Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    ಪುತ್ತೂರಿನ ‘ಬಹುವಚನಂ’ ಸಭಾಂಗಣದಲ್ಲಿ ಅದ್ಭುತವಾಗಿ ಸಂಪನ್ನಗೊಂಡ ಸಂಗೀತ ಕಛೇರಿ

    May 23, 2025

    ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 24

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಪುವಿನಲ್ಲಿ ವಿಶ್ವಕರ್ಮ ಜಯಂತಿ ಹಾಗೂ ಕಲಾ ಸಾಧಕರಿಗೆ ಸಮ್ಮಾನ
    Awards

    ಕಾಪುವಿನಲ್ಲಿ ವಿಶ್ವಕರ್ಮ ಜಯಂತಿ ಹಾಗೂ ಕಲಾ ಸಾಧಕರಿಗೆ ಸಮ್ಮಾನ

    September 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಪು : ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ವತಿಯಿಂದ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ ಮತ್ತು ಕಾಪು ವಿಧಾನಸಭಾ ಕ್ಷೇತ್ರ ವಿಶ್ವಬ್ರಾಹ್ಮಣ ಯುವ ಸಂಘಟನೆಯ ಆಶ್ರಯದಲ್ಲಿ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿಯನ್ನು ದಿನಾಂಕ 17-09-2023ರಂದು ಆಚರಿಸಲಾಯಿತು.
    ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಸಾಧಕರನ್ನು ಸನ್ಮಾನಿಸಿದರು. ಕಾಪು ತಹಶೀಲ್ದಾರ್ ನಾಗರಾಜ್ ವಿ.ನಾಯ್ಕಡ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುರುಡೇಶ್ವರದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಚೇಂಪಿ ದಿನೇಶ್ ಆಚಾರ್ಯ ಉಪನ್ಯಾಸ ನೀಡಿದರು.
    ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮುಕ್ತೇಸರ ಶೇಖರ ಆಚಾರ್ಯ, ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರ ನವೀನ್ ಆಚಾರ್ಯ ಪಡುಬಿದ್ರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಕಾಪು ವಿಶ್ವ ಬ್ರಾಹ್ಮಣ ಯುವ ಸಂಘಟನ ಅಧ್ಯಕ್ಷ ಸುಧಾಕರ ಆಚಾರ್ಯ ಬಿಳಿಯಾರು, ನಿವೃತ್ತ ತಹಶೀಲ್ದಾರ್ ಕೆ.ಮುರಳೀಧರ್, ಕಾಪು ಉಪ ತಹಶೀಲ್ದಾರ್ ರವಿಕಿರಣ್, ಪ್ರಭಾರ ಕಂದಾಯ ನಿರೀಕ್ಷಕ ಅರುಣ್‌ ಕುಮಾರ್ ಉಪಸ್ಥಿತರಿದ್ದರು.
    ಇದೇ ಸಂದರ್ಭದಲ್ಲಿ ಪಂಚಶಿಲ್ಪ ವೃತ್ತಿಯ ಶಿಲ್ಪಿಗಳಾದ ಶ್ರೀನಿವಾಸ ಆಚಾರ್ಯ ಬಿಳಿಯಾರು, ಹರೀಶ್ ಆಚಾರ್ಯ ಮಜೂರು, ವಿಷ್ಣುಮೂರ್ತಿ ಆಚಾರ್ಯ ಬಂಟಕಲ್ಲು, ರಾಘವೇಂದ್ರ ಆಚಾರ್ಯ ಎಲ್ಲೂರು ಹಾಗೂ ಮಂಜುನಾಥ ಆಚಾರ್ಯ ಎರ್ಮಾಳು ಅವರನ್ನು ಸಮಾಸಲಾಯಿತು.
    ಕಾಪು ಕಾಳಿಕಾಂಬಾ ದೇವಸ್ಥಾನದ ಎರಡನೇ ಮುಕ್ತೇಸರ ಗಣೇಶ ಆಚಾರ್ಯ ಉಚ್ಚಿಲ ಸ್ವಾಗತಿಸಿ, ತೃಷಾ ವ೦ದಿಸಿದರು. ರಾಜೇಶ್ ಆಚಾರ್ಯ ಬಿಳಿಯಾರು, ಗಂಗಾಧರ ಆಚಾರ್ಯ ದಿಂಡಿಬೆಟ್ಟು ಹಾಗೂ ರತ್ನಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ಲೋಕದಿಂದ ನೇಪಥ್ಯಕ್ಕೆ ಸರಿದ ಗುರು ಸರೋಜಾ ವೈದ್ಯನಾಥನ್
    Next Article ನಾಪೋಕ್ಲುವಿನಲ್ಲಿ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ
    roovari

    Add Comment Cancel Reply


    Related Posts

    ಉಡುಪಿಯ ರವೀಂದ್ರ ಮಂಟಪದಲ್ಲಿ ‘ಸಾಮರಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ | ಮೇ 24

    May 23, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications