Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಎಂ. ರೋಹಿಣಿಯವರಿಗೆ ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’
    Awards

    ಬಿ.ಎಂ. ರೋಹಿಣಿಯವರಿಗೆ ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’

    May 25, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು: ಮಂಗಳೂರಿನ ‘ಆಕೃತಿ ಆಶಯ’ ಪ್ರಕಾಶನ 2022ರಲ್ಲಿ ಪ್ರಕಟಿಸಿದ ಲೇಖಕಿ ಬಿ.ಎಂ.ರೋಹಿಣಿ ಅವರ ‘ವೇಶ್ಯಾವಾಟಿಕೆಯ ಕಥೆ-ವ್ಯಥೆ’ ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸ್ಥಾಪಿಸಿರುವ ಈ ಪ್ರಶಸ್ತಿಗೆ 2019 – 2022 ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ ‘ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು’ ಆಹ್ವಾನಿಸಲಾಗಿದ್ದು, 46 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು.

    ಎಲ್ಲ ಕೃತಿಗಳನ್ನು ಅವಲೋಕಿಸಿದ ಡಾ. ಎಂ.ಉಷಾ, ಡಾ.ಸೆಲ್ವಕುಮಾರಿ ಮತ್ತು ಡಾ.ಆರ್.ಸುನಂದಮ್ಮ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಸಂಶೋಧನೆಯ ವಸ್ತು, ವ್ಯಾಪ್ತಿ, ವಿಷಯ ಮತ್ತು ಒಳನೋಟಗಳನ್ನು ಪರಿಗಣಿಸಿ ರೋಹಿಣಿಯವರ ಕೃತಿಯನ್ನು ಆಯ್ಕೆ ಮಾಡಿದೆ. ಸಾಹಿತ್ಯ ಪ್ರಶಸ್ತಿಯು 25,000 ರೂ. ನಗದು ಬಹುಮಾನ, ಫಲಕವನ್ನು ಒಳಗೊಂಡಿದ್ದು, ಜೂನ್ 1ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

    ರೋಹಿಣಿ ಪರಿಚಯ
    ಹೊಸ ವಿಚಾರ, ಆಲೋಚನೆಗಳಿಗೆ ಸದಾ ತೆರೆದುಕೊಳ್ಳುವ ಸರಳ ಸ್ವಭಾವದ ಬಿ.ಎಂ.ರೋಹಿಣಿ ಮಂಗಳೂರು ತಾಲೂಕು ಬಂಟ್ವಾಳ ಹತ್ತಿರದ ತುಂಬೆಯ ಕಾಣೆಮಾರಿನಲ್ಲಿ ತಾಯಿ ದೇವಕಿ ಮತ್ತು ತಂದೆ ಕೊಗ್ಗಪ್ಪರ ಸುಪುತ್ರಿಯಾಗಿ 1944 ಏಪ್ರಿಲ್ 6ರಂದು ಜನಿಸಿದರು.

    ಕಪ್ಪು ಬಣ್ಣದ ಹುಡುಗಿಗೆ ಶಾಲೆ ಕಲಿವ ಆಸೆ. ಬಡತನ ಇವರಿಗೆ 6ನೇ ತರಗತಿಯಿಂದಲೇ ಬೀಡಿ ಕಟ್ಟಲು ಕಲಿಸಿತು. ತಂದೆಯಿಂದ ಸಾಹಿತ್ಯ-ಸಂಗೀತದ ಆಸಕ್ತಿ ಬಳುವಳಿಯಾಗಿ ಬಂದಿತ್ತಾದರೂ ವಿದ್ಯೆಗೆ ಬೆಂಗಾವಲಾಗಿದ್ದುದು ತಾಯಿ. ಬಾಲ್ಯದಿಂದಲೇ ಬರೆವಣಿಗೆ ಕೈ ಹಿಡಿದಿತ್ತು. ಆದರೆ ಇತರರಿಗೆ ತೋರಿಸುವ ಧೈರ್ಯವಿರಲಿಲ್ಲ. ಬಡತನ, ಅವಮಾನಗಳು, ಮೈಬಣ್ಣ ಇವರನ್ನು ಕೀಳರಿಮೆಯ ಕೂಪಕ್ಕೆ ನೂಕಿತ್ತು. ಇವೆಲ್ಲದರ ಮಧ್ಯೆ ಬದುಕನ್ನು ಹಿಡಿದಿಟ್ಟು ನಡೆಸುವ ಛಲಕ್ಕೆ ಕೊರತೆ ಇರಲಿಲ್ಲ. ಓದು ಮುಗಿಸಿ ಶಾಲಾ ಶಿಕ್ಷಕಿಯಾದರು. ಏಳು ಬೀಳುಗಳೊಂದಿಗೆ ಜೀವನ ಅನುಭವಿಸುತ್ತಾ, ಓದು-ಬರಹ ರೂಢಿಸಿಕೊಂಡರು. ಅನುಭವಗಳ ಆಧಾರದ ಮೇಲೆ ನೇರವಾಗಿ, ಸರಳವಾಗಿ ಬರೆದರು. ಅವರಿಗೆ ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಅಸಾಧ್ಯವಾದ ಆದರ್ಶಗಳನ್ನು ಅವರು ಬರೆದಿಲ್ಲ. ಇದುವೇ ಪರಮ ಸತ್ಯ ಎನ್ನುವುದಕ್ಕಿಂತ, ಬೇರೆಬೇರೆ ಆಲೋಚನೆಗಳಿಗೆ ತೆರೆದುಕೊಳ್ಳುವ ಪ್ರಯತ್ನ ಮಾಡಿದ್ದು ಅವರ ಬರೆವಣಿಗೆಯಲ್ಲಿ ಎದ್ದುಕಾಣುತ್ತದೆ. ಶಿಕ್ಷಕಿಯಾಗಿ ಅವರ ಸಾಧನೆ ಅಪಾರ.

