Subscribe to Updates

    Get the latest creative news from FooBar about art, design and business.

    What's Hot

    ಪಾವಂಜೆಯಲ್ಲಿ ‘ಯಕ್ಷಾಂತರಂಗ’ ಯಕ್ಷಗಾನ ಪ್ರಸಂಗ ಸಾಹಿತ್ಯ ಮತ್ತು ರಂಗ ನಡೆಗಳ ಮಾಹಿತಿ ಕಾರ್ಯಾಗಾರ | ಆಗಸ್ಟ್ 20ರಿಂದ 24

    August 16, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಹೆಜ್ಜೆಗಳು’ ನಾಟಕ ಪ್ರದರ್ಶನ | ಆಗಸ್ಟ್ 19

    August 16, 2025

    ‘ಆವಿಷ್ಕಾರ’ ವೇದಿಕೆಯಿಂದ ‘ಕಥನ, ಕವನ, ಗಾಯನ’ ಕಾರ್ಯಕ್ರಮ | ಆಗಸ್ಟ್ 17

    August 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡಬಿದಿರೆಯಲ್ಲಿ ಉದ್ಘಾಟನೆಗೊಂಡ ವಿವಿಧ  ಮೇಳಗಳು 
    Drawing

    ಮೂಡಬಿದಿರೆಯಲ್ಲಿ ಉದ್ಘಾಟನೆಗೊಂಡ ವಿವಿಧ  ಮೇಳಗಳು 

    December 11, 2024Updated:January 7, 2025No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 10 ಡಿಸೆಂಬರ್ 2024 ರಿಂದ 15 ಡಿಸೆಂಬರ್ 2024ರ ವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ಅಳ್ವಾಸ್ ವಿರಾಸತ್’ ಅಂಗವಾಗಿ ಹಮ್ಮಿಕೊಂಡ ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳ ಉದ್ಘಾಟನಾ ಸಮಾರಂಭವು ದಿನಾಂಕ 10 ಡಿಸೆಂಬರ್ 2024ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್ “ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ. ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ 500 ಎಕರೆ ಹಡಿಲು ಭೂಮಿಯನ್ನು ಭತ್ತದ ಗದ್ದೆಯಾಗಿ ಪರಿವರ್ತಿಸಲಾಗುತ್ತಿದೆ. ಗೇರು ಕೃಷಿಗೆ ಸಂಬಂಧಿಸಿದಂತೆ ವಿ.ವಿಯು ಸಂಪೂರ್ಣ ತಂತ್ರಜ್ಞಾನ ಹೊಂದಿದ್ದು, ಪ್ರತಿ ವರ್ಷ 3 ಲಕ್ಷ ಗೇರು ಸಸಿ ನೀಡಿ, ಬೆಳೆಗೆ ಪ್ರೊತ್ಸಾಹಿಸಲಾಗುತ್ತಿದೆ. ‘ಸಹ್ಯಾದ್ರಿ ಕೆಂಪು ಮುಕ್ತಿ’ ಹಾಗೂ ‘ಪಂಚಮಿ ಭತ್ತದ ತಳಿ’ ಇಲ್ಲಿನ ಹವಾಗುಣಕ್ಕೆ ಸೂಕ್ತವಾಗಿದ್ದು ಅದನ್ನು ಬೆಳೆಯಿರಿ ಹಾಗೂ ಒಳನಾಡಿನ ಮೀನುಗಾರಿಕೆಗೂ ಒತ್ತು ನೀಡಿ. ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಶೇ 65ರಷ್ಟು ಜನರಿಗೆ ಉದ್ಯೋಗ, ದೇಶದ 140 ಕೋಟಿಗೂ ಅಧಿಕ ಜನಸಂಖ್ಯೆಗೆ ಆಹಾರ ನೀಡಿದೆ. ದೇಶದ ಶಾಂತಿ- ಸಹಬಾಳ್ವೆಗೆ ಕೃಷಿ ಕೊಡುಗೆ ಅಪಾರ. ದೇಶದಲ್ಲಿ ವಾರ್ಷಿಕ ಸುಮಾರು 250 ಕೋಟಿ ಮೆಟ್ರಿಕ್ ಟನ್‌ಗೂ ಅಧಿಕ ಆಹಾರದ ಬೇಡಿಕೆ ಇದೆ. ಈ ಪೈಕಿ ಸುಮಾರು 33 ಕೋಟಿ ಮೆಟ್ರಿಕ್ ಟನ್ ಆಹಾರ-ಧಾನ್ಯ, 35 ಕೋಟಿ ಮೆಟ್ರಿಕ್ ಟನ್, ತರಕಾರಿ, 50 ಕೋಟಿ ಮೆಟ್ರಿಕ್ ಟನ್ ಹಾಲು ಮತ್ತು ಅದರ ಉತ್ಪನ್ನಗಳು, 60 ಮೆಟ್ರಿಕ್ ಟನ್‌ಗೂ ಅಧಿಕ ಮಾಂಸ ಮತ್ತಿತರ ಆಹಾರಗಳಿವೆ. ವಿದ್ಯಾರ್ಥಿಗಳಲ್ಲಿ ಬುದ್ಧಿಮತ್ತೆ ಹೆಚ್ಚಲು ಪೌಷ್ಟಿಕ ಆಹಾರ ಸೇವನೆಯೂ ಅವಶ್ಯ.” ಎಂದರು.
