Subscribe to Updates

    Get the latest creative news from FooBar about art, design and business.

    What's Hot

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಮಂಗಳೂರಿನ ರಂಗ ಸಂಸ್ಥೆ ಕಲಾಭಿಯಿಂದ ಶೀಘ್ರದಲ್ಲಿ ನಟನ ತರಬೇತಿ

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಮಾರೋಪಗೊಂಡ ‘ಯಶಸ್ವಿ ಮಹಿಳಾ ಸಮ್ಮಿಳನ’
    Dance

    ಸಮಾರೋಪಗೊಂಡ ‘ಯಶಸ್ವಿ ಮಹಿಳಾ ಸಮ್ಮಿಳನ’

    February 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಹಯೋಗದಲ್ಲಿ ‘ಯಶಸ್ವಿ ಮಹಿಳಾ ಸಮ್ಮಿಳನ’ ಕಾರ್ಯಕ್ರಮ ಸಮಾರೋಪ ಸಮಾರಂಭ ದಿನಾಂಕ 23 ಫೆಬ್ರವರಿ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಆನಂದ ಉರಾಳ್ ಇವರನ್ನು ಗೌರವಿಸಿದ ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಇದರ ಅಧ್ಯಕ್ಷರಾದ ಹೆರಿಯ ಮಾಸ್ಟರ್ ಮಾತನಾಡಿ “ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಂಘಟನೆಗಳಲ್ಲಿ ಇತ್ತೀಚೆಗೆ ಮಹಿಳೆಯರದೇ ಮೇಲುಗೈ. ಮಹಿಳೆಯರು ಸಂಪೂರ್ಣವಾಗಿ ತೊಡಗಿಸಿಕೊಂಡು ಯಶಸ್ಸುಗೊಳಿಸುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುವ ತಾಯಂದಿರು ಸಮಾಜದ ಶಕ್ತಿ. ಮಹಿಳೆಯರು ತಾನು ಕಲಿಯುವುದರ ಮೂಲಕ ತನ್ನ ಮಕ್ಕಳಿಗೂ ಕಲಿಸಿ ಭವಿಷ್ಯದ ರೂವಾರಿಗಳಾಗುತ್ತಾರೆ. ಮುಂದಿನ ಪೀಳಿಗೆಗೆ ಕಲೆಯನ್ನು ಪಸರಿಸುವ ಕಾರ್ಯ ಮಹಿಳೆಯರಿಂದ ಯಶಸ್ಸು ಕಾಣುವುದಕ್ಕೆ ಸಾಧ್ಯ” ಎಂದರು. ಸಮಾರಂಭದಲ್ಲಿ ಕಲಾ ಪ್ರೋತ್ಸಾಹಕ ಆನಂದ ಉರಾಳ್ ಹಾಗೂ ಯಕ್ಷಗುರು ಸುಧಾ ಮಣೂರು ಇವರಿಗೆ ಗುರುವಂದನೆ ಸಲ್ಲಿಸಲಾಯಿತು.
    ಸಅಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಮಂಜುನಾಥ ಕೆದಲಾಯ ಮಾತನಾಡಿ “ಮಹಿಳೆಯರು ಕಲಾ ವಲಯದಲ್ಲಿ ಕಾಲಿಟ್ಟರೆ ಮನೆಯ ಮಕ್ಕಳು ಕಲಿತಂತೆ. ತನ್ನ ಆಸಕ್ತಿಯನ್ನು ಮಕ್ಕಳಲ್ಲಿ ತೋರಿಸಿ, ತನ್ಮೂಲಕ ಸಮಾಜಕ್ಕೆ ಕೊಡುಗೆಯಾಗುತ್ತಾರೆ. ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲಾ ವಿಭಾಗದಲ್ಲಿಯೂ ಮಹಿಳೆಯರು ಸಾಧಕಿಯಾಗಿರುವುದನ್ನು ನಾವು ಗಮನಿಸಿರುತ್ತೇವೆ. ಹೆಣ್ಣು ಅಬಲೆಯಲ್ಲ, ಸಬಲೆ” ಎಂದರು.
    ಗುರು ಲಂಬೋದರ ಹೆಗಡೆ ನಿಟ್ಟೂರು, ಶ್ಯಾಮಲಾ ವರ್ಣ, ವನಿತಾ ಉಪಾಧ್ಯ, ಶ್ಯಾಮಲಾ ಟೀಚರ್, ಶಾರದಾ ಹೊಳ್ಳ, ಜ್ಯೋತಿ ಕೆದಲಾಯ, ಸಂಗೀತ, ಭಾಗ್ಯಲಕ್ಷ್ಮೀ, ಸುಜಾತ, ಪ್ರಮಿಳಾ, ಪೂರ್ಣಿಮ, ವಾಣಿಶ್ರೀ ಹಾಗೂ ಮಹಿಳಾ ಕಲಾವಿದರು ಉಪಸ್ಥಿತರಿದ್ದರು. ಹಾಡು, ನೃತ್ಯ, ಯಕ್ಷಗಾನ ರಂಗ ಪಸ್ತುತಿಗೊಂಡಿತು.

    dance Music yakshagana
    Share. Facebook Twitter Pinterest LinkedIn Tumblr WhatsApp Email
    Previous Articleಯುಗಾದಿ ಕವಿಗೋಷ್ಠಿಗೆ ಸ್ವರಚಿತ ಕವನಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15
    Next Article ಉಡುಪಿಯ ಕ.ಸಾ.ಪ.ದಿಂದ ‘ಸಾಹಿತ್ಯ ಪ್ರೇರಣೆ’ | ಮಾರ್ಚ್ 01
    roovari

    Add Comment Cancel Reply


    Related Posts

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಸುಬ್ರಾಯ ಹೊಳ್ಳರಿಗೆ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.