Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ
    Literature

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಕಸಾಪ ಮಂಗಳೂರು ಘಟಕದ ವತಿಯಿಂದ ಗೌರವ ಕಾರ್ಯದರ್ಶಿಗಳಾದ ಡಾ. ಮುರಲೀಮೋಹನ್ ಚೂಂತಾರು ಹಾಗೂ ಡಾ. ರಾಜಶ್ರೀ ಮೋಹನ್ ದಂಪತಿಗಳು ತಮ್ಮ ಕಡಲತಡಿಯ ಮನೆ ‘ಕನಸು’ ವಿನಲ್ಲಿ ಆಯೋಜಿಸಿದ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ ದಿನಾಂಕ 26 ಜೂನ್ 2025 ರಂದು ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್ ಮಾತನಾಡಿ “ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ದ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಪುಲ್ಲಿತವಾಗುತ್ತದೆ” ಎಂದರು.
    ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಹಾಸ್ಯ ಲೇಖಕಿ ಪ್ರೊ. ಭುವನೇಶ್ವರಿ ಹೆಗಡೆ ಕವಿಗಳು ತಮ್ಮ ಬದುಕಿನ ವಿವಿಧಾನುಭವಗಳನ್ನು ಕವನಗಳ ಮೂಲಕ ಹಂಚಿಕೊಂಡ ಬಗೆಯನ್ನು ಬಹಳವಾಗಿ ಮೆಚ್ಚಿಕೊಂಡು. “ಇಂತಹ ಸಾಹಿತ್ಯ ಕಾರ್ಯಕ್ರಮಗಳು ಮನಸ್ಸಿನ ಭಾರಗಳನ್ನು ಹಗುರಾಗಿಸಿ ಒಂದಿಷ್ಟು ಕಾಲ ನೆನಪಿನಲ್ಲಿ ಉಳಿದು ಉಲ್ಲಸಿತಗೊಳಿಸುವಂತಹವುಗಳು. ನಗರದ ಒತ್ತಡದ ಬದುಕಿನಿಂದ ದೂರವಾಗಿ ಇಂತಹ ಪ್ರಶಾಂತವಾದ ವಾತಾವರಣದಲ್ಲಿ ಸೇರಿಕೊಳ್ಳಬೇಕು, ಎಲ್ಲವನ್ನೂ ಮರೆತು ಹೀಗೆ ಕಳೆಯುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.
    ಇನ್ನೋರ್ವ ಮುಖ್ಯ ಅತಿಥಿ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿಯವರು ಡಾ. ಮುರಲೀಮೋಹನ್ ಚೂಂತಾರು ಇವರ ಸಂಘಟನಾ ಚತುರತೆಗೆ ಮೆಚ್ಚಿಕೆ ಸೂಚಿಸಿ ರೆಡ್ ಕ್ರಾಸ್ ಸಂಸ್ಥೆಯ ಕೇಂದ್ರ ಸಮಿತಿಯ ಸದಸ್ಯರಾಗಿ ಆಯ್ಕೆಯಾದುದಕ್ಕೆ ಅವರನ್ನು ಅಭಿನಂದಿಸಿದರು.
    ಖ್ಯಾತ ಯುವ ಗಾಯಕ ವಿನಮ್ರ ಇಡ್ಡಿದುರವರ ಮಧುರ ಗಾಯನ ಕಾರ್ಯಕ್ರಮಕ್ಕೆ ಇನ್ನಷ್ಟು ಕಳೆಯನ್ನು ನೀಡಿತು. ಗಣೇಶ ಪ್ರಸಾದ ಜೀ, ರಘು ಇಡ್ಡಿದು, ಡಾ. ಮೀನಾಕ್ಷಿ ರಾಮಚಂದ್ರ, ಡಾ.ಕಿಶನ್ ಬಾಳಿಲ, ಶೈಲಜಾ ಪುದುಕೋಳಿ, ಸಾವಿತ್ರಿ ರಮೇಶ್ ಭಟ್, ಎಸ್.ಕೆ. ಗೋಪಾಲಕೃಷ್ಣ ಭಟ್, ರೇಖಾಶಂಕ‌ರ್, ಎಂ. ಟಿ. ಭಟ್, ವಿಶ್ವೇಶ್ ಭಿಡೆ ಮುಂತಾದವರು ತಮ್ಮ ಕವನಗಳನ್ನು ವಾಚಿಸಿದರು. ಪ್ರೊ. ಭುವನೇಶ್ವರಿ ಹೆಗಡೆಯವರ ಪುತ್ರಿ ಅಭಾ ಹೆಗಡೆ ಉಪಸ್ಥಿತರಿದ್ದರು.
    ಶ್ರೀಮತಿ ರತ್ನಾವತಿ ಬೈಕಾಡಿಯವರ ಕನ್ನಡ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಡಾ. ಮುರಲೀಮೋಹನ್ ಚೂಂತಾರು ಸ್ವಾಗತಿಸಿ, ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ನಿರೂಪಿಸಿ, ಗೌರವ ಕಾರ್ಯದರ್ಶಿ ಗಣೇಶ ಪ್ರಸಾದ ಜೀ ವಂದಿಸಿದರು. ಜಿಲ್ಲಾ ಸಮಿತಿಯ ಸನತ್ ಕುಮಾರ್ ಜೈನ್, ಪ್ರೊ. ರಮೇಶ್ ಭಟ್, ವಿದ್ಯಾ ಇಡ್ಕಿದು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31
    roovari

    Add Comment Cancel Reply


    Related Posts

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.