Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ, ಸ್ತ್ರೀವಾದಿ ಸಾಹಿತಿ ಡಾ. ಎಸ್. ವಿ. ಪ್ರಭಾವತಿ

    July 25, 2025

    ‘ಅಂತರಂಗ ಬಹಿರಂಗ’ ದಿಂದ ಒಂದೇದಿನ 2 ನಾಟಕಗಳ ಪ್ರದರ್ಶನ | ಜುಲೈ 27

    July 25, 2025

    ‘ಕನ್ನಡ ನುಡಿ ರತ್ನ’ ರಾಜ್ಯ ಮಟ್ಟದ ಕವನ ಸಂಕಲನಕ್ಕೆ ಕವನಗಳ ಆಹ್ವಾನ

    July 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ‘ವರ್ಣಾಂಜಲಿ 2024’ ಚಿತ್ರಕಲಾ ಸ್ಪರ್ಧೆ
    Competition

    ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ‘ವರ್ಣಾಂಜಲಿ 2024’ ಚಿತ್ರಕಲಾ ಸ್ಪರ್ಧೆ

    December 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಏರ್ಯ ಆಳ್ವ ಫೌಂಡೇಶನ್ ಮೊಡಂಕಾಪು ಇದರ ಸಹಯೋಗದೊಂದಿಗೆ ಏರ್ಯ ಲಕ್ಷ್ಮೀನಾರಾಯಣ ಆಳ್ವರವರ ಸ್ಮರಣಾರ್ಥ 2ನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ 2024’ ದಿನಾಂಕ 22 ಡಿಸೆಂಬರ್ 2024ರಂದು ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ರಂಗಭೂಮಿ ಕಲಾವಿದೆ ಸರೋಜಿನಿ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳಲ್ಲಿ ಬೇರೆ ಬೇರೆ ಪ್ರತಿಭೆಗಳಿರುತ್ತದೆ. ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿಯಿರುತ್ತದೆ. ಅವುಗಳನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ. ಸೇವಾಂಜಲಿ ಸಂಸ್ಥೆ ಮೂಲಕ ಬಡವರಿಗೆ, ರೋಗಿಗಳಿಗೆ ಶಕ್ತಿ ತುಂಬುವ ಕಾರ್ಯ ಕೃಷ್ಣಕುಮಾ‌ರ್ ಪೂಂಜ ಮಾಡುತ್ತಿದ್ದಾರೆ. ಈ ಸೇವೆ ನಿರಂತರವಾಗಿ ನಡೆಯಲಿ.” ಎಂದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮಾತನಾಡಿ “ಚಿತ್ರಕಲೆಯಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸಿಕೊಂಡರೆ ಅವರ ಕಲಿಕೆಗೆ ಅಡ್ಡಿಯಾಗುವುದಿಲ್ಲ ಬದಲಾಗಿ ಕಲಿಕೆಗೆ ಪೂರಕವಾಗಲಿದೆ.” ಎಂದರು.

    ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿ, ಚಿತ್ರಕಲಾ ಶಿಕ್ಷಕ ಬಾಲಕೃಷ್ಣಶೆಟ್ಟಿ ಖಂಡಿಗೆ ಕಾರ್ಯ ಕ್ರಮ ನಿರೂಪಿಸಿ, ಶಿಕ್ಷಕ ದೇವದಾಸ್ ವಂದಿಸಿದರು,. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ 500 ಮಂದಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೇಂದ್ರೆ ನೆಲದಲ್ಲಿ ‘ಗಂಗಾವತರಣ ‘
    Next Article ಬಿ. ಜಿ. ಎಂ. ಆರ್ಟ್ ಟ್ರಸ್ಟ್‌ ವತಿಯಿಂದ ಚಿತ್ರಕಲಾ ಸ್ಪರ್ಧೆ| ಜನವರಿ 05
    roovari

    Add Comment Cancel Reply


    Related Posts

    ಕುಂದಾಪುರ ಕನ್ನಡದ ಗಾದೆ ಮತ್ತು ಒಗಟುಗಳ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

    July 25, 2025

    ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ | ಜುಲೈ 26

    July 23, 2025

    ‘ಕವಿಗಳು ಕಂಡ ನಮ್ಮ ಕುಡ್ಲ’ ಕವನ, ಕವಿತೆ ಮತ್ತು ಚುಟುಕು ಬರಹ ವಾಚನ | ಕೊನೆಯ ದಿನಾಂಕ ಜುಲೈ 20

    July 16, 2025

    ಪತ್ರಕರ್ತರ ಸಂಘದಿಂದ ‘ಕಥೆ ಹೇಳುವ ಸ್ಪರ್ಧೆ’ | ಕೊನೆಯ ದಿನಾಂಕ ಜುಲೈ 25

    July 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.