Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ಯುವ ಪ್ರಶಸ್ತಿಗೆ ವಿದುಷಿ ಕಾವ್ಯಶ್ರೀ ಆಯ್ಕೆ
    Awards

    ರಾಜ್ಯಮಟ್ಟದ ಯುವ ಪ್ರಶಸ್ತಿಗೆ ವಿದುಷಿ ಕಾವ್ಯಶ್ರೀ ಆಯ್ಕೆ

    January 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ 2024-25ನೇ ಸಾಲಿನ ರಾಜ್ಯಮಟ್ಟದ ಯುವ ಪ್ರಶಸ್ತಿಗೆ ವಿರಾಜಪೇಟೆ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಭರತನಾಟ್ಯ ಹಾಗೂ ಪಾಶ್ಚಾತ್ಯ ನೃತ್ಯ ತರಬೇತುದಾರರಾದ ವಿದುಷಿ ಕಾವ್ಯಶ್ರೀ ಆಯ್ಕೆಯಾಗಿದ್ದಾರೆ. 15ರಿಂದ 30 ವರ್ಷದೊಳಗಿನ ವಿವಿಧ ಕ್ಷೇತ್ರದ ಸಾಧನೆಗೆ ಈ ಪ್ರಶಸ್ತಿ ನೀಡಲಾಗಿದೆ.

    ಕಾವ್ಯಶ್ರೀ ವಿರಾಜಪೇಟೆ ತಾಲೂಕಿನ ಬಿಳುಗುಂದ ಗ್ರಾಮದ ಎಂ.ಪಿ. ಕಾಂತರಾಜ್ ಹಾಗೂ ಎಂ.ಎನ್. ಹೇಮಾವತಿ ದಂಪತಿಯ ಸುಪುತ್ರಿ. ಅಮ್ಮತ್ತಿಯ ಗುಡ್ ಶೇಫರ್ಡ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದ ಕಾವ್ಯಶ್ರೀ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನಲ್ಲಿ ಪದವಿ ಮುಗಿಸಿ ಪ್ರಸ್ತುತ ಮೈಸೂರಿನ ಮುಕ್ತ ಗಂಗೋತ್ರಿ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ಅರಮೇರಿಯ ಎಸ್.ಎಂ.ಎಸ್. ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭರತನಾಟ್ಯದಲ್ಲಿ ಅಂತರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ಕಾವ್ಯಶ್ರೀ, ಕರ್ನಾಟಕ ಸರ್ಕಾರ, ಜಿಲ್ಲಾ ವೈಯಕ್ತಿಕ ಯುವ ಪ್ರಶಸ್ತಿ ವಿಜೇತರಾಗಿದ್ದು, ಮೈಸೂರಿನ ಗಂಗೂಬಾಯಿ ಹಾನಗಲ್ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರೀಕ್ಷಕರಾಗಿ ನೇಮಕಗೊಂಡಿದ್ದಾರೆ.

    2020ನೇ ಸಾಲಿನ ಮಿಸ್ ಕೊಡಗು ವಿಜೇತೆಯಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಯುವ ಉತ್ಸವ, ಯುವಜನೋತ್ಸವ, ಯುವ ಜನ ಮೇಳ ಸ್ಪರ್ಧೆಗಳ ವಿಜೇತೆ, ಅಂತಾರಾಷ್ಟ್ರೀಯ ನೃತ್ಯ ಮಂಜರಿ ಪ್ರಶಸ್ತಿ, ಹಂಪಿಯ ನಾಟ್ಯಾ ಚೂಡಮಣಿ, ಕಲ್ಪಶ್ರೀ ಕಲಾ ಪ್ರತಿಷ್ಠಾನದ ನಾಟ್ಯಾ ವಿನೋದಿನಿ ಪ್ರಶಸ್ತಿ, ಸ್ವಸ್ತ ಸಮೃದ್ದ ಭಾರತ – ರಾಜ್ಯಮಟ್ಟದ ನೃತ್ಯ ಸ್ಪರ್ಧೆ ವಿಜೇತೆ, ಕಲಾಕ್ಷೇತ್ರ – ನೃತ್ಯ ಸಾಧನ ಗೌರವ ಪ್ರಶಸ್ತಿ, ಶತಾಕ್ಷಿ ಯುವ ರತ್ನ ಪ್ರಶಸ್ತಿ, ನೃತ್ಯ ಕಿಂಕಿಣಿ ಸಂಸ್ಥೆಯ ವತಿಯಿಂದ ನೃತ್ಯ ಕಲಾಮಣಿ ಪ್ರಶಸ್ತಿ, ರಾಜ್ಯಮಟ್ಟದ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸುಮಾರು 250ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿದ್ದು, ಈ ಸಾಧನೆಗಳನ್ನು ಗುರುತಿಸಿ ಈ ಬಾರಿ ಇವರಿಗೆ ಪ್ರಶಸ್ತಿ ನೀಡಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ಕೊಡಗಿನ ಗೌರಮ್ಮ ದತ್ತಿ ಕಾರ್ಯಕ್ರಮದ ಅಂಗವಾಗಿ ಸಣ್ಣ ಕಥೆ ಬರೆಯುವ ಸ್ಪರ್ಧೆ |
    Next Article ಸಾಹಿತ್ಯಾಸಕ್ತರಿಗೆ ವಿವಿಧ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 31
    roovari

    Add Comment Cancel Reply


    Related Posts

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.