Subscribe to Updates

    Get the latest creative news from FooBar about art, design and business.

    What's Hot

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    ಖ್ಯಾತ ರಂಗಕರ್ಮಿ ಕೃಷ್ಣಮೂರ್ತಿ ಕವತ್ತಾರ್ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ

    January 26, 2026

    ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ -2026 | ಫೆಬ್ರವರಿ 22

    January 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ‘ವಿವೇಕ ಜಾಗೃತಿ’ – ‘ನನ್ನ ಏಳಿಗೆಗೆ ನಾನೇ ಶಿಲ್ಪಿ’ ಉಪನ್ಯಾಸ ಕಾರ್ಯಕ್ರಮ
    Literature

    ಪುತ್ತೂರಿನಲ್ಲಿ ‘ವಿವೇಕ ಜಾಗೃತಿ’ – ‘ನನ್ನ ಏಳಿಗೆಗೆ ನಾನೇ ಶಿಲ್ಪಿ’ ಉಪನ್ಯಾಸ ಕಾರ್ಯಕ್ರಮ

    August 16, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ರಾಮಕೃಷ್ಣ ಮಿಷನ್‌ ಮಂಗಳಾದೇವಿ ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಮಂಗಳಗಂಗೋತ್ರಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಸಹಯೋಗದೊಂದಿಗೆ ‘ನನ್ನ ಏಳಿಗೆಗೆ ನಾನೇ ಶಿಲ್ಪಿ’ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 14 ಆಗಸ್ಟ್‌ 2024ರಂದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆ ಮೈಸೂರು ಇದರ ಮುಖ್ಯಸ್ಥರಾದ ಸ್ವಾಮಿ ಮಹಾಮೇಧಾನಂದಜಿ ಮಾತನಾಡಿ “ನಾವು ಬದುಕುವ ಪ್ರತಿಕ್ಷಣವೂ ಕೂಡ ನಮ್ಮ ಭವಿಷ್ಯತ್ತನ್ನು ನಿರ್ಧಾರ ಮಾಡುತ್ತಾ ಹೋಗುತ್ತದೆ. ನಮ್ಮ ಯೋಚನಾ ಶಕ್ತಿಯು ನಮ್ಮ ಜ್ಞಾನದ ವಿಸ್ತಾರವನ್ನು ತಿಳಿಸುತ್ತದೆ. ಆದುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಅವನ ಭವಿಷ್ಯವನ್ನು ರೂಪಿಸುವಲ್ಲಿ ಕಾರ್ಯಮಗ್ನನಾಗಬೇಕಿದೆ. ಕಲಿಕೆ ಎಂಬುದು ವಿದ್ಯಾರ್ಥಿಗಳಿಗೆ ಸೀಮಿತವಾಗಬೇಕಿಲ್ಲ, ಜೀವನಪರ್ಯಂತ ನಿರಂತರವಾದ ಜ್ಞಾನಾರ್ಜನೆಗೆ ಸರ್ವರಿಗೂ ಅವಕಾಶವಿದೆ. ಸತ್ಯದ ಪರಿಪಾಲನೆ, ಆತ್ಮಸಂಯಮ, ಪರೋಪಕಾರ ಈ ಮೂರು ಆದರ್ಶಗಳನ್ನು ನಾವು ಪರಿಪಾಲಿಸಿದಲ್ಲಿ ನಮ್ಮ ಏಳಿಗೆಗೆ ನಾವೇ ಶಿಲ್ಪಿಗಳಾಗುತ್ತೇವೆ.” ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸತೀಶ್ ರಾವ್‌ ಉಪಾಧ್ಯಕ್ಷರು ಆಡಳಿತ ಮಂಡಳಿ, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರು ಮಾತನಾಡುತ್ತಾ, “ಭಾರತೀಯ ಶಿಕ್ಷಣದ ಮೂಲತತ್ವ ಸಂಸ್ಕಾರದೊಂದಿಗೆ ಶಿಕ್ಷಣ ನೀಡುವುದಾಗಿದೆ. ಭಾರತೀಯ ಸನಾತನ ಸಂಸ್ಕೃತಿ, ಆಧ್ಯಾತ್ಮಿಕತೆ ಇವುಗಳಿಗೆ ಪೋಷಣೆಯನ್ನು ಒದಗಿಸುತ್ತದೆ. ಸ್ವಾಮಿ ವಿವೇಕಾನಂದರಂತಹ ಧೀಮಂತ ವ್ಯಕ್ತಿಯ ತತ್ವ ಸಿದ್ದಾಂತಗಳನ್ನು ಅರ್ಥೈಸಿಕೊಂಡು, ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ” ಎಂದು ನುಡಿದರು.

    ಕಾರ್ಯಕ್ರಮದ ವೇದಿಕೆಯಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್‌ ರಾವ್‌, ಡಾ. ಚಂದ್ರು ಹೆಗ್ಡೆ ಸಂಯೋಜಕರು, ಮಂಗಳೂರು ವಿಶ್ವವಿದ್ಯಾಲಯಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಮಂಗಳಗಂಗೋತ್ರಿ ಮಂಗಳೂರು ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಹಾಗೂ ಸದಸ್ಯರಾದ ಡಾ. ಕೆ.ಎನ್ ಸುಬ್ರಹ್ಮಣ್ಯ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯರ್ಥಿ್ಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಉಪನ್ಯಾಸಕಿ ಶೀತಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಸುಪ್ರಭಾ ಕಲ್ಕೂರ್ ಇವರ ನೃತ್ಯ ಪ್ರದರ್ಶನ | ಆಗಸ್ಟ್ 19
    Next Article ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ | ಆಗಸ್ಟ್ 17
    roovari

    Comments are closed.

    Related Posts

    ಖ್ಯಾತ ರಂಗಕರ್ಮಿ ಕೃಷ್ಣಮೂರ್ತಿ ಕವತ್ತಾರ್ ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ

    January 26, 2026

    ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ -2026 | ಫೆಬ್ರವರಿ 22

    January 26, 2026

    ಉಡುಪಿಯ ಶ್ರೀ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಕೃತಿ ಲೋಕರ್ಪಣಾ ಸಮಾರಂಭ | ಜನವರಿ 29

    January 26, 2026

    ಪುಸ್ತಕ ವಿಮರ್ಶೆ | ನಾ. ಮೊಗಸಾಲೆಯವರ ‘ನೆಲ ಮುಗಿಲುಗಳ ಮಧ್ಯೆ’

    January 26, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.