Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮಾರೋಪಗೊಂಡ ಸೃಜನೇತರ ಬರವಣಿಗೆ ಕಾರ್ಯಾಗಾರ
    Literature

    ಸಮಾರೋಪಗೊಂಡ ಸೃಜನೇತರ ಬರವಣಿಗೆ ಕಾರ್ಯಾಗಾರ

    October 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅ. ಭಾ. ಸಾ. ಪ. ದ.ಕ. ಜಿಲ್ಲಾ ಸಮಿತಿ ಮತ್ತು ವಿವಿ ಕಾಲೇಜು ಮಂಗಳೂರು ಇದರ ‘ಮಂಗಳಗಂಗೆ’ ವಾರ್ಷಿಕ ಸಂಚಿಕೆ ವತಿಯಿಂದ ನಡೆದ ಸೃಜನೇತರ ಬರವಣಿಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ದಿನಾಂಕ 20 ಅಕ್ಟೋಬರ್ 2025ರಂದು ವಿ.ವಿ. ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ನರೂರು ಮಾತನಾಡಿ “ಲೇಖನಗಳಿಗೆ ಜನಮಾನಸದ ಮೇಲೆ ಪ್ರಭಾವ ಬೀರುವ ಶಕ್ತಿ ಇದೆ. ಸುತ್ತಲಿನ ಪರಿಸರವೇ ವಸ್ತು ವಿಷಯವಾಗಿ, ಬದುಕಿನ ವಾಸ್ತವಿಕತೆ ಅರಿತು ಬರೆಯಬೇಕು. ಸಾಹಿತ್ಯ ಸಮಾಜಕ್ಕೆ ದಿಕ್ಸೂಚಿ ನೀಡಬೇಕು” ಎಂದು ಹೇಳಿದರು.


    ಅಧ್ಯಕ್ಷತೆ ವಹಿಸಿದ್ದ ವಿ. ವಿ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಮಾತನಾಡಿ “ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸಾಹಿತ್ಯದ ದ ಓದು ಹಾಗೂ ಬರವಣಿಗೆಯಲ್ಲಿ ಆಸಕ್ತಿ ವಹಿಸಬೇಕು” ಎಂದರು. ಅ. ಭಾ. ಸಾ. ಪ. ದ.ಕ. ಜಿಲ್ಲಾಧ್ಯಕ್ಷ ಪಿ. ಬಿ. ಹರೀಶ್ ರೈ, ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ ಮುಖ್ಯ ಅತಿಥಿಗಳಾಗಿದ್ದರು. ಜತೆ ಕಾರ್ಯದರ್ಶಿ ಶ್ರೀಲಕ್ಷ್ಮೀ ಮಠದಮೂಲೆ, ಸಮಿತಿ ಸದಸ್ಯ ಡಾ. ಸುರೇಶ್ ನೆಗಳಗುಳಿ ಉಪಸ್ಥಿತರಿದ್ದರು.
    ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ನುಡಿಚಿತ್ರ ಬರಹ ಸ್ಪರ್ಧೆಯಲ್ಲಿ ಪೂರ್ಣಿಮಾ. ಕೆ. ಎಂ. (ಪ್ರಥಮ), ಪ್ರಿಯಾ (ದ್ವಿತೀಯ), ಮಹಮ್ಮದ್ ಶಹೀದ್ (ತೃತೀಯ), ಕಾವೇರಿ ಮತ್ತು ಮಾನ್ಯ ನಾಯಕ್ (ಪ್ರೋತ್ಸಾಹಕ) ಬಹುಮಾನ ಪಡೆದರು.


    ಮಂಗಳಗಂಗೆ ಸಂಚಿಕೆಯ ಕಾರ್ಯ ನಿರ್ವಾಹಕ ಸಂಪಾದಕ ಡಾ. ಮಾಧವ ಎಂ. ಕೆ. ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿದುಷಿ ಸುಮಂಗಳಾ ರತ್ನಾಕರ್ ನಿರೂಪಿಸಿ, ಅ. ಭಾ. ಸಾ. ಪ. ಜಿಲ್ಲಾ ಜತೆ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ವಂದಿಸಿದರು. ಎರಡು ದಿನಗಳ ಕಾರ್ಯಾಗಾರದಲ್ಲಿ ಬೆಂಗಳೂರು ಉತ್ತರ ವಿ. ವಿ. ಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಹಿರಿಯ ಲೇಖಕ ಡಾ. ಚ.ನ. ಶಂಕರ ರಾವ್, ಪತ್ರಕರ್ತ ಆರ್.ಸಿ. ಭಟ್, ಉಪನ್ಯಾಸಕ ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

     

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಎಸ್. ಬಂಗಾರಪ್ಪ ವಿಚಾರ ವೇದಿಕೆಯ ‘ಬಂಗಾರ ಪ್ರಶಸ್ತಿ’ ಪ್ರಕಟ
    Next Article ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಶಶಿ ತರೀಕೆರೆ ಆಯ್ಕೆ
    roovari

    Add Comment Cancel Reply


    Related Posts

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.