    ಪ್ರಕಟಿತ ಕೃತಿಗಳು
    ಕರ್ತವ್ಯ , ಗರಿಕೆಯ ಕುಡಿಗಳು, ಒಂದು ಹಿಡಿ ಮಣ್ಣು ಇವರ ಕಥಾ ಸಂಕಲನಗಳು. ಸ್ತ್ರೀ-ಸಂವೇದನೆ, ಸ್ತ್ರೀ ಶಿಕ್ಷಣ ಸಂಸ್ಕೃತಿ ,ಸ್ತ್ರೀ ಭಿನ್ನ ಮುಖಗಳು , ಸಾಮಾಜಿಕ ತಲ್ಲಣಗಳು, ಆರಾಧನಾ ರಂಗದಲ್ಲಿ ಸ್ತ್ರೀ , ಪ್ರತಿಸ್ಪಂದನ ಮತ್ತು ಸಮೀಕ್ಷೆ ಅವರ ಲೇಖನ/ವಿಮರ್ಶಾ ಕೃತಿಗಳು.

    ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆ ವಿಶಿಷ್ಟ. ಅವಿವಾಹಿತ ಮಹಿಳೆ- ಸಮಾಜೋ ಸಾಂಸ್ಕೃತಿಕ ಅಧ್ಯಯನ, ತುಳುನಾಡಿನ ಮಾಸ್ತಿಕಲ್ಲುಗಳು-ವೀರಗಲ್ಲುಗಳು, ದಕ್ಷಿಣಕನ್ನಡ ಜಿಲ್ಲೆಯ ಮಹಿಳಾ ಹೋರಾಟದ ದಾಖಲೀಕರಣ, ದಕ್ಷಿಣಕನ್ನಡ ಜಿಲ್ಲೆಯ ಬಿಲ್ಲವರ ಗುತ್ತು ಮನೆಗಳ ಅಧ್ಯಯನ ಇವು ಇತರರೊಂದಿಗೆ ಸೇರಿ ನಡೆಸಿದ ಸಂಶೋಧನಾ ಅಧ್ಯಯನಗಳು. ವೇಶ್ಯಾವಾಟಿಕೆಯ ಕಥೆ-ವ್ಯಥೆ (2022) ಅವರದೇ ಸಂಶೋಧನಾ ಕೃತಿ. ‘ಅಧ್ಯಾಪಕಿಯ ಅಧ್ವಾನಗಳು ‘ಅನುಭವ ಕಥನ. ‘ನಾಗಂದಿಗೆಯೊಳಗಿನಿಂದ’ ಜೀವನ ಕಥನ.

    ಬರೆವಣಿಗೆ, ಓದಿಗಷ್ಟೆ ಸೀಮಿತವಾಗದೆ ವಿಭಿನ್ನ ಸಾಮಾಜಿಕ ಚಟುವಟಿಕೆಗಳ ಒಡನಾಟವನ್ನು ಸದಾ ಇಟ್ಟುಕೊಂಡವರು. ಕರಾವಳಿ ಲೇಖಕಿಯರ-ವಾಚಕಿಯರ ಸಂಘ, ಡೀಡ್ಸ್, ವೆಲೊರೆಡ್, ಸಂಚಲನ, ಶಿಕ್ಷಕ-ಸಂಗತಿ ಮುಂತಾದ ಹಲವು ಸಂಘಸಂಸ್ಥೆಗಳ ಜೊತೆ ಸಕ್ರಿಯವಾಗಿದ್ದಾರೆ. ಹೊರನೋಟಕ್ಕೆ ಅತ್ಯಂತ ಸರಳವಾಗಿ, ನಮ್ರವಾಗಿ ಕಾಣುವ ಅವರ ಬದುಕಿನ ತುಂಬ ದಿಟ್ಟ ನಿರ್ಧಾರಗಳೇ ತುಂಬಿವೆ.

    ಎಪ್ಪತ್ತೊಂಬತ್ತರ ಹರೆಯದಲ್ಲೂ ಓದು, ಸಂಶೋಧನೆ, ಸಂಘಟನೆ, ಸಮಾಲೋಚನೆಗಳಲ್ಲಿ ಕ್ರಿಯಾಶೀಲರಾಗಿರುವ ರೋಹಿಣಿಯವರನ್ನು ಹಲವು‌ ಸಂಘ ಸಂಸ್ಥೆಗಳು‌ ಗೌರವಿಸಿವೆ. ಸಮತಾ ಅಧ್ಯಯನ ‌ಕೇಂದ್ರವು ವಿಜಯಾ ದಬ್ಬೆ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಯನ್ನು ಮೊದಲನೆಯ ವರ್ಷವೇ ಈ ಹಿರಿಯಕ್ಕನಿಗೆ ನೀಡಲು ಹೆಮ್ಮೆ ಪಡುತ್ತದೆ ಎಂದೂ ಡಾ.ಸಬಿಹಾ ಭೂಮಿಗೌಡ ಹೇಳಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಭಾರತೀಯ ವಿದ್ಯಾಭವನದ ಪತ್ರಿಕೋದ್ಯಮ ಡಿಪ್ಲೊಮೋಕ್ಕೆ ಅರ್ಜಿ ಆಹ್ವಾನ
    Next Article 2022 ಹಾಗೂ 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.