Subscribe to Updates

    Get the latest creative news from FooBar about art, design and business.

    What's Hot

    ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರೊಂದಿಗೆ ಮಾತುಕತೆ | ಜುಲೈ 05

    July 4, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಫ.ಗು.ಹಳಕಟ್ಟಿಯವರ 145ನೆಯ ಜನ್ಮದಿನೋತ್ಸವ ಆಚರಣೆ

    July 3, 2025

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕಾರ್ಯಕ್ರಮ

    July 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಾಂಗಣ ತಾಳಮದ್ದಳೆ ಸಪ್ತಾಹ – ವಿದ್ವಾನ್ ಕೆ. ಕಾಂತ ರೈ ನೆನಪು
    Yakshagana

    ಯಕ್ಷಾಂಗಣ ತಾಳಮದ್ದಳೆ ಸಪ್ತಾಹ – ವಿದ್ವಾನ್ ಕೆ. ಕಾಂತ ರೈ ನೆನಪು

    November 29, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಪುತ್ತೂರಿನ ಕರ್ನಾಟಕ ಯಕ್ಷ ಭಾರತಿ (ರಿ.) ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಹನ್ನೊಂದನೇ ವರ್ಷದ ನುಡಿ ಹಬ್ಬದ ಪ್ರಯುಕ್ತ ದಿನಾಂಕ 24-11-2023ರಂದು ಏರ್ಪಡಿಸಿದ್ದ ವಿದ್ವಾನ್ ಕೆ. ಕಾಂತ ರೈ ಮೂಡಬಿದ್ರೆ ಅವರ ಸ್ಮರಣಾರ್ಥ ಕಾರ್ಯಕ್ರಮ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಂಸ್ಮರಣ ಜ್ಯೋತಿ ಬೆಳಗಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ “ಜೀವನದ ಜಂಜಾಟದ ನಡುವೆ ನಮಗೆ ನೆಮ್ಮದಿ ನೀಡುವ ಶಕ್ತಿ ಇರುವುದು ಕಲೆಗೆ ಮಾತ್ರ. ಯಕ್ಷಗಾನ, ನಾಟಕ, ನೃತ್ಯ – ಸಂಗೀತಗಳ ಮೂಲಕ ಮನಸ್ಸು – ಬುದ್ಧಿಗಳು ಜಾಗೃತಗೊಳ್ಳುತ್ತವೆ. ಅದಕ್ಕೆ ಕಾರಣರಾದ ಕಲಾವಿದರನ್ನು ನಾವು ಮರೆಯಬಾರದು. ಕಲೆಗಾಗಿ ಬದುಕಿದವರು ಸದಾ ಸ್ಮರಣೀಯರು. ಯಕ್ಷಾಂಗಣವು ಸಪ್ತಾಹದ ಎಲ್ಲಾ ದಿನಗಳಲ್ಲೂ ಒಬ್ಬೊಬ್ಬ ಕಲಾ ಸಾಧಕರನ್ನು ನೆನಪಿಸುತ್ತಿರುವುದು ನಿಜವಾದ ಕಲಾರಾಧನೆಯಾಗಿದೆ” ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ವಿದ್ವಾನ್ ಕಾಂತ ರೈಯವರ ಬದುಕು ಮತ್ತು ಸಾಧನೆಗಳನ್ನು ಸ್ಮರಿಸುತ್ತಾ “ಅವಿಭಜಿತ ಜಿಲ್ಲೆಯ ಯಕ್ಷಗಾನ, ಸಾಹಿತ್ಯ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧಕರಲ್ಲಿ ಕಾಂತ ರೈ ಅಗ್ರಗಣ್ಯರು” ಎಂದರು.

    ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಲ| ಎ. ಸುರೇಶ್ ರೈ ಅವರಿಗೆ ಕರ್ನಾಟಕ ಸರಕಾರದಿಂದ ಈ ಬಾರಿ ಲಭಿಸಿದ ಸಹಕಾರ ರತ್ನ ಪ್ರಶಸ್ತಿಗಾಗಿ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲ| ದೇವದಾಸ ಭಂಡಾರಿ, ನಗರದ ಬ್ರಿಲಿಯಂಟ್ ಕಾಲೇಜು ಸಂಚಾಲಕ ಸಿ.ಎ. ರಾಮಮೋಹನ ರೈ, ಉದ್ಯಮಿ ಶ್ರೀನಾಥ ಕೊಂಡೆ, ಹವ್ಯಾಸಿ ಯಕ್ಷಗಾನ ಕಲಾವಿದ ಕೆ‌.ಜಯರಾಮ ಸಾಂತ ಅತಿಥಿಗಳಾಗಿದ್ದರು.

    ಯಕ್ಷಾಂಗಣದ ಉಪಾಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಮಹಿಳಾ ಪ್ರತಿನಿಧಿ ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಉಪಾಧ್ಯಕ್ಷರಾದ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಪದಾಧಿಕಾರಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ಸುಧಾಕರ ರಾವ್ ಪೇಜಾವರ್, ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ ಆಚಾರ್ಯ ಗೇರುಕಟ್ಟೆ, ಸಿದ್ದಾರ್ಥ ಆಜ್ರಿ, ಶರತ್ ಕುಮಾರ್ ಕದ್ರಿ, ಸುಮಾಪ್ರಸಾದ್ ಉಪಸ್ಥಿತರಿದ್ದರು. ‘ಶ್ರೀಹರಿ ಚರಿತ್ರೆ’ ಏಕಾದಶ ಸರಣಿಯಲ್ಲಿ 6ನೇ ದಿನ ‘ಚಂದ್ರಹಾಸ ಚರಿತ್ರೆ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ ಜರಗಿತು. ಭಾಗವತ ಪುತ್ತಿಗೆ ರಘುರಾಮ ಹೊಳ್ಳ ಹಾಗೂ ಹಿರಿಯ ಕಲಾವಿದರು ಹಿಮ್ಮೇಳ – ಮುಮ್ಮೇಳಗಳಲ್ಲಿ ಪಾಲ್ಗೊಂಡರು.

    Share. Facebook Twitter Pinterest LinkedIn Tumblr WhatsApp Email
    Previous Articleವ್ಯಾಸರಾಯ ಬಲ್ಲಾಳ ಶತಮಾನೋತ್ಸವ ಸಂಭ್ರಮ ಮತ್ತು ಪ್ರಶಸ್ತಿ ಪ್ರದಾನ | ದಶಂಬರ 1
    Next Article ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಕೀರಿಕ್ಕಾಡು’ ಪ್ರಶಸ್ತಿ  
    roovari

    Add Comment Cancel Reply


    Related Posts

    ಕುಳಾಯಿ ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 3, 2025

    ಉಡುಪಿಯಲ್ಲಿ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ | ಜುಲೈ 04

    July 2, 2025

    ಕಾಸರಗೋಡಿನ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ‘ಯಕ್ಷಗಾನ ನಾಟ್ಯ ತರಬೇತಿ’ | ಜುಲೈ 05

    July 2, 2025

    ಅರ್ಕುಳ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ

    July 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.