Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀಯಾಗಿ ಪ್ರದರ್ಶನಗೊಂಡ ರಂಗದಿಂದ ಮರೆಯಾದ ಪ್ರಸಂಗ ‘ವಿದ್ರೂಪ ವಿಜಯ’
    Yakshagana

    ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀಯಾಗಿ ಪ್ರದರ್ಶನಗೊಂಡ ರಂಗದಿಂದ ಮರೆಯಾದ ಪ್ರಸಂಗ ‘ವಿದ್ರೂಪ ವಿಜಯ’

    March 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ತೆಕ್ಕಟ್ಟೆ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಘ ಸಂಸ್ಥೆಗಳಿಗೆ ಧನ ಸಹಾಯ ಯೋಜನೆಯಡಿಯಲ್ಲಿ ಶ್ರೀ ಕೈಲಾಸ ಕಲಾಕ್ಷೇತ್ರ ತೆಕ್ಕಟ್ಟೆ ಪ್ರಸ್ತುತಿಯ ಯಕ್ಷಗಾನ ಎಮ್.ಜಿ. ಭಟ್ ಬರವಣಿ ವಿರಚಿತ ‘ವಿದ್ರೂಪ ವಿಜಯ’ ಪ್ರಸಂಗವು ದಿನಾಂಕ 24-03-2034ರಂದು ಪ್ರದರ್ಶನಗೊಂಡಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗುರು ಚಿತ್ರಪಾಡಿ ಕೃಷ್ಣಮೂರ್ತಿ ಉರಾಳ “ಯಕ್ಷ ಕವಿಗಳನೇಕರು ಹಗಲಿರುಳೂ ಯೋಚಿಸಿ ಪ್ರಸಂಗ ರಚನೆ ಮಾಡುವಲ್ಲಿ ಅತಿಯಾದ ಸಾಹಸವನ್ನೆಸಗುತ್ತಾರೆ. ಕೆಲವು ಕಾರಣಗಳಿಂದ ಒಳ್ಳೆಯ ಹಲವು ಪ್ರಸಂಗಗಳು ಪ್ರಸಿದ್ಧಿಗೆ ಬಾರದೇ ಉಳಿದಿರುತ್ತದೆ. ಒಂದಿಷ್ಟು ಕಾಲ ರಂಗದಿಂದ ಹೊರಗುಳಿದ ಪ್ರಸಂಗಗಳನ್ನು ಮತ್ತೆ ಓದದೇ ಆಡಿದ ಪ್ರಸಂಗವನ್ನೇ ಆಡುತ್ತ ಇರುವುದನ್ನು ಕಂಡಿದ್ದೇವೆ. ಆದರೆ ಇಂತಹ ಹಲವು ಸಂಘ ಸಂಸ್ಥೆಗಳು ಬಹು ಕ್ಲಿಷ್ಠವಾದ ನಡೆಯ ಪ್ರಸಂಗವನ್ನೋ ಅಥವಾ ರಂಗದಿಂದ ಮರೆಯಾದ ಪ್ರಸಂಗಗಳನ್ನೋ ಮತ್ತೆ ಕೈಗೆತ್ತಿಕೊಂಡು ರಂಗದಲ್ಲಿ ಪ್ರದರ್ಶನ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ, ‘ವಿದ್ರೂಪ ವಿಜಯ’ ಯಶಸ್ಸು ಕಂಡಿದೆ” ಎಂದು ಹೇಳಿದರು.

    ಧಮನಿ ಹಾಗೂ ದಿಮ್ಸಾಲ್ ಸಂಸ್ಥೆಗಳ ಸಹಕಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಖ್ಯಾತ ಚಂಡೆ ವಾದಕ ಶಿವಾನಂದ ಕೋಟ, ಮೋಹನಚಂದ್ರ ಪಂಜಿಗಾರು, ಮಲ್ಯಾಡಿ ಸೀತಾರಾಮ ಶೆಟ್ಟಿ, ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಆಶ್ರಯದಲ್ಲಿ ನಡೆಯುತ್ತಿರುವ ‘ಸಿನ್ಸ್ 1999 ಶ್ವೇತಯಾನ’ದ 10ನೇ ಸರಣಿ ಕಾರ್ಯಕ್ರಮದಲ್ಲಿ ಈ ಯಕ್ಷಗಾನ ಪ್ರಸಂಗವು ಪ್ರದರ್ಶನಗೊಂಡಿತು. ಹೆರಿಯ ಮಾಸ್ಟರ್ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಬಾವುಟಗುಡ್ಡೆಯಲ್ಲಿ ಚಿತ್ರಕಲಾ ಮತ್ತು ರಸಪ್ರಶ್ನೆ ಸ್ಪರ್ಧೆ | ಏಪ್ರಿಲ್ 5
    Next Article ರಾಷ್ಟ್ರಕವಿ ಗೋವಿಂದ ಪೈ ಸಂಸ್ಮರಣೆ ಹಾಗೂ ಕನಕ ಚಿಂತನ ವಿಸ್ತರಣೆ ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ಕೊಂಚಾಡಿಯಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.