Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಮೇರು ಕಲಾವಿದ ಪೆರುವಡಿ ನಾರಾಯಣ ಭಟ್ ಇನ್ನಿಲ್ಲ  
    Yakshagana

    ಯಕ್ಷಗಾನ ಮೇರು ಕಲಾವಿದ ಪೆರುವಡಿ ನಾರಾಯಣ ಭಟ್ ಇನ್ನಿಲ್ಲ  

    November 1, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಒಂದು ಶತಮಾನದ ಯಕ್ಷಗಾನ ಚರಿತ್ರೆಯ ಸಾಕ್ಷಿಯಂತೆ ಬದುಕಿದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ (96) ದಿನಾಂಕ 31-10-2023ರಂದು ನಿಧನ ಹೊಂದಿದ್ದಾರೆ. ಬಾಲ್ಯದಲ್ಲಿ ಶಾಲಾ ವಿದ್ಯಾಭ್ಯಾಸದೊಂದಿಗೆ ಸಂಸ್ಕೃತ ಪಾಠವನ್ನು ಕಲಿತಿದ್ದರು. ಪ್ರಸಿದ್ಧ ಪದ್ಯಾಣ ಮನೆತನದವರಾಗಿರುವ ಇವರು ಬಾಲ್ಯದಲ್ಲೇ ತಾಳಮದ್ದಳೆಯಲ್ಲಿ ಆಸಕ್ತಿ ಹೊಂದಿದ್ದರು. ಕುರಿಯ ವಿಠಲ ಶಾಸ್ತ್ರಿಯವರ ವೇಷದ ಅಂದಕ್ಕೆ ಮರುಹೋಗಿ ತಾನೂ ಕಲಾವಿದನಾಗಬೇಕೆಂಬ ಆಶಯ ಹೊಂದಿದ್ದರು. ಅಜ್ಜ ಸುಬ್ರಾಯ ಭಟ್ಟರ ಮೂಲಕ ಕುರಿಯರ ನೇತೃತ್ವದ ಶ್ರೀ ಧರ್ಮಸ್ಥಳ ಮೇಳದಿಂದ ಕಲಾ ಬದುಕು ಆರಂಭಿಸಿದರು.

    ಧರ್ಮಸ್ಥಳ ಮೇಳದಲ್ಲಿ ಕುರಿಯ ವಿಠಲ ಶಾಸ್ತ್ರಿಗಳು, ಅಗರಿ ಶ್ರೀನಿವಾಸ ಭಾಗವತರು ಮೊದಲಾದ ದಿಗ್ಗಜಗಳೊಂದಿಗೆ ಒಡನಾಟ ಲಭ್ಯವಾಯಿತು. ದೇರಾಜೆ ಸೀತಾರಾಮಯ್ಯರಿಂದ ಪ್ರಭಾವಿತರಾದರು. ಪೆರುವಡಿ ನಾರಾಯಣ ಭಟ್ಟರ ಯಕ್ಷಗಾನದ ಮಾತು ಕೇವಲ ಅರ್ಥವಾಗದೆ ‘ವಾಗರ್ಥ’ ವೆನಿಸಿಕೊಳ್ಳುತ್ತಿತ್ತು. ಹಾಸ್ಯಪಾತ್ರದಲ್ಲಿ ಅವರಂತೆ ಭಾಷೆಯನ್ನು ಸೊಗಸಾಗಿ ಬಳಸಿದವರಿಲ್ಲ. ಹಾಸ್ಯಗಾರರೆಂದು ಪ್ರಸಿದ್ಧರಾದರೂ ಗಂಭೀರ ಪೋಷಕ ಪಾತ್ರಗಳ ಪ್ರಸ್ತುತಿಗೆ ಹೆಸರಾಗಿದ್ದರು. ಅವರು ಯಜಮಾನ ನಾರಾಯಣ ಭಟ್ಟರೂ ಹೌದು! ತಮ್ಮ ಸೋದರ ಬಂಧುಗಳೊಂದಿಗೆ ಒಂದು ದಶಕಕ್ಕಿಂತಲೂ ಅಧಿಕ ಕಾಲ ಮುಲ್ಕಿ ಮೇಳವನ್ನು ನಡೆಸಿದ್ದರು. ಕಾರವಾರದವರೆಗೆ ತೆಂಕುತಿಟ್ಟಿನ ದಿಗ್ವಿಜಯ ನಡೆಸಿದ್ದರು. ಪುತ್ತಿಗೆ ರಾಮಕೃಷ್ಣ ಜೋಯಿಸರನ್ನು, ಕಿರಿಯ ಬಲಿಪ ನಾರಾಯಣ ಭಾಗವತರನ್ನು ಮುಲ್ಕಿ ಮೇಳಕ್ಕೆ ಸೇರಿಸಿದ್ದರು. ಕಡತೋಕಾ ಮಂಜುನಾಥ ಭಾಗವತರನ್ನು ಮೊದಲ ಬಾರಿಗೆ ತೆಂಕುತಿಟ್ಟಿಗೆ ಪರಿಚಯಿಸಿದ ಕೀರ್ತಿ ಇವರದಾಗಿತ್ತು. ಪುತ್ತೂರು ನಾರಾಯಣ ಹೆಗಡೆ, ಎಂಪೆಕಟ್ಟೆ ರಾಮಯ್ಯ ರೈಯಂಥವರು ಮುಲ್ಕಿ ಮೇಳದಿಂದ ತಮ್ಮ ಯಶಸ್ವಿ ವೃತ್ತಿ ಬದುಕನ್ನು ಆರಂಭಿಸಿದ್ದರು.