    ಸ್ಕೌಟ್ಸ್ ಮತ್ತು ಗೈಡ್ಸ್ – ರೋವರ್ಸ್ ರೇಂಜರ್ಸ್ ಸಾಂಸ್ಕೃತಿಕ ಶಿಬಿರ, ಕರಕುಶಲ ಮೇಳ, ಆಹಾರ ಮೇಳವನ್ನು ಉದ್ಘಾಟಿಸಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಅಯುಕ್ತ ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ “ಕನ್ನಡ, ಕ್ರೀಡೆ, ಸಂಸ್ಕೃತಿ, ಶಿಸ್ತು ಮತ್ತಿತರ ವಿಚಾರಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಗುವ ಪ್ರೇರಣೆ ಬೇರೆ ಕಡೆ ಇಲ್ಲ. ಸಮಯ ಪ್ರಜ್ಞೆ , ಸ್ವಚ್ಛತೆ ಹಾಗೂ ಶಿಸ್ತುಗೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸೇವೆಗೆ ರೋವರ್ಸ್ -ರೇಂಜರ್ಸ್ ಹೆಸರುವಾಸಿಯಾಗಿದೆ. ಕೋವಿಡ್ ಸಂದರ್ಭದಲ್ಲಿ ನೀಡಿದ ಸೇವೆ ಅಪರಿಮಿತ. ಆಳ್ವಾಸ್ ನಲ್ಲಿ ನಡೆದ ಜಾಂಬೂರಿ ದೇಶಕ್ಕೆ ಜಗದ್ವಿಖ್ಯಾತಿ ನೀಡಿತು. ಇಂದು ದೇಶದಲ್ಲಿ ಪ್ರತಿಷ್ಠೆಗಾಗಿ ಶೇ 40 ರಷ್ಟು ಆಹಾರ ಪೋಲಾಗುತ್ತಿದ್ದು, ಇದು ದೇಶದ್ರೋಹದ ಕೆಲಸ.” ಎಂದು ಅವರು ಬೇಸರ ವ್ಯಕ್ತ ಪಡಿಸಿದರು.
    ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಾತನಾಡಿ “ಸನ್ನಡತೆ, ಶಿಸ್ತು, ಒಳ್ಳೆಯ ಮನೋಭಾವದಿಂದ ಮನಸ್ಸಿನ ಶ್ರೀಮಂತಿಕೆ ಬರುತ್ತದೆ. ಅಂತಹ ಶ್ರೀಮಂತ ವ್ಯಕ್ತಿ ಡಾ. ಎಂ. ಮೋಹನ ಆಳ್ವ.” ಎಂದು ಬಣ್ಣಿಸಿದರು.
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ “ಇಲ್ಲಿನ ಎಲ್ಲಾ ಕಾರ್ಯಗಳು ಕಲಿಕೆಯ ಭಾಗ. ಬದುಕಿನ ಆಂದೋಲನದ ಅಂಗ. ಇವು ನಿಮ್ಮ ಜೀವನದ ಅವಿಭಾಜ್ಯ ಅಂಗ. ಎಲ್ಲ ಮಕ್ಕಳ ಮನೋಭಾವ ಬದಲಾಗಲಿ. ಪ್ರತಿ ಕ್ಷಣವೂ ಆದರ್ಶನೀಯವಾಗಲಿ.” ಎಂದು ಆಶಿಸಿದರು.
    ಮೂಡುಬಿದಿರೆಯ ಎಂ. ಸಿ. ಎಸ್. ಬ್ಯಾಂಕ್‌ ಇದರ ಅಧ್ಯಕ್ಷರಾದ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಎಂ. ಸಿ. ಎಸ್. ಬ್ಯಾಂಕ್ ಇದರ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಬ್ರಹ್ಮಾವರದ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಡಾ. ಧನಂಜಯ್ ಬಿ., ಕೃಷಿ ಇಲಾಖೆಯ ಉಪ ನಿರ್ದೇಶಕ  ಶಶಿಧರ್, ಉಡುಪಿಯ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಪುತ್ತೂರಿನ ನವನೀತ್ ನರ್ಸರಿಯ ವೇಣುಗೋಪಾಲ ಎಸ್. ಜೆ., ಮಂಗಳೂರಿನ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪೊನ್ನಪ್ಪ, ಧನಲಕ್ಷ್ಮಿ ಕ್ಯಾಶೂಸ್ ಇದರ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಸಿರಿ ಸಂಸ್ಥೆಯ ಜನಾರ್ದನ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಇದರ ನಿರ್ದೇಶಕ ಪ್ರಭಾಕರ್ ಭಟ್ ಉಪಸ್ಥಿತರಿದ್ದರು.
    ಇದೇ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ಪ್ರಾರ್ಥನೆ ಹಾಗೂ ಗಾಯಕ ಯಶವಂತ್ ಅವರು ರೈತಗೀತೆಯನ್ನು ಹಾಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರಿಗೆ ‘ಕರಾವಳಿ ರತ್ನ ಪ್ರಶಸ್ತಿ’
    Next Article ಕೀಳಂಜೆಯಲ್ಲಿ ‘ಕನ್ನಡ ಶಾಲೆಯಲಿ ಕಾವಿಕಲೆಯ ಕಿಶೋರ ಕಾರ್ಯಾಗಾರ’
    roovari

    Add Comment Cancel Reply


    Related Posts

    ಮಂಗಳೂರಿನ ಟಾಗೋರ್ ಪಾರ್ಕಿನಲ್ಲಿ ಸೃಜನಾತ್ಮಕ ಕಲಾ ಪ್ರದರ್ಶನ | ಆಗಸ್ಟ್ 17

    August 16, 2025

    ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ | ಆಗಸ್ಟ್ 16

    August 14, 2025

    ರೋಟರಿ ಕ್ಲಬ್ ವತಿಯಿಂದ ಜಾನ್ ಎಫ್. ಕೆನಡಿ ಇವರಿಗೆ ಸನ್ಮಾನ

    August 11, 2025

    ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

    August 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.