Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ
    Literature

    ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ

    November 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಸಂಸ್ಕಾರ ಭಾರತೀ ಪುತ್ತೂರು ಘಟಕದ ವತಿಯಿಂದ ವಾಲ್ಮೀಕಿ ನಮನ ಕಾರ್ಯಕ್ರಮವು ದಿನಾಂಕ 5-11-2023ನೇ ಭಾನುವಾರ ಅಪರಾಹ್ನ 4 ಗಂಟೆಗೆ ದರ್ಬೆಯಲ್ಲಿರುವ ಶಶಿಶಂಕರ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಉಪನ್ಯಾಸಕರು ಹಾಗೂ ಸಾಹಿತಿಗಳಾದ ಪ್ರೊ. ಹರಿನಾರಾಯಣ ಮಾಡಾವು ಇವರು “ದರೋಡೆಕಾರನಾದ ರತ್ನಾಕರನೆಂಬ ಬೇಡನು ದೇವರ್ಷಿ ನಾರದರ ಉಪದೇಶದ ಮೇರೆಗೆ ರಾಮಾಯಣದಂತಹ ಬೃಹತ್ ಗ್ರಂಥವನ್ನು ರಚಿಸಿ ಆದಿಕವಿ ವಾಲ್ಮೀಕಿ ಎನಿಸಿಕೊಂಡನು. 24,000 ಶ್ಲೋಕಗಳನ್ನೊಳಗೊಂಡ ರಾಮಾಯಣ ಗ್ರಂಥದ ಸಾರವು ಇಂದಿಗೂ ಪ್ರಸ್ತುತ.” ಎಂದ ಅವರು ವಾಲ್ಮೀಕಿಯ ಪೂರ್ವೇತಿಹಾಸದ ಸವಿಸ್ತಾರವಾದ ವಿವರಗಳನ್ನು ನೀಡಿದರು.

    ಕಾರ್ಯಕ್ರಮದಲ್ಲಿ, ಸದಸ್ಯೆ ಶಂಕರಿ ಶರ್ಮ ಅವರು ವಾಲ್ಮೀಕಿ ನುಡಿನಮನ ಸಲ್ಲಿಸುತ್ತಾ, “ರಾಮಾಯಣದಲ್ಲಿರುವ ವಿಭಿನ್ನ ಪಾತ್ರಗಳು ಇಂದಿಗೂ ಜೀವಂತ ನಿದರ್ಶನದಂತಿವೆ.” ಎಂದರು. ಸದಸ್ಯೆ ವಿದುಷಿ ಪ್ರೀತಿಕಲಾ ಮತ್ತು ಸದಸ್ಯೆ ವಿದುಷಿ ಮೇಘನಾ ಪಾಣಾಜೆ ಇವರು ರಾಮಾಯಣದ ಉತ್ತರ ಕಾಂಡದಿಂದ ಆಯ್ದ ಶ್ಲೋಕಗಳ ವಿವರಣಾತ್ಮಕ ಗಾಯನದ ಮೂಲಕ ವಾಲ್ಮೀಕಿ ಗೀತ ನಮನಗೈದರು. ಸದಸ್ಯೆ ಕೃಷ್ಣವೇಣಿ ಮುಳಿಯ ಇವರು ರಾಮಾಯಣದ ರಸಪ್ರಶ್ನೆಗಳಿಂದ ಸಭಿಕರನ್ನು ರಂಜಿಸಿದರು. ದ.ಕ. ಜಿಲ್ಲೆಯ ಪುತ್ತೂರು ಘಟಕದ ಸಂಘಟನಾ ಕಾರ್ಯದರ್ಶಿ ವಿದ್ವಾನ್ ದೀಪಕ್ ಕುಮಾರ್ ಇವರು ರಾಮಾಯಣ ಉತ್ತರ ಕಾಂಡದಿಂದ ಆಯ್ದ ಕೆಲವು ಶ್ಲೋಕಗಳಿಗೆ ಅತ್ಯಂತ ಭಾವಪೂರ್ಣ ನೃತ್ಯಾಭಿನಯವನ್ನು ಪ್ರದರ್ಶಿಸಿದರು. ಕೊನೆಯಲ್ಲಿ, ಮಹಾಲಿಂಗೇಶ್ವರ ಭಜನ ಸೇವಾ ಟ್ರಸ್ಟ್(ರಿ) ಇದರ ಸಂಸ್ಕಾರ ಭಾರತೀ ಸದಸ್ಯರ ವತಿಯಿಂದ ಭಜನಾ ನಮನ ನಡೆಯಿತು.

    ಶಂಖನಾದ, ಓಂಕಾರನಾದ ಹಾಗೂ ಧ್ಯೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಕಾರ್ಯದರ್ಶಿ ನಾಗರಾಜ ಶೆಟ್ಟಿ ದಂಪತಿ, ಸನಾತನ ನಾಟ್ಯಾಲಯದ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ಶಾರದಾಮಣಿ ಶೇಖರ್, ಸದಸ್ಯರಾದ ವಿದ್ವಾನ್ ಗೋಪಾಲಕೃಷ್ಣ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

    ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ರೂಪಲೇಖಾ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರ ಹಾಗೂ ಲಘು ಉಪಹಾರದೊಂದಿಗೆ ವಾಲ್ಮೀಕಿ ನಮನ ಕಾರ್ಯಕ್ರಮವು ಸುಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ದತ್ತಿ ಉಪನ್ಯಾಸ
    Next Article ರಂಗಭೂಮಿಯ ಒಡನಾಟದ ಕಥನವನ್ನು ಹೇಳುವ ಶ್ರೀಮತಿ ಪೂರ್ಣಿಮಾ ಸುರೇಶ್ ಅವರ ಕೃತಿ ‘ರಂಗ ರಂಗೋಲಿ’ಯ ಲೋಕಾರ್ಪಣೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.