಧಾನ ಸಭಾ ವ್ಯಾಪ್ತಿಗೆ ಸೇರಿದ ಎಂಟು ಶಾಲೆಗಳ ಯಕ್ಷಗಾನ ಪ್ರದರ್ಶನವು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಆಶ್ರಯದಲ್ಲಿ, ದೇವಳದ ವಠಾರದಲ್ಲಿ ನಡೆದಿದ್ದು, ಅದರ ಸಮಾರೋಪ ಸಮಾರಂಭವು ದಿನಾಂಕ 23 ಡಿಸೆಂಬರ್ 2024ರಂದು ಜರಗಿತು.

    ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ ಶೆಟ್ಟಿಯವರು ಮಾತನಾಡಿ “ಯಕ್ಷ ಶಿಕ್ಷಣ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚು ಶಾಲೆಗಳಿಗೆ ಇದನ್ನು ವಿಸ್ತರಿಸೋಣ” ಎಂದರು. ಈ ಮಹಾಭಿಯಾನದ ಯಶಸ್ಸಿಗೆ ಕಾರಣರಾದ ಕಲಾರಂಗದ ಕಾರ್ಯಕರ್ತರನ್ನು ಅಭಿನಂದಿಸಿದರು. ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್. ಭಟ್, ಗುರು ಬನ್ನಂಜೆ ಸಂಜೀವ ಸುವರ್ಣ, ನಿವೃತ್ತ ಪ್ರಾಧ್ಯಾಪಕ ಡಾ. ಚಂದ್ರಶೇಖರ ಶೆಟ್ಟಿ, ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ದ.ಕ. ಮೊಗವೀರ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ ಹೆಜಮಾಡಿ, ಕಲಾ ಗಂಗೋತ್ರಿಯ ಸದಾಶಿವ ಅಭ್ಯಾಗತರಾಗಿ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಉಪಾಧ್ಯಕ್ಷ ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು.

    ಪ್ರದರ್ಶನ ನೀಡಿದ ಶಾಲೆಗಳ ಐವರು ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಶಾಲಾ ಮುಖ್ಯೋಪಾಧ್ಯಾಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನಾರಾಯಣ ಎಂ. ಹೆಗಡೆ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಲಾರಂಗದ ಕಾರ್ಯಕರ್ತರಾದ ಕೆ. ಅಜಿತ್ ಕುಮಾರ, ಕಿಶೋರ ಸಿ. ಉದ್ಯಾವರ, ನಾಗರಾಜ ಹೆಗಡೆ ಸಹಕರಿಸಿದರು. ಸಮಾರಂಭದ ಪೂರ್ವದಲ್ಲಿ ಉದ್ಯಾವರದ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ನಿರಂಜನ ಭಟ್ ನಿರ್ದೇಶನದಲ್ಲಿ ‘ಕೃಷ್ಣಾರ್ಜುನ ಕಾಳಗ’ ಬಳಿಕ ಉಚ್ಚಿಲದ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನಿಶ್ವಲ್ ತೀರ್ಥಹಳ್ಳಿ ನಿರ್ದೇಶನದ ‘ಜಾಂಬವತೀ ಕಲ್ಯಾಣ’ ಪ್ರಸಂಗಗಳು ಪ್ರಸ್ತುತಗೊಂಡವು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಕೆಂಡದ ರೊಟ್ಟಿ’ ದಾಂಪತ್ಯ ಬದುಕನ್ನು ಫೋಕಸ್ ಆಗಿಟ್ಟುಕೊಂಡ ಕಾದಂಬರಿ
    Next Article ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬದ ಪ್ರಯುಕ್ತ ‘ರಜತ ರಂಗು’ ಸಮಾರಂಭ | ಜನವರಿ 05
    roovari

    Add Comment Cancel Reply


    Related Posts

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಅಮೃತ ಮಹೋತ್ಸವದ ಅಂಗವಾಗಿ ತಾಳಮದ್ದಳೆ ಹಾಗೂ ‘ವಿವೇಕ ಚಿಂತನ’ ಉಪನ್ಯಾಸ | ಜನವರಿ 11

    January 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.