Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಅನಘಶ್ರೀ ಇವರ ನೃತ್ಯ ಪ್ರದರ್ಶನ | ನವೆಂಬರ್ 18
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಅನಘಶ್ರೀ ಇವರ ನೃತ್ಯ ಪ್ರದರ್ಶನ | ನವೆಂಬರ್ 18

    November 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 18-11-2024ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಶ್ರೀಮತಿ ಸುಧಾ ಆಡುಕಳ ಇವರು ರಚಿಸಿರುವ ಡಾ. ಶ್ರೀಪಾದ ಭಟ್ ನಿರ್ದೇಶನ ಹಾಗೂ ವಿದುಷಿ ಮಾನಸಿ ಸುಧೀರ್ ನೃತ್ಯಸಾಂಗತ್ಯದಲ್ಲಿ ವಿದುಷಿ ಅನಘಶ್ರೀ ಇವರು ‘ನೃತ್ಯಗಾಥ’ ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ಡಾ. ವೀರಕುಮಾರ್ ಹಾಗೂ ಡಾ. ಉಷಾ ಪಾರ್ವತಿ ದಂಪತಿಗಳ ಪುತ್ರಿಯಾದ ವಿದುಷಿ ಅನಘಶ್ರೀ ನೃತ್ಯನಿಕೇತನ ಕೊಡವೂರು ಸಂಸ್ಥೆಯ ನಿರ್ದೇಶಕರಾದ ವಿದ್ವಾನ್ ಸುಧೀರ್ ರಾವ್ ಕೊಡವೂರು ಮತ್ತು ವಿದುಷಿ ಶ್ರೀಮತಿ ಮಾನಸಿ ಸುಧೀರ್ ಇವರ ಶಿಷ್ಯೆಯಾಗಿ ಕಳೆದ 18 ವರುಷಗಳಿಂದ ಭರತನಾಟ್ಯ ಅಭ್ಯಾಸಿಸುತ್ತಿದ್ದಾಳೆ. ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಉಡುಪಿಯ ಮಾರ್ಪಳ್ಳಿಯ ಯಕ್ಷಗಾನ ಮಂಡಳಿಯಲ್ಲಿ ಯಕ್ಷಗಾನವನ್ನು ಅಭ್ಯಸಿಸುತ್ತಾ ಒಳ್ಳೆಯ ಯಕ್ಷಗಾನ ವೇಷಧಾರಿಯೂ ಆಗಿದ್ದಾಳೆ. ದೂರದರ್ಶನದ ಬಿ ಗ್ರೇಡ್ ಕಲಾವಿದೆಯಾಗಿರುವ ಈಕೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ನೀಡುವ ಶಿಷ್ಯವೇತನವನ್ನೂ ಪಡೆದಿದ್ದಾಳೆ. ನೃತ್ಯನಿಕೇತನ ಕೊಡವೂರು ಸಂಸ್ಥೆಯ ನೃತ್ಯಗಾಥಾ, ಚಿತ್ರಾ, ನಾರಸಿಂಹ, ನಂದಗೋಕುಲ, ಶಬರಿ, ಶ್ರೀನಿವಾಸಕಲ್ಯಾಣ ಮುಂತಾದ ನೃತ್ಯರೂಪಕ ಮತ್ತು ನೃತ್ಯ ನಾಟಕಗಳಲ್ಲಿ ಭಾಗವಹಿಸಿದ್ದು, ಪುಷ್ಪರಾಣಿ, ಮಹಿಳಾಭಾರತ, ಚೋಮನದುಡಿ, ಗಂಗಿಪರಸಂಗ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ್ದಾಳೆ. ಬೇರೆಬೇರೆ ಸಂಸ್ಥೆಗಳು ನೀಡಿದ ನೃತ್ಯಕಲಾ ಶಿರೋಮಣಿ, ಅಭಿನಯ ಶಾರದೆ ಮುಂತಾದ ಬಿರುದುಗಳಿಂದ ಪುರಸ್ಕೃತಳಾಗಿದ್ದಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಪಾರೆಕಟ್ಟೆ ಕನ್ನಡ ಗ್ರಾಮದಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ
    Next Article ‘ನೃತ್ಯಾಮೃತ’ ಸರಣಿ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ | ನವಂಬರ್ 18
    roovari

    Add Comment Cancel Reply


    Related Posts

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಸುಗಮ ಸಂಗೀತ’ ಕಾರ್ಯಕ್ರಮ | ಮೇ 25        

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.