    ಧರ್ಮಸ್ಥಳ ಮಂಜಯ್ಯ ಹೆಗ್ಗಡೆಯವರ ಕಾಲದಲ್ಲಿ ಜರಗಿದ, ಹಾರಾಡಿ ರಾಮ ಗಾಣಿಗ, ಕೊಕ್ಕರ್ಣೆ ನರಸಿಂಹ ಕಮ್ತಿ, ಕುರಿಯ ವಿಠಲ ಶಾಸ್ತ್ರಿ, ಅಳಿಕೆ ರಾಮಯ್ಯ ರೈ, ಕಡಂದೇಲು ಪುರುಷೋತ್ತಮ ಭಟ್ಟ, ಕೋಳ್ಯೂರು ರಾಮಚಂದ್ರ ರಾವ್‌ ಮೊದಲಾದವರ ಕೂಡುವಿಕೆಯಲ್ಲಿ ಜರಗಿದ ತೆಂಕು-ಬಡಗಿನ ಪ್ರತ್ಯೇಕ ಸ್ಪರ್ಧಾತ್ಮಕ ಪ್ರದರ್ಶನಗಳಲ್ಲಿ ಪೆರುವಡಿಯವರ ನಾರದನ ಪಾತ್ರ ಮೆಚ್ಚುಗೆಗೆ ಪಾತ್ರವಾಗಿತ್ತು. ಬಡಗಿನ ಸಾಲಿಗ್ರಾಮ ಮೇಳದಲ್ಲಿ ಗುಂಡ್ಮಿ ಕಾಳಿಂಗ ನಾವಡ, ಚಿಟ್ಟಾಣಿ ರಾಮಚಂದ್ರ ಹೆಗಡೆ ಮೊದಲಾದವರೊಂದಿಗೆ ತಿರುಗಾಟ ನಡೆಸಿದ್ದರು. ಸುರತ್ಕಲ್‌ ಮೇಳದ ‘ಪಾಪಣ್ಣ ವಿಜಯ’ದ ಪಾಪಣ್ಣನ ಪಾತ್ರದಲ್ಲಿ ಇವರನ್ನು ಮೀರಿಸಿದವರು ಇವತ್ತಿನವರೆಗೂ ಇಲ್ಲ. ಬಾಹುಕನ ಪಾತ್ರಕ್ಕೆ ಹೊಸ ಭಾವನಾತ್ಮಕ ಆಯಾಮವನ್ನು ಕೊಟ್ಟಿದ್ದರು. ಸದಾ ಅಧ್ಯಯನಶೀಲರಾಗಿ ಇತ್ತೀಚೆಗಿನವರೆಗೂ ‘ನಳದಮಯಂತಿ’ ಕಥನದ ಬೇರೆ ಬೇರೆ ಪಾಠಾಂತರಗಳನ್ನು ಓದುತ್ತ ಆ ಪಾತ್ರದ ಬಾಹುಕನನ್ನು ಹೇಗೆ ಹೊಸ ರೀತಿಯಲ್ಲಿ ಮಾಡಬಹುದೆಂದು ಯೋಚನೆ ಮಾಡುತ್ತಿದ್ದರು.

