Subscribe to Updates

    Get the latest creative news from FooBar about art, design and business.

    What's Hot

    ಪುರಭವನದಲ್ಲಿ ಕಮಲಾಂಜಲಿ 2025 ಕೀರ್ತಿ ಶೇಷ ಕಮಲ ಭಟ್ ಸಂಸ್ಕರಣೆ – ಅಭಿನಂದನಾ ಕಾರ್ಯಕ್ರಮ.

    August 18, 2025

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಮೈಸೂರಿನಲ್ಲಿ ಉದ್ಘಾಟನೆಗೊಂಡ ‘ನಿರಂತರ ಸಹಜ ರಂಗ – 2025’ ಶಿಬಿರ

    August 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರು ಸ್ವರ ಗಾಂಧಾರ ಸಂಗೀತ ವಿದ್ಯಾಲಯದಿಂದ ವಿಂಶತಿ ಗಾನ ಸಂಭ್ರಮ ಹಾಗೂ ಗುರುವಂದನೆ | ಅಕ್ಟೋಬರ್ 2ರಂದು 
    Music

    ಬೆಂಗಳೂರು ಸ್ವರ ಗಾಂಧಾರ ಸಂಗೀತ ವಿದ್ಯಾಲಯದಿಂದ ವಿಂಶತಿ ಗಾನ ಸಂಭ್ರಮ ಹಾಗೂ ಗುರುವಂದನೆ | ಅಕ್ಟೋಬರ್ 2ರಂದು 

    September 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಹಿಂದೂಸ್ತಾನಿ ಸಂಗೀತದ ಅಧ್ಯಯನ ಮತ್ತು ಅಧ್ಯಾಪನದಲ್ಲಿ 20 ವರ್ಷಗಳಿಂದ ಕಾರ್ಯನಿರತವಾಗಿರುವ ಸ್ವರ ಗಾಂಧಾರ ಸಂಗೀತ ವಿದ್ಯಾಲಯ ಅರ್ಪಿಸುವ ವಿಂಶತಿ ಗಾನ ಸಂಭ್ರಮ ಹಾಗೂ ಗುರುವಂದನಾ ಕಾರ್ಯಕ್ರಮವು ದಿನಾಂಕ 02-10-2023ರ ಸೋಮವಾರದಂದು ನಡೆಯಲಿದೆ.

    ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅಖಿಲ ಹವ್ಯಕ ಮಹಾಸಭಾದಲ್ಲಿ ಸಂಜೆ ಘಂಟೆ 5.00 ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮಾನ್ಯ ಉಪಕುಲಪತಿಗಳಾದ ಡಾ.ಅಹಲ್ಯಾ ಶರ್ಮಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ.ಮಲ್ಲೇಪುರಂ ಜಿ.ವೆಂಕಟೇಶ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

    ಬೆಳಗ್ಗೆ ಘಂಟೆ  9.00ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯ ನಂತರ ವಿದ್ಯಾಲಯದ ವಿದ್ಯಾರ್ಥಿಗಳಿಂದ ಗಾಯನ ಪ್ರಸ್ತುತಿ ನಡೆಯಲಿದ್ದು, ತಬಲಾದಲ್ಲಿ ಶ್ರೀ ಪ್ರಕಾಶ ದೇಶಪಾಂಡೆ, ಶ್ರೀ ನಾಗರಾಜ ಹೆಗಡೆ, ಶ್ರೀ ಮಂಜುನಾಥ ಭಟ್ ಹಾಗೂ ಹಾರ್ಮೋನಿಯಂನಲ್ಲಿ ಶ್ರೀಮತಿ ಪ್ರತಿಭಾ ಹೆಗಡೆ ಸಹಕರಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಸಂಜೆ ಘಂಟೆ 6.00ರಿಂದ ನಡೆಯಲಿರುವ ‘ಗಾನ ಸಂಭ್ರಮ’ದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾದ ವಿದುಷಿ ಶ್ರೀಮತಿ ಪೂರ್ಣಿಮಾ ಭಟ್ ಕುಲ್ಕರ್ಣಿ ಗಾಯನ ಪ್ರಸ್ತುತಪಡಿಸಲಿದ್ದು, ಇವರಿಗೆ ತಬಲಾದಲ್ಲಿ ಪಂಡಿತ್ ಗುರುಮೂರ್ತಿ ವೈದ್ಯ ಹಾಗೂ ಹಾರ್ಮೋನಿಯಂನಲ್ಲಿ ಶ್ರೀಯುತ ಸೂರ್ಯಉಪಾಧ್ಯಾಯ ಸಹಕರಿಸಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ಸ್ವರ ಗಾಂಧಾರ ಸಂಗೀತ ವಿದ್ಯಾಲಯದ ಅಧ್ಯಕ್ಷೆಯಾದ ಶ್ರೀಮತಿ ಪ್ರತಿಭಾ ಜಗದೀಶ್ ಹೆಗಡೆ ಹಾಗೂ ಸಂಸ್ಥೆಯ ಎಲ್ಲಾ ವಿಶ್ವಸ್ಥರು ಸರ್ವರಿಗೂ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಳ್ಳಾಲ ನೃತ್ಯಲಹರಿ ನಾಟ್ಯಾಲಯ ‘ದಶಾವರಣ -2023’
    Next Article ಬೆಂಗಳೂರಿನ ‘ತಿಂಮ ಸೇನೆ’ ತಂಡದಿಂದ ಸಂವಾದ ಕಾರ್ಯಕ್ರಮ
    roovari

    Add Comment Cancel Reply


    Related Posts

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಸಂಸ್ಕಾರ ಭಾರತೀ ವತಿಯಿಂದ ‘ನಟರಾಜ ಪೂಜನ್’ | ಆಗಸ್ಟ್ 19

    August 18, 2025

    ಕಲಾಂಗಣ್ ನಲ್ಲಿ ‘ಕೊಂಕಣಿ ಮಾನ್ಯತಾ ದಿನಾಚರಣೆ -2025’ | ಆಗಸ್ಟ್ 20

    August 18, 2025

    ಸಂಗೀತ ಕಛೇರಿ ವಿಮರ್ಶೆ | ಸಂಗೀತಾಸಕ್ತರ ಮನಗೆದ್ದ ಯುವ ಗಾಯಕರು

    August 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.