Subscribe to Updates

    Get the latest creative news from FooBar about art, design and business.

    What's Hot

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ
    Cultural

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೋಡಿಕಲ್ ನ ಬೆನಕ ಜ್ಯೋತಿಷ್ಯಾಲಯದಲ್ಲಿ ದಿನಾಂಕ 16 ಆಗಸ್ಟ್ 2026ರಂದು ಕೋಡಿಕಲ್ ನ ವಿಪ್ರ ವೇದಿಕೆಯ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ ನಡೆಯಿತು

    ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾ ಪ್ರಖರ ಧಾರ್ಮಿಕ ಚಿಂತಕರೂ, ವಿದ್ವಾಂಸರೂ ಆದ ಪಂಜ ಭಾಸ್ಕರ ಭಟ್ ರವರು “ಸಮಾಜದ ಒಗ್ಗೂಡುವಿಕೆಗೆ ಬ್ರಾಹ್ಮಣರು ಸದಾ ಪ್ರಯತ್ನಿಸುತ್ತಾರೆ. ಧಿಯೋ ಯೋನ ಪ್ರಚೋದಯಾತ್ ಇದು ನಮ್ಮ ಪ್ರತಿಭಾ ಶಕ್ತಿಯ ಬೀಜ ಮಂತ್ರ. ಯಾವುದೇ ಮಾನವೀಯ ಬೇಧ ಕಲ್ಪಿಸದೆ ಸರ್ವರನ್ನೂ ತಮ್ಮೊಂದಿಗೆ ಕರೆದೊಯ್ಯುವ ಶಕ್ತಿ ಬ್ರಹ್ಮತ್ವಕ್ಕಿದೆ. ನಾವು ನಮ್ಮ ಧಾರ್ಮಿಕ ವಿಧಾನ, ಆಚರಣೆಯಿಂದ ನಮ್ಮ ಬಲ ವೃದ್ಧಿಸಿಕೊಳ್ಳುತ್ತೇವೆ. ಪುರದ ಹಿತವನ್ನು ಹಾರೈಸುವವರಾಗಿ ಸರ್ವಪ್ರಿಯರಾಗುತ್ತೇವೆ. ಲೋಕ ಕಲ್ಯಾಣವನ್ನೇ ಅಸ್ತ್ರವನ್ನಾಗಿಸಿಕೊಂಡು ಬದುಕುತ್ತೇವೆ. ಇದುವೇ ಬ್ರಹ್ಮ ತೇಜೋ ಬಲಂ ಬಲಮ್ ಆಗಿರುತ್ತದೆ.” ಎಂದು ಕರೆ ನೀಡಿದರು.

    ಧಾರ್ಮಿಕ ಚಿಂತಕ ಪ್ರೊ. ಎಂ.ಬಿ. ಪುರಾಣಿಕ್ ಮಾತನಾಡುತ್ತಾ “ಧರ್ಮದ ನಡೆಯೊಂದಿಗೆ ನಮ್ಮತನವನ್ನು ಬಿಗಿಗೊಳಿಸುತ್ತಾ ಸಾಗುವ ಹಿಂದೂ ಧರ್ಮದ ಪ್ರಮುಖ ವಿಭಾಗವೇ ನಾವು. ಹತ್ತು ವರ್ಷಗಳ ಸುದೀರ್ಘ ಪಯಣವನ್ನು ನಡೆಸಿದ ಈ ವಿಪ್ರ ವೇದಿಕೆ ಸಮಾಜಮುಖೀ ಕಾರ್ಯಕ್ರಮಗಳನ್ನು ನಡೆಸುತ್ತಾ ಮುಂದುವರಿಯಲಿ” ಎಂದು ಧರ್ಮ ಸಭೆಯಲ್ಲಿ ಹೇಳಿದರು. ಕೋಡಿಕಲ್ ನ ವಿಪ್ರವೇದಿಕೆಯ ದಶಮಾನೋತ್ಸವ ಸರಣಿ ಸಂಭ್ರಮದ ಸಚಿತ್ರ ಲೇಖನಗಳುಳ್ಳ ಸಂಚಿಕೆಯನ್ನು ದ.ಕ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ, ಉಪನ್ಯಾಸಕರೂ ಆದ ಡಾ. ಎಂ.ಪಿ. ಶ್ರೀನಾಥ್ ರವರು ಬಿಡುಗಡೆಗೊಳಿಸಿದರು.

    ವೇದಿಕೆಯಲ್ಲಿ ಡಿ. ರಮೇಶ ತಂತ್ರಿ, ವೈ. ಕೇಶವ ಭಟ್, ಮಂಗಳಾದೇವಿಯ ಮೊಕ್ತೇಸರರಾದ ಶ್ರೀ ಅರುಣ್ ಐತಾಳ, ವೇದಮೂರ್ತಿ ವಿಶ್ವಕುಮಾರ್ ಜೋಯಿಸ್, ಅನೂಪ್ ಕುಮಾರ್, ಬಾಗ್ಲೋಡಿ, ಸಂಪತ್ ಕುಮಾರ್ ಅತಿಥಿಗಳಾಗಿದ್ದರು. ಕುಮಾರಿ ಸಂಜನಾ ದಾಸ್ ಪ್ರಾರ್ಥಿಸಿ, ನರಸಿಂಹ ಕುಲಕರ್ಣಿ ‘ವಂದೇ ಮಾತರಂ’ ಗೀತೆಯನ್ನು ಹಾಡಿದರು. ವಿಪ್ರ ವೇದಿಕೆಯ ಅಧ್ಯಕ್ಷ ವರ್ಕಾಡಿ ರವಿ ಅಲೆವೂರಾಯ ಸ್ವಾಗತ – ಪ್ರಸ್ತಾವನೆ ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ದುರ್ಗಾದಾಸ್ ಕಟೀಲ್ ವರದಿ ವಾಚನಮಾಡಿದರು. ಟ್ರಸ್ಟಿಗಳಾದ ಪ್ರಭಾವತಿ ಮಡಿ, ವಿದ್ಯಾ ಗಣೇಶ್ ರಾವ್ ನಿರೂಪಿಸಿದರು. ನಿಧೀಶ್ ಅಲೆವೂರಾಯ ಗಣಪತಿ ಅರ್ಥವ 9 ಶೀರ್ಷವನ್ನು ಪಠಿಸಿದರು. ಟ್ರಸ್ಟಿ ಶ್ರೀಧರ ಹೊಳ್ಳ, ಖಚಾಂಚಿ ಶ್ರೀ ಕಿಶೋರ್ ಕೃಷ್ಣ ಧನ್ಯವಾದವಿತ್ತರು. ಪಂಜ ಭಾಸ್ಕರ ಭಟ್, ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು.

    baikady Cultural dance felicitation Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’
    Next Article ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23
    roovari

    Add Comment Cancel Reply


    Related Posts

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026

    ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’

    August 19, 2026

    Bharathanatya Rangapravesha of Kum. Vaishnavi K. Pai

    August 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.