Subscribe to Updates

    Get the latest creative news from FooBar about art, design and business.

    What's Hot

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೇಷ್ಠ ಕಲಾವಿದ ವಿಠ್ಠಲ ರಾಮಮೂರ್ತಿಯವರಿಗೆ ಅಮೆರಿಕದ ಗೌರವ – ನವೆಂಬರ್ 5ಕ್ಕೆ ‘ವಿಠ್ಠಲ ರಾಮಮೂರ್ತಿ ದಿನ’
    Awards

    ಶ್ರೇಷ್ಠ ಕಲಾವಿದ ವಿಠ್ಠಲ ರಾಮಮೂರ್ತಿಯವರಿಗೆ ಅಮೆರಿಕದ ಗೌರವ – ನವೆಂಬರ್ 5ಕ್ಕೆ ‘ವಿಠ್ಠಲ ರಾಮಮೂರ್ತಿ ದಿನ’

    November 24, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಅರಿಜೋನಾ : ಅಮೆರಿಕದ ಟೆಂಪಿ ಅರಿಜೋನಾ ನಗರದಲ್ಲಿ ನವೆಂಬರ್ 5ನ್ನು ವಿಠ್ಠಲ ರಾಮಮೂರ್ತಿ ದಿನ’ ಎಂದು ಘೋಷಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಶ್ರೇಷ್ಠ ಕಲಾವಿದರಾಗಿ ಹಾಗೂ ಗುರುವಾಗಿ ವಿಠ್ಠಲ ರಾಮಮೂರ್ತಿ ಅವರು ನೀಡಿರುವ ಜೀವಮಾನದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಟೆಂಪಿ ಅರಿಜೋನಾ ನಗರದ ಮೇಯರ್ ಕೋರಿ ವುಡ್ಸ್ ಅವರು ಈ ಗೌರವವನ್ನು ನೀಡಿ ಅಭಿನಂದಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕನ್ನಡಿಗ, ಅಂತರರಾಷ್ಟ್ರೀಯ ಖ್ಯಾತಿಯ ಈ ವಯಲಿನ್ ಸಾಧಕ ಮೂಲತಃ ಧರ್ಮಸ್ಥಳ ಸಮೀಪದ ನಿಡ್ಲೆಯವರು. ಚೆನ್ನೈಯ ನಿವಾಸಿಯಾಗಿರುವ ಅವರು ಆಕಾಶವಾಣಿಯ ಉನ್ನತ ಶ್ರೇಣಿಯ ಕಲಾವಿದರು. ವಯಲಿನ್ ಮಾಂತ್ರಿಕ ಲಾಲ್ಗುಡಿ ಜಯರಾಮನ್ ಅವರ ಪಟ್ಟ ಶಿಷ್ಯ. ಭಾರತ ಹಾಗೂ ವಿದೇಶಗಳಲ್ಲಿ 6,000ಕ್ಕೂ ಹೆಚ್ಚು ಸಂಗೀತ ಕಛೇರಿಗಳನ್ನು ನೀಡಿರುವ ವಿಠ್ಠಲ ರಾಮಮೂರ್ತಿ ಶ್ರೇಷ್ಠ ಸಂಗೀತ ಗುರುಗಳೂ ಹೌದು. ಅವರ ಗರಡಿಯಲ್ಲಿ ಪಳಗಿದ ಅನೇಕ ಶಿಷ್ಯರು ವಿಶ್ವದಾದ್ಯಂತ ಕರ್ನಾಟಕ ಶಾಸ್ತ್ರೀಯ ಸಂಗೀತದ ಕಂಪನ್ನು ಪಸರಿಸುತ್ತಿದ್ದಾರೆ.

    ನಿಡ್ಲೆಯಲ್ಲಿರುವ ಅವರ ಮೂಲ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ’ ಎನ್ನುವ ಸಂಗೀತ ಶಿಬಿರವನ್ನು ಕಳೆದ 20 ವರ್ಷಗಳಿಂದ ನಿರಂತರವಾಗಿ ನಡೆಸುತ್ತ ಬರುತ್ತಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತದ ಶ್ರೇಷ್ಠ ವಿದ್ವಾಂಸರನ್ನು ಈ ಪುಟ್ಟ ಹಳ್ಳಿಗೆ ಕರೆಸಿ ಅವರಿಂದ ವಿದ್ಯಾರ್ಥಿಗಳಿಗೆ ಸಂಗೀತದ ಪಾಠ ಹೇಳಿಸುತ್ತಿದ್ದಾರೆ. ಗುರುಕುಲ ಮಾದರಿಯ ಈ ಉಚಿತ ಶಿಬಿರ ವಿಶ್ವದಾದ್ಯಂತ ಹೆಸರಾಗಿದೆ. ಪ್ರತೀ ವರ್ಷ ಭಾರತ, ಅಮೆರಿಕ ಸೇರಿದಂತೆ ವಿವಿಧ ದೇಶಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಳಗಾವಿಯಲ್ಲಿ ‘ಕನ್ನಡದ ದೀಪ: ಡಾ. ಡಿ.ಎಸ್. ಕರ್ಕಿ’ ವಿಶೇಷ ಉಪನ್ಯಾಸ ಕಾರ್ಯಕ್ರಮ
    Next Article ಸಂಸ್ಕಾರ ಭಾರತೀ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ | ನವೆಂಬರ್ 25
    roovari

    Add Comment Cancel Reply


    Related Posts

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.