Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನಲ್ಲಿ ‘ರಜತ ರಂಗ’ 20ನೇ ಕಾರ್ಯಕ್ರಮ ಹಾಗೂ ಸಂಸ್ಮರಣೆ

    August 17, 2026

    ‘ಚಿಂತನ- ಮಂಥನ’ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ

    August 17, 2026

    ಎನ್. ಜಗದೀಶ ಕೊಪ್ಪ ಇವರು ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಆಯ್ಕೆ

    August 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಎನ್. ಜಗದೀಶ ಕೊಪ್ಪ ಇವರು ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಆಯ್ಕೆ
    Awards

    ಎನ್. ಜಗದೀಶ ಕೊಪ್ಪ ಇವರು ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಆಯ್ಕೆ

    August 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಭಾರತೀಯ ವಿದ್ಯಾಭವನ ಮತ್ತು ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಜಂಟಿಯಾಗಿ ನೀಡುವ 2026ನೇ ಸಾಲಿನ ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಲೇಖಕ ಎನ್. ಜಗದೀಶ ಕೊಪ್ಪ ಆಯ್ಕೆಯಾಗಿದ್ದಾರೆ.

    ಪ್ರಶಸ್ತಿಯು ರೂ.25,000/- ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ, ಗೌರವಾಧ್ಯಕ್ಷ ಅನಿಲ್ ಕೊಪ್ಪ ಗೋಕಾಕ್, ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್, ಟ್ರಸ್ಟ್ ಕಾರ್ಯದರ್ಶಿ ಅಭಿನವ ರವಿಕುಮಾರ ಇವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ. ದಿನಾಂಕ 28 ಆಗಸ್ಟ್ 2026ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರೇಸ್ ಕೋರ್ಸ್‌ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಜಗದೀಶ ಕೊಪ್ಪ ಅವರು ರೈತ ಕುಟುಂಬದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ಜಾಗತೀಕರಣ ಮತ್ತು ಗ್ರಾಮಭಾರತ’ ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. 1981ರಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಅವರು, ಮಾಧ್ಯಮ ಕ್ಷೇತ್ರದಲ್ಲಿ ಸೃಜನಶೀಲ ಆಲೋಚನೆಗಳ ಮೂಲಕ ಹೆಸರಾಗಿದ್ದಾರೆ. ಅನುವಾದ ಸೇರಿ ಸಂಗೀತ, ಸಾಹಿತ್ಯ, ಜನ ಚಳವಳಿಗಳು ಹೀಗೆ ವೈವಿಧ್ಯಮಯ ವಿಷಯಗಳಲ್ಲಿ 45 ಕೃತಿಗಳನ್ನು ರಚಿಸಿದ್ದು, ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಸಹಜ ರಂಗ 2026’ ರಂಗ ತರಬೇತಿ ಶಿಬಿರಕ್ಕೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 27
    Next Article ‘ಚಿಂತನ- ಮಂಥನ’ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ‘ರಜತ ರಂಗ’ 20ನೇ ಕಾರ್ಯಕ್ರಮ ಹಾಗೂ ಸಂಸ್ಮರಣೆ

    August 17, 2026

    ‘ಚಿಂತನ- ಮಂಥನ’ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ

    August 17, 2026

    ‘ಸಹಜ ರಂಗ 2026’ ರಂಗ ತರಬೇತಿ ಶಿಬಿರಕ್ಕೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 27

    August 17, 2026

    ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಸರಣಿ ಉದ್ಘಾಟನೆ

    August 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.