Subscribe to Updates

    Get the latest creative news from FooBar about art, design and business.

    What's Hot

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ನಾವಿನ್ಯ- 2024”
    Cultural

    ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ನಾವಿನ್ಯ- 2024”

    June 24, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ. ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನಾಚರಣೆ “ವಿವೇಕ ನಾವಿನ್ಯ -2024” ಕಾರ್ಯಕ್ರಮವು ದಿನಾಂಕ 22-06-2024 ರಂದು ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳುನಾಡ ಮಾಣಿಕ್ಯ ಖ್ಯಾತಿಯ ಚಲನಚಿತ್ರ ನಟ ಅರವಿಂದ ಬೋಳಾರ್‌ ಮಾತನಾಡಿ
    “ಪ್ರತಿಭೆ ಎನ್ನುವುದು ಭಗವಂತ ನೀಡಿದ ವರ. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಸುಪ್ತವಾಗಿ ಅಡಕವಾಗಿರುತ್ತದೆ. ಅಂತರ್ಗತವಾಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತವಾದ ವೇದಿಕೆಯ ಅವಶ್ಯಕತೆಯಿದೆ. ಸಂಪತ್ತು ಎಂದಿಗೂ ಶಾಶ್ವತವಲ್ಲ. ಕಲಿತ ವಿದ್ಯೆ ಮಾತ್ರ ಶಾಶ್ವತವಾಗಿರುತ್ತದೆ. ವಿದ್ಯಾರ್ಥಿಗಳು ವಿದ್ಯೆಯ ಮಹತ್ವವನ್ನರಿತು ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮಾತಾಪಿತರಿಗೆ ನೀಡುವ ಗೌರವ ವಿದ್ಯೆ ಕಲಿಸುವ ಗುರುವಿಗೂ ಸಲ್ಲಬೇಕು, ಆಗಲೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಲು ಸಾಧ್ಯ. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸನ್ಮಾನಿಸುವುದು ಅತ್ಯಂತ ಉತ್ತಮವಾದ ಕೆಲಸ.” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾರಾಜ್ಞಿ ಮಾತನಾಡಿ “ಯುವಜನತೆಗೆ ಧನಸಂಪಾದನೆಯ ಜತೆಗೆ ಸಮಯದ ಸದುಪಯೋಗದ ಅರಿವು ಮುಖ್ಯ. ಮನೋಬಲದಿಂದ ಎಲ್ಲವೂ ಸಾಧ್ಯ. ವಿದ್ಯಾರ್ಥಿಗಳ ಯೋಚನೆ ಕೇವಲ ವಿದ್ಯಾರ್ಜನೆಗೆ ಸೀಮಿತವಾಗದೆ, ಇತರ ಕಲೆಗಳನ್ನು ಕರಗತಗೊಳಿಸುವತ್ತ ಹರಿಯಬೇಕು. ಗುರಿಯ ಸ್ಪಷ್ಟತೆ ಇರಲಿ, ಸಾಧಿಸುವ ಛಲವಿರಲಿ.” ಎಂಬ ಸಂದೇಶವನ್ನಿತ್ತರು.
    ಸಭಾ ಕಾರ್ಯಕ್ರಮದಲ್ಲಿ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಪ್ರಥಮ ಪಿ. ಯು. ಸಿ. ಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ಅತಿಥಿಗಳಾದ ಅರವಿಂದ ಬೋಳಾರ್‌ ಇವರಿಗೆ ಪ್ರಥಮ ಪಿ. ಯು. ಸಿ. ವಿದ್ಯಾರ್ಥಿನಿ ರಮ್ಯಾ ಬರೆದ ಪೆನ್ಸಿಲ್‌ ಚಿತ್ರವನ್ನು ನೀಡಿ ಸನ್ಮಾನಿಸಲಾಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್‌ ಶೆಣೈ, ಸದಸ್ಯರಾದ ಡಾ. ಕೆ. ಎನ್. ಸುಬ್ರಹ್ಮಣ್ಯ, ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು. ಸಭಾಕಾರ್ಯಕ್ರಮದ ಬಳಿಕ ಪ್ರಥಮ ಪಿ. ಯು. ಸಿ.ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಭಾಗ್ಯಶ್ರೀ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಉಪನ್ಯಾಸಕಿ ದಯಾಮಣಿ ನಿರೂಪಿಸಿ, ನಳಿನಿ ಕುಮಾರಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಎಸ್.ಎಂ.ಎಸ್. ಶಾಲಾ ಸಭಾಂಗಣದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ | ಜೂನ್ 27
    Next Article ಪ್ರೊ. ಸಿ.ಜಿ.ಕೆ.ಯವರ ಜನ್ಮದಿನದ ಸವಿನೆನಪಿನಲ್ಲಿ ನಾಟಕ ಪ್ರದರ್ಶನ ಮತ್ತು ರಂಗ ಗೌರವ | ಜೂನ್ 27
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026

    ಎನ್.ಐ.ಟಿ.ಕೆ.ಯಲ್ಲಿ ‘ವಿರಾಸತ್’ ಸಂಗೀತ, ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ | ಫೆಬ್ರುವರಿ 4ರಿಂದ 8  

    February 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.