Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಸಂಗೀತ ನೃತ್ಯ ವಿಚಾರ ಸಂಕಿರಣ’ ಸಂಭ್ರಮ -2026 | ಫೆಬ್ರವರಿ 14

    February 13, 2026

    ಹಿರಿಯ ಜಾದೂಗಾರ ಪ್ರೊ. ಮಾಧವ್ ಅಸ್ತಂಗತ

    February 13, 2026

    ಕರಾವಳಿ ಲೇಖಕಿಯರ ವಾಚಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

    February 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿಯಿಂದ ವ್ಯಕ್ತಿತ್ವ ವಿಕಸನ
    Camp

    ರಂಗಭೂಮಿಯಿಂದ ವ್ಯಕ್ತಿತ್ವ ವಿಕಸನ

    August 6, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಣಿಪಾಲದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್, ರಂಗ ಚಿನ್ನಾರಿ (ರಿ.) ಕಾಸರಗೋಡು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಮಣಿಪಾಲದ ಸರಳೆಬೆಟ್ಟು ಇಲ್ಲಿನ ರತ್ನ ಸಂಜೀವ ಕಲಾ ಮಂಡಲದಲ್ಲಿ ‘ರಂಗಸಂಸ್ಕೃತಿ’ ರಂಗ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 28 ಜುಲೈ 2024ರಂದು ಜರಗಿತು.

    ಈ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದ ರಂಗ ನಿರ್ದೇಶಕ, ನಟ ಕಾಸರಗೋಡು ಚಿನ್ನಾ ಇವರು ಮಾತನಾಡಿ “ನಟನೆಯನ್ನು ಕಲಿಯುವುದರಿಂದ ಮತ್ತು ಪಾತ್ರಗಳನ್ನು ಅಭಿನಯಿಸುವುದರಿಂದ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಬದುಕಿನಲ್ಲಿ ಪರಸ್ಪರ ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಪ್ರಶ್ನಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮಾತ್ರವಲ್ಲ ಇದರಿಂದ ಮನೋಸ್ಥೈರ್ಯ ಬೆಳೆಯಲು ಅನುಕೂಲವಾಗುತ್ತದೆ. ಜೊತೆಗೆ ಸಾಮಾಜಿಕ ಬದುಕು ಸಾರ್ಥಕ ಎನಿಸುತ್ತದೆ” ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ‘ರಂಗಸಂಸ್ಕೃತಿ’ ಶಿಬಿರ ನಡೆಸುವುದಾಗಿ ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಮಹೇಶ್ ಠಾಕೂರ್ ಇವರು ಮಾತನಾಡಿ, “ರಂಗ ಭೂಮಿಯ ವಿವಿಧ ಮಜಲುಗಳನ್ನು ಕಲಿಯುವುದರಿಂದ ಬದುಕನ್ನು ಎದುರಿಸುವ ಎದೆಗಾರಿಕೆ ಬರುತ್ತದೆ” ಎಂದರು. ಶಾಲಾ ಕಾಲೇಜಿನ ಅಧ್ಯಾಪಕ ವೃಂದದವರಿಗೆ ಮುಂದಿನ ದಿನಗಳಲ್ಲಿ ಶಿಬಿರವನ್ನು ಏರ್ಪಡಿಸುವುದಾಗಿ ಹೇಳಿದರು.

    ಸುಮಾರು 85 ವಿದ್ಯಾರ್ಥಿಗಳು ಭಾಗವಹಿಸಿದ ಈ ರಂಗ ಶಿಬಿರದಲ್ಲಿ ಆಶು ನಾಟಕ, ನಡೆ, ಧ್ವನಿ ಸೇರಿದಂತೆ ಹಲವಾರು ವಿಷಯಗಳನ್ನು ಕಲಿಸಿಕೊಡಲಾಯಿತು. ವೇದಿಕೆಯಲ್ಲಿ ಶಿಲ್ಪಾ ಸಾಮಂತ್, ನಿತ್ಯಾನಂದ ಪಡ್ರೆ, ಸತೀಶ್ ಪಾಟೀಲ್, ದಿನೇಶ್ ಪ್ರಭು, ರಮಾನಂದ ಸಾಮಂತ್, ಶಶಿ ಭೂಷಣ ಕಿಣಿ ಮುಂತಾದವರು ಉಪಸ್ಥಿತರಿದ್ದರು. ಮಹೇಶ್ ಠಾಕೂರ್ ಸ್ವಾಗತಿಸಿ, ಅಧ್ಯಾಪಿಕೆ ಮಮತಾ ಸಾಮಂತ್ ಕಾರ್ಯಕ್ರಮವನ್ನು ನಿರೂಪಿಸಿ, ಟ್ರಸ್ಟಿನ ಸದಸ್ಯೆ ಅಶ್ವಿನಿ ಎಂ. ಠಾಕೂರ್ ಧನ್ಯವಾದವಿತ್ತರು. ಭಾಗವಹಿಸಿ ಎಲ್ಲಾ ಅತಿಥಿಗಳಿಗೆ ಸಸಿಗಳ ಕುಂಡವನ್ನು ನೀಡಿ ಗೌರವಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಿದ್ಧಾಪುರದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ | ಆಗಸ್ಟ್ 14
    Next Article ಯಕ್ಷದೇವ ಮಿತ್ರಕಲಾ ಮಂಡಳಿಯ 27ನೇ ವರ್ಷದ ‘ಯಕ್ಷ ಸಂಭ್ರಮ’
    roovari

    Comments are closed.

    Related Posts

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಆ ಊರು – ಈ ಊರು’ ನಾಟಕ ಪ್ರದರ್ಶನ | ಫೆಬ್ರವರಿ 15

    February 12, 2026

    ಮೈಸೂರಿನ ರಂಗಾಯಣದಲ್ಲಿ ‘ನೆನಪಿನಂಗಳ’ ಸಂವಾದ ಕಾರ್ಯಕ್ರಮ | ಫೆಬ್ರವರಿ 14  

    February 10, 2026

    ಕಲಾಮಂದಿರದಲ್ಲಿ ‘ಆಯಾಮೋತ್ಸವ’ದ ಸಮಾರೋಪ ಸಮಾರಂಭ

    February 9, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.