ಉಡುಪಿ : ರೇಡಿಯೊ ಮಣಿಪಾಲ್, ಸಮುದಾಯ ಬಾನುಲಿ ಕೇಂದ್ರ ಮಣಿಪಾಲ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ‘ವಿಷುಕಣಿ-ಕವಿದನಿ’ ಬಹುಭಾಷಾ ಕವಿಗೋಷ್ಠಿಯನ್ನು ದಿನಾಂಕ 10 ಏಪ್ರಿಲ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಮಣಿಪಾಲದ ಎಂ.ಐ.ಸಿ. ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕವಿಗೋಷ್ಠಿಯ ಉದ್ಘಾಟನೆಯನ್ನು ಮಾಹೆ ಮಣಿಪಾಲದ ನಿರ್ದೇಶಕರಾದ ಡಾ. ಶುಭ ಹೆಚ್.ಎಸ್. ಇವರು ಮಾಡಲಿದ್ದು, ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕವಿಗಳಾದ ಕವಿತಾ ಎಸ್. ಮಣಿಪಾಲ (ಹವ್ಯಕ ಕನ್ನಡ). ವೈಷ್ಣವಿ ಸುಧೀಂದ್ರ ರಾವ್ (ಕುಂದಾಪ್ರ ಕನ್ನಡ), ರಾಮಾಂಜಿ ಉಡುಪಿ (ಕನ್ನಡ), ಮಾಲತಿ ರಮೇಶ್ ಭಂಡಾರಿ ಕೆಮ್ಮಣ್ಣು (ತುಳು), ಕೆ. ವಾಣಿಶ್ರೀ ಅಶೋಕ್ ಐತಾಳ್ (ತೆಲುಗು), ಪ್ರಣತಿ ಪಿ. ಭಟ್ ಮಣಿಪಾಲ (ಹಿಂದಿ), ವಿನೋದ ಪಡುಬಿದ್ರಿ (ತುಳು), ವಿಜಯಲಕ್ಷ್ಮೀ ಆರ್. ಕಾಮತ್ (ಕೊಂಕಣಿ), ಮನೋಹರ ಶೆಟ್ಟಿ ಬಿದ್ಕಲ್ಕಟ್ಟೆ (ತುಳು), ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ (ಮಲಯಾಳಂ), ವಸುಧಾ ಅಡಿಗ ನೀಲಾವರ (ಕನ್ನಡ), ಲಲಿತ ಪ್ರದೀಪ್ ಭಟ್ (ಕನ್ನಡ), ಮಂಜುನಾಥ ಮರವಂತೆ (ಕುಂದಾಪ್ರ ಕನ್ನಡ), ವರುಣ್ ಎಂ. ಬಂಟಕಲ್ (ಇಂಗ್ಲೀಷ್), ಸುಲೋಚನ ಪಚ್ಚಿನಡ್ಕ (ತುಳು), ನೀಮಾ ಲೋಬೊ ಶಂಕರಪುರ (ಕೊಂಕಣಿ) ಭಾಗವಹಿಸಲಿದ್ದಾರೆ.