Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ‘ತೇಜಸ್ವಿ ನಾಟಕೋತ್ಸವ’

    January 17, 2026

    ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    January 17, 2026

    ಅಮೃತ ಸೋಮೇಶ್ವರರ ನಾಟಕಗಳ ಇಂಗ್ಲೀಷ್ ಅನುವಾದ ಕೃತಿ ಬಿಡುಗಡೆ

    January 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮಾರೋಪಗೊಂಡ ‘ರಂಗ ಸಂಭ್ರಮ-2024’
    Bharathanatya

    ಸಮಾರೋಪಗೊಂಡ ‘ರಂಗ ಸಂಭ್ರಮ-2024’

    February 13, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಸುಳ್ಯದ ರಂಗ ಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನಡೆದ ‘ರಂಗ ಸಂಭ್ರಮ-2024’ದ ಸಮಾರೋಪದ ಸಮಾರಂಭವು ದಿನಾಂಕ 04-02-2024 ರಂದು ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಎಸ್. ಅಂಗಾರ “ನಿರಂತರ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ರಂಗ ಮನೆಯು ಸದಭಿರುಚಿಯ ಉತ್ತಮ ಪ್ರೇಕ್ಷಕ ಬಳಗವನ್ನು ಸೃಷ್ಟಿಸಿದೆ. ಇದರ ಸ್ಥಾಪಕ ಜೀವನ್ ರಾಂ ಸುಳ್ಯ ಅವರು ಇದಕ್ಕಾಗಿ ಅಭಿನಂದನಾರ್ಹರು. ಅವರೆಂದೂ ಪ್ರಶಸ್ತಿಗಾಗಿ ಶಿಫಾರಸ್ಸು ಕೇಳಲು ಬಂದವರಲ್ಲ. ಸುಳ್ಯದಲ್ಲಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಒಂದು ಕಲಾ ಗ್ರಾಮವನ್ನೇ ನಿರ್ಮಾಣ ಮಾಡಬೇಕೆನ್ನುವ ಯೋಜನೆ ನಮ್ಮಲ್ಲಿದೆ.” ಎಂದು ಹೇಳಿದರು.

    ಸಮಾರೋಪ ಭಾಷಣಗೈದ ಉಜಿರೆ ಎಸ್‌. ಡಿ. ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ “ಸೋಶಿಯಲ್‌ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಅದರ ಬದಲು ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದವುಗಳು ನಮ್ಮ ಲೋಕಾನುಭವವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇಲ್ಲಿನ ನೃತ್ಯ ಗುರು ವಿದ್ವಾನ್ ಚಂದ್ರಶೇಖರ ನಾವುಡ ಮಾತನಾಡಿ “ತನ್ನ ವಾಸದ ಮನೆಯನ್ನೇ ಸಾಂಸ್ಕೃತಿಕ ತಾಣವನ್ನಾಗಿಸಿದ ಉದಾಹರಣೆ ಬೇರೆಲ್ಲೂ ಸಿಗಲಾರದು. ಇಲ್ಲಿನ ಸಮಯಪ್ರಜ್ಞೆ, ಅಚ್ಚುಕಟ್ಟುತನ ಹಾಗೂ ಕಾರ್ಯಕ್ರಮದ ಗುಣಮಟ್ಟ ಎಲ್ಲವೂ ಇತರ ಸಂಘಟಕರಿಗೆ ಮಾದರಿಯಾಗಿದೆ.” ಎಂದರು.
    ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮತ್ತು ಗಾಯಕ ರಾಮಕೃಷ್ಣ ಕಾಟುಕುಕ್ಕೆ ಅವರನ್ನು ಸನ್ಮಾನಿಸಲಾಯಿತು. ರಂಗ ಮನೆಯ ಅಧ್ಯಕ್ಷ ಡಾ. ಜೀವನರಾಮ ಸುಳ್ಯ ಸ್ವಾಗತಿಸಿ, ರವೀಶ್ ಪಡ್ಡಂಬೈಲು ವಂದಿಸಿದರು. ಅಚ್ಚುತ ಅಟ್ಟೂರು ಕಾರ್ಯಕ್ರಮ ನಿರ್ವಹಿಸಿದರು.

    ರಂಗಸಂಭ್ರಮದ ನಾಲ್ಕು ದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಂಗಮನೆಯ ಸಭಾಂಗಣ ಪ್ರೇಕ್ಷಕರಿಂದ ತುಂಬಿ ತುಳುಕಿತು.
    ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ‘ನಾಯಿಮರಿ’ ನಾಟಕ, ಮೈಸೂರು ನಟನ ತಂಡದ ‘ಕಣಿವೆಯ ಹಾಡು’ ನಾಟಕ, ರಾಮಕೃಷ್ಣ ಕಾಟುಕುಕ್ಕೆಯವರಿಂದ 999 ನೇ ‘ದಾಸ ಸಂಕೀರ್ತನೆ’, ಕೆನರಾ ಕಲ್ಬರಲ್ ಅಕಾಡೆಮಿ ಮಂಗಳೂರು ಅಭಿನಯದ ‘ಶೂರ್ಪಣಖಾಯನ’ ನಾಟಕ, ಆಳ್ವಾಸ್ ನ ‘ಏಕಾದಶಾನನ’ ನಾಟಕ, ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇವರಿಂದ ‘ದಶಾವತಾರ’ ನೃತ್ಯ ರೂಪಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಬಹು ಮೆಚ್ಚುಗೆಗೆ ಪಾತ್ರವಾದವು.

    Share. Facebook Twitter Pinterest LinkedIn Tumblr WhatsApp Email
    Previous Articleವಿಮರ್ಶೆ – ಕವಿ ಪ್ರತಿಭೆ ಮತ್ತು ಕಾವ್ಯದ ಸಮನ್ವಯಕಾರ ಪಿ.ಎನ್. ಮುಡಿತ್ತಾಯರ ಅನಿಸಿಕೆ
    Next Article ನಾಟಕ ವಿಮರ್ಶೆ | ‘ಶಕ್ತಿ ಮಿತ್ರ’ – ಸಾಮಾಜಿಕ ಕಳಕಳಿಯ ಸಾರ್ಥಕ ಪ್ರಯೋಗ
    roovari

    Add Comment Cancel Reply


    Related Posts

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ‘ತೇಜಸ್ವಿ ನಾಟಕೋತ್ಸವ’

    January 17, 2026

    ಕಾಜಾಣ ರಂಗ ಶಾಲೆಯಿಂದ ರಂಗ ತರಬೇತಿ | ಫೆಬ್ರುವರಿ 01 

    January 17, 2026

    ದಾವಣಗೆರೆಯ ಕನ್ನಡ ಭವನದಲ್ಲಿ ‘ಕಲಾ ಸಮ್ಮೇಳನ – 2026’ | ಕೊನೆಯ ದಿನಾಂಕ ಜನವರಿ 24

    January 17, 2026

    ಕನ್ನಡ ಭವನದ ‘ರಜತ ಸಂಭ್ರಮ’ ನಾಡು ನುಡಿ ಹಬ್ಬ, ವಿವಿಧ ಪ್ರಶಸ್ತಿ ಪ್ರದಾನ | ಜನವರಿ 18

    January 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.