    ಕದ್ರಿ ಮೇಳದಲ್ಲಿ ‘ಗೆಜ್ಜೆದ ಪೂಜೆ’ ಪ್ರಸಂಗದ ಬೇಚನ ಪಾತ್ರ ಚಿತ್ರಣ ಇವತ್ತಿಗೂ ಸ್ಮರಣೀಯ. ಬಪ್ಪನಾಡು ಮೇಳದಲ್ಲಿ ರಾಮದಾಸ ಸಾಮಗರ ಕೈಲಾಸ ಶಾಸ್ತ್ರಿ ಪಾತ್ರಕ್ಕೆ ಮಾಣಿಯಾಗಿ ಜನಪ್ರಿಯರಾಗಿದ್ದ ಇವರು ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ತೆಂಕುತಿಟ್ಟಿನ ಪ್ರಾತಿನಿಧಿಕ ಹಾಸ್ಯಗಾರ. ಉಭಯ ತಿಟ್ಟುಗಳಲ್ಲಿ ಮನ್ನಣೆ ಪಡೆದ ಇವರು ‘ರಾಜಾಹಾಸ್ಯ’ ಎನ್ನುವ ನೆಗಳ್ತೆಗೆ ಪಾತ್ರವಾಗಿದ್ದಾರೆ. ಇವರ ಸಾಧನೆಗೆ ಹಲವಾರು ಪ್ರಶಸ್ತಿಗಳು ಸಂದಿವೆ. ನಾ. ಕಾರಂತ ಪೆರಾಜೆಯವರು ನಿರೂಪಿಸಿದ ಪೆರುವಡಿ ನಾರಾಯಣ ಭಟ್ಟರ ಆತ್ಮಕಥನವನ್ನು ಪ್ರಕಟಪಡಿಸಲಾಗಿದೆ.

    ಪೆರುವಡಿ ನಾರಾಯಣ ಭಟ್ಟರು ಉಡುಪಿ ಯಕ್ಷಗಾನ ಕಲಾರಂಗದ ಆಹ್ವಾನದ ಮೇರೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ‘ಯಕ್ಷಗಾನ ಕಲಾರಂಗ’ ಪ್ರಶಸ್ತಿಗೆ ಭಾಜನರಾಗಿದ್ದರು. ಎರಡು ವರ್ಷಗಳ ಹಿಂದೆ ಮಾಸಪೂರ್ತಿ ಆಯೋಜನೆಗೊಂಡ ‘ಕೋಳ್ಯೂರು ವೈಭವ’ ಸಮಾರೋಪದ ಉದ್ಘಾಟಕರಾಗಿ ಭಾಗವಹಿಸಿ ಅರ್ಥಪೂರ್ಣವಾಗಿ ಮಾತನಾಡಿದ್ದರು. ಪೆರುವಡಿ ನಾರಾಯಣ ಭಟ್ಟರ ನಿಧನದೊಂದಿಗೆ ಯಕ್ಷಗಾನದಲ್ಲಿ ‘ಹಾಸ್ಯರಸ’ದ ಘನತೆಯ ಅಭಿವ್ಯಕ್ತಿಯ ಮಾದರಿಯೊಂದು ಮರೆಗೆ ಸರಿದಂತಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸ್ವರ ಚಿನ್ನಾರಿಯಿಂದ ಯಶಸ್ವಿಯಾಗಿ ನಡೆದ ‘ಸ್ವರ ಸಂಚಾರ’ ಸಂಗೀತ ಶಿಬಿರ
    Next Article ನಾಟಕ ವಿಮರ್ಶೆ | ‘ಹ್ಯಾಂಗ್ ಆನ್’ – “ಈ ಸಮಯ ಕಳೆದುಹೋಗುತ್ತದೆ – This moment will also pass” 
    roovari

    Add Comment Cancel Reply


    Related Posts

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.