Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ
    Awards

    ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ

    January 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ಯನ್ನು ದಿನಾಂಕ 30-12-2023ರಂದು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.

    ಕಾರ್ಯಕ್ರಮದಲ್ಲಿ ಟ್ರಸ್ಟಿನ ಅಧ್ಯಕ್ಷ ರಮೇಶ್ ಸುರ್ವೆ, ಗೌರವಾಧ್ಯಕ್ಷ ರಮೇಶ್ ಎನ್. ಅಂಗಡಿ, ಬೆಳಗಾವಿ ಚಿಪ್ಪಲಕಟ್ಟಿ ಹಿರೇಮಠದ ಡಾ.ಕಲ್ಮೇಶ್ವರ ಸ್ವಾಮಿ, ಬೆಂಗಳೂರು ವನಕಲ್ಲು ಶ್ರೀ ಮಲ್ಲೇಶ್ವರ ಸುಕ್ಷೇತ್ರದ ಡಾ. ಬಸವರಮಾನಂದ ಮಹಾಸ್ವಾಮಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ನಟಿ ಮೀನಾ, ನಟ ಶಂಕರ ಭಟ್, ಸಾಹಿತಿ ಡಾ. ಮಹಂತೇಶ ಮಲ್ಲನಗೌಡರ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

    ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರಾಗಿ, ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಹಲವಾರು ಪ್ರತಿಷ್ಠಿತ ಸಂಘಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮೂಲಕ ಜಾನಪದ, ಯಕ್ಷಗಾನ ಕಲೆಯ ಉಳಿವು ಬೆಳವಣಿಗೆಗೆ ಕಲಾವಿದರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ನಡೆಸುತ್ತಿದ್ದಾರೆ.

    ಇವರ ‘ಕಲಾಸಂಚಯ-ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು’ ಕೃತಿಗೆ ಕರ್ನಾಟಕ ಜಾನಪದ ಅಕಾಡೆಮಿಯ 2020ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ. ಅಲ್ಲದೆ ಇದೇ ಕೃತಿಗೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ 2020ನೇ ಸಾಲಿನ ‘ಪುಸ್ತಕ ಸೊಗಸು’ ಗೌರವ ಪ್ರದಾನವಾಗಿದೆ. ಇವರು ಸಲ್ಲಿಸಿದ ಅನುಪಮ ಕೊಡುಗೆಗಾಗಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಸಂಘ ಸಂಸ್ಥೆಗಳಿಂದ ಹಲವಾರು ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರಿನ ವಾರ್ಷಿಕೋತ್ಸವ | ಜನವರಿ 7
    Next Article ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿಯಲ್ಲಿ ‘ಯಕ್ಷ ಸಪ್ತೋತ್ಸವ’ ಉದ್ಘಾಟನೆ
    roovari

    Add Comment Cancel Reply


    Related Posts

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.