Subscribe to Updates

    Get the latest creative news from FooBar about art, design and business.

    What's Hot

    ‘ಕೀರ್ತನಾರೋಹಣ’ ಕರ್ನಾಟಕ ಶಾಸ್ತ್ರೀಯ ಸಂಗೀತದ ಸರಣಿ ಕಾರ್ಯಕ್ರಮ

    May 18, 2026

    ಸುರತ್ಕಲ್ಲಿನ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ‘ಶ್ರೀ ಕೃಷ್ಣ ತುಲಾಭಾರ’ ಕಥಾಕೀರ್ತನ | ಮೇ 20

    May 18, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ದೃಶ್ಯ ನಾಟಕೋತ್ಸವ’ | ಮೇ 20

    May 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪದಲ್ಲಿ ‘ವಿಶ್ವಕಲಾ ಸಿಂಧು’ ಹಾಗೂ ‘ಭಾವನಾ ಪುರಸ್ಕಾರ’ ಪ್ರದಾನ
    Awards

    ಚಿಣ್ಣರ ಬೇಸಿಗೆ ಶಿಬಿರದ ಸಮಾರೋಪದಲ್ಲಿ ‘ವಿಶ್ವಕಲಾ ಸಿಂಧು’ ಹಾಗೂ ‘ಭಾವನಾ ಪುರಸ್ಕಾರ’ ಪ್ರದಾನ

    May 18, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸಿದ ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರವು ಹಾವಂಜೆಯ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 17 ಮೇ 2026ರಂದು ಸಮಾಪನಗೊಂಡಿತು.

    ಈ ಸಂದರ್ಭದಲ್ಲಿ ಶಿಲ್ಪಕಲಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ವಿಶ್ವಕಲಾ ಸಿಂಧು’ ಪುರಸ್ಕಾರವನ್ನು ಸ್ವೀಕರಿಸಿದ ಕಲಾವಿದ ವೆಂಕಟರಮಣ ಭಟ್ “ಮನೆಗೊಂದು ಒಲೆ, ಮನಕೊಂದು ಕಲೆ ಎಂಬಂತೆ ಚಿತ್ರಕಲೆ ಮಕ್ಕಳ ಮನಸ್ಸನ್ನು ಹದಗೊಳಿಸಲು ಬಹು ಮುಖ್ಯವಾದ ಕಲಾಪ್ರಕಾರವಾದುದು ಅಂತೆಯೇ ಚಿಣ್ಣರು ಸೃಜನಶೀಲರಾಗಿರ ಬೇಕಾದುದೂ ಮುಖ್ಯ. ಗ್ರಾಮೀಣ ಭಾಗದಲ್ಲಿ ಈ ತೆರನಾದ ಚಟುವಟಿಕೆಗಳು ಇಂದಿಗೆ ಅತ್ಯವಶ್ಯಕ” ಎಂಬುದಾಗಿ ನುಡಿದರು. ಇದೇ ಸಂದರ್ಭದಲ್ಲಿ ‘ಭಾವನಾ ಪುರಸ್ಕಾರ’ವನ್ನು ಪಾಕಶಾಸ್ತ್ರ ಪ್ರವೀಣರಾದ ವಿನೋದ್‌ರಾಜ್ ಭಟ್ ಸ್ವೀಕರಿಸಿದರು.

    ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕ್‌ ಉಡುಪಿ ವಿಭಾಗದ ಎ.ಜಿ.ಎಂ. ರಮೇಶ್ ವೈದ್ಯರವರು ವಿವಿಧ ಉದ್ದೇಶಗಳಿಗಾಗಿ ಫೌಂಡೇಶನ್‌ಗೆ ನೀಡಿದ ಪ್ರೊಜೆಕ್ಟರ್ ಉದ್ಘಾಟಿಸಿ, “ಮಕ್ಕಳ ಬೌದ್ಧಿಕ ಬೆಳವಣಿಗೆಯಲ್ಲಿ ಈ ರೀತಿಯ ಕಾರ್ಯಕ್ರಮಗಳು ಬಹು ಉಪಯುಕ್ತವಾದುದು, ನಾವು ಚಿಕ್ಕಂದಿನಲ್ಲಿ ರಜಾ ದಿನಗಳಲ್ಲಿ ಗುಂಪುಗೂಡಿ ಆಟೋಟವಾಡುತ್ತಿತ್ತು. ಇಂದಿಗೆ ಕುಟುಂಬಗಳು ಚಿಕ್ಕದಾಗಿ ಮಕ್ಕಳ ಮೊಬೈಲ್ ಗೀಳು ಹೆಚ್ಚಾಗಿದೆ. ಈ ರೀತಿಯಲ್ಲಿ ಮಕ್ಕಳನ್ನು ಕೂಡಿಸಿ ಅವರಲ್ಲಿ ಸಂಸ್ಕಾರ ಬೆಳೆಸುವ ಕ್ರಮ ನಿಜಕ್ಕೂ ಶ್ಲಾಘನೀಯ” ಎಂಬುದಾಗಿ ಅಭಿಪ್ರಾಯವಿತ್ತರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗುರು ಹಾವಂಜೆ ಮಂಜುನಾಥ ರಾವ್‌ ವಹಿಸಿದ್ದರಲ್ಲದೇ ಅತಿಥಿಗಳಾದ ಬ್ರಹ್ಮಾವರ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಮುಕ್ತಾ ಬಾಯಿ, ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರತ್ನಾಕರ ಮೊಗವೀರ, ಬಾಳೆಬೈಲು ಸರಕಾರೀ ಪ್ರಾಥಮಿಕ ಶಾಲೆಯ ಉಪನ್ಯಾಸಕಿ ಶಾರದಾ ನಾಯಕ್‌ ಉಪಸ್ಥಿತರಿದ್ದರು. ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ ಕಾರ್ಯಕ್ರಮ ನಿರ್ವಹಿಸಿ, ವಿದುಷಿ ಅಕ್ಷತಾ ವಿಶು ರಾವ್ ಸನ್ಮಾನಪತ್ರ ವಾಚಿಸಿ, ವಿಶುರಾವ್ ಹಾವಂಜೆ ಧನ್ಯವಾದಗೈದರು.

    award baikady camp felicitation roovari
    Share. Facebook Twitter Pinterest LinkedIn Tumblr WhatsApp Email
    Previous Articleಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲೂಕು ಘಟಕದಿಂದ 40ನೇ ಸಾಹಿತ್ಯ ಪಯಣ ಹೆಜ್ಜೆ
    Next Article ಬೆಂಗಳೂರಿನ ಕಲಾಗ್ರಾಮದಲ್ಲಿ ‘ದೃಶ್ಯ ನಾಟಕೋತ್ಸವ’ | ಮೇ 20
    roovari

    Add Comment Cancel Reply


    Related Posts

    ‘ಕೀರ್ತನಾರೋಹಣ’ ಕರ್ನಾಟಕ ಶಾಸ್ತ್ರೀಯ ಸಂಗೀತದ ಸರಣಿ ಕಾರ್ಯಕ್ರಮ

    May 18, 2026

    ಸುರತ್ಕಲ್ಲಿನ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ‘ಶ್ರೀ ಕೃಷ್ಣ ತುಲಾಭಾರ’ ಕಥಾಕೀರ್ತನ | ಮೇ 20

    May 18, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ದೃಶ್ಯ ನಾಟಕೋತ್ಸವ’ | ಮೇ 20

    May 18, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲೂಕು ಘಟಕದಿಂದ 40ನೇ ಸಾಹಿತ್ಯ ಪಯಣ ಹೆಜ್ಜೆ

    May 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.