Subscribe to Updates

    Get the latest creative news from FooBar about art, design and business.

    What's Hot

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೋಟದಲ್ಲಿ ಸಮಾರೋಪಗೊಂಡ ‘ಯಕ್ಷ ತ್ರಿವಳಿ’
    Kannada

    ಕೋಟದಲ್ಲಿ ಸಮಾರೋಪಗೊಂಡ ‘ಯಕ್ಷ ತ್ರಿವಳಿ’

    April 22, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಸುವರ್ಣ ಪರ್ವದ ಸರಣಿ ಕಾರ್ಯಕ್ರಮವಾಗಿ ಕೋಟ ಮೂರ್ಕೈಯ ಹಂದೆ ಮಹಾ ವಿಷ್ಣು ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ ಎರಡು ದಿವಸಗಳ ಆಹ್ವಾನಿತ ತಂಡಗಳ ‘ಯಕ್ಷ ತ್ರಿವಳಿ’ ಯಕ್ಷೋತ್ಸವದ ಸಮಾರೋಪ ಸಮಾರಂಭ ದಿನಾಂಕ 18 ಏಪ್ರಿಲ್ 2025ರ ಶುಕ್ರವಾರದಂದು ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರಾಮಚಂದ್ರ ಐತಾಳ್ ಮಾತನಾಡಿ “ಮಣ್ಣಿಗೆ ಸಂಸ್ಕಾರ ಕೊಟ್ಟರೆ ಮಡಕೆಯಾಗುತ್ತದೆ, ಚಿನ್ನಕ್ಕೆ ಸಂಸ್ಕಾರ ಕೊಟ್ಟರೆ ಒಡವೆಯಾಗುತ್ತದೆ, ಸೆಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ, ಮಕ್ಕಳಿಗೆ ಸಂಸ್ಕಾರ ಕೊಟ್ಟರೆ ಮಹಾದೇವನಾಗುತ್ತಾನೆ. ಮಕ್ಕಳಿಗೆ ಬದುಕಿನ ಮೌಲ್ಯವನ್ನು ಕೊಡ ಬಲ್ಲ ಶಕ್ತಿ ಯಕ್ಷಗಾನಕ್ಕಿದೆ. ಮಗುವನ್ನು ತಾಯಿಯಂತೆ ಪೋಷಿಸಬಲ್ಲ ಶಕ್ತಿ ಯಕ್ಷಗಾನದ ನಿಜ ಸತ್ವವಾಗಿದೆ. ಸಾಲಿಗ್ರಾಮ ಮಕ್ಕಳ ಮೇಳದ ಹಂದೆ ಉಡುಪರು ಕಲೆಯ ಮೂಲಕ ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಹೇಳಿದರು.
    ಸಮಾರಂಭದಲ್ಲಿ ಮಕ್ಕಳ ಕ್ಷೇತ್ರದ ಅನನ್ಯ ಸಾಧಕ ಯಕ್ಷ ಗುರು ಶ್ರೀಧರ ಹೆಬ್ಬಾರ್ ಇವರಿಗೆ ‘ಸುವರ್ಣ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಯಕ್ಷ ವಿಮರ್ಶಕ ಬೇಳೂರು ರಾಘವ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ, ಹಂದೆ ದೇವಳದ ಆನುವಂಶಿಕ ಮೊಕ್ತೇಸರರಾದ ಅಮರ ಹಂದೆ, ಯಕ್ಷ ಸಂಘಟಕ ಸುದರ್ಶನ ಉರಾಳ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಅಧ್ಯಕ್ಷರಾದ ಬಲರಾಮ ಕಲ್ಕೂರ, ಉಪಾಧ್ಯಕ್ಷರಾದ ಜನಾರ್ದನ ಹಂದೆ, ಟ್ರಸ್ಟಿಯಾದ ಶ್ರೀಕಾಂತ ಉಡುಪ ಉಪಸ್ಥಿತರಿದ್ದರು.
    ಮಕ್ಕಳ ಮೇಳದ ಕಾರ್ಯದರ್ಶಿ ಸುಜಯೀಂದ್ರ ಹಂದೆ ಸ್ವಾಗತಿಸಿ, ಉಪನ್ಯಾಸಕ ರಾಘವೇಂದ್ರ ತುಂಗ ಕೆ. ಕಾರ್ಯಕ್ರಮ ನಿರೂಪಿಸಿ, ಮಕ್ಕಳ ಮೇಳದ ಉಪಾಧ್ಯಕ್ಷ ಜನಾರ್ದನ ಹಂದೆ ವಂದಿಸಿದರು. ಸಭಾ ಕಾರ್ಯಕ್ರಮದ ಮೊದಲು ಯಕ್ಷ ಆರಾಧನಾ ಕಿದಿಯೂರು ಇವರಿಂದ ಕೆ.ಜೆ. ಗಣೇಶ್ ನಿರ್ದೇಶನದಲ್ಲಿ ಶಶಿಪ್ರಭಾ, ಬಳಿಕ ಮಯೂರ ಕಲಾ ಪ್ರತಿಷ್ಠಾನ ಮಂಗಳೂರು ತಂಡದಿಂದ ರಕ್ಷಿತ್ ಪಡ್ರೆ ಇವರ ನಿರ್ದೇಶನದಲ್ಲಿ ‘ಶರಣ ಸೇವಾ ರತ್ನ’ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು.

    baikady kannada roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ವಿಶ್ವ ಪುಸ್ತಕ ದಿನಾಚರಣೆ | ಏಪ್ರಿಲ್ 23
    Next Article ಲೋಕಾರ್ಪಣೆಗೊಂಡ ಅಭಿಜಿತ್ ಪ್ರಕಾಶನದ 132ನೆಯ ಕೃತಿ ‘ಅಂದು ಇಂದು’
    roovari

    Add Comment Cancel Reply


    Related Posts